ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ. ಸಂಘಟನೆ ಬಲಗೊಳಿಸಲು ಶ್ರಮವಹಿಸಬೇಕು:ರೋಝಿ ಜಾನ್‌

ಕುಂದಾಪುರ,ಡಿ20: “ಕರ್ನಾಟಕದ ಜನ ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯುವ ಮನಸ್ಸಿನಲ್ಲಿದ್ದಾರೆ ಜನ ಬದಲಾವಣೆ ಬಯಸುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಸಂಘಟನೆಯನ್ನು ಬಲಗೊಳಿಸಲು ಶ್ರಮವಹಿಸಬೇಕಾಗಿದೆ” ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿ ಝೋಝಿ  ಜಾನ್‌ ಹೇಳಿದರು.

ಅವರು ಇಲ್ಲಿನ ಆರ್‌.ಎನ್‌. ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನೆ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್‌ ಪಕ್ಷದ ಎದುರು ಕಠಿಣ ಸವಾಲುಳಿದ್ದು ಎಲ್ಲವನ್ನೂ ಚುನಾವಣೆಯಲ್ಲಿಯಲ್ಲಿ ಗೆಲುಪು ಸಾಧಿಸುವ ಹೊಣೆಗಾರಿಕೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್‌ ಜಯ ನಿಶ್ಚಿತವಾಗಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಉಡುಪಿ ಜಿಲ್ಲಾ ಉಸ್ತುಪಾರಿ ಆರ್‌. ಧವನಾರಯಣ ಮಾತನಾಡಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು.ಎಂದರು.

ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಸನ್ನ ಕುಮಾರ್‌ ಶಟ್ಟಿ, ಕೋಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ ಕುಂದರ್‌,  ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳಾದ ಸತೀಶ್‌ ಕಿಣಿ ಬೆಳ್ವೆ, ಬಿ. ಹಿರಿಯಣ್ಣ, ಸದಾನಂದ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮುಸ್ತಾಕ್‌ ಅಹಮದ್‌ ಬೆಳ್ಳೆ, ಬಾಲಕೃಷ್ಣ ಪೂಜಾರಿ, ವಿಕಾಸ: ಹೆಗ್ಳ, ಮುರಳಿ ಶೆಟ್ಟಿ ಉಡುಪಿ, ಚುನಾವನೆಗೆ ಅರ್ಜಿ ಸಲ್ಲಿಸಿದ ದಿನೇಶ್‌ ಹೆಗ್ಡೆ ಎಂ., ಅಶೋಕ್‌ ಪೂಜಾರಿ ಬೀಜಾಡಿ, ಶ್ಯಾಮಲಾ ಭಂಡಾರಿ, ಕಿಶನ್‌ ಹೆಗ್ಡೆ ಕೆ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಯುವ ಕಾಂಗ್ರೆಸ್‌ ಅಧ್ಯಕ್ಷ ಇಚ್ಛಿತಾರ್ಥಶೆಟ್ಟಿ, ಸುನಿಲ್‌, ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಅಜಿತ್‌ ಕುಮಾರ ಶೆಟ್ಟಿ, ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಸೌರಭ್‌ ಬಲ್ಲಾಳ್‌, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಫಾರೂಕ್‌ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ ಕೊಡವೂರು ಪ್ರಸ್ತಾವಿಸಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಶಕ್ಕಿ ಸ್ವಾಗತಿಸಿ, ಕಾರ್ಯದರ್ಶಿವಿನೋದ್‌ ಕ್ರಾಸ್ಟೊ ನಿರ್ವಹಿಸಿದರು