ಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿ

ಕುಂದಾಪುರ : ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಯಲ್ಲಿ ನಿರತರಾಗಿರುವ ಕುಂದಾಪುರದ ಪ್ರತಿಷ್ಠಿತ ಡಾ|ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀ
ಚೇತನ್ ಶೆಟ್ಟಿ ಕೊವಾಡಿಯವರಿಗೆ ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಯುವ ರತ್ನ ಪ್ರಶಸ್ತಿಯನ್ನು ಜ.12 ರಂದು ವಿವೇಕಾನಂದ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕುಂದಾಪುರದ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಅತಿಥಿಗಳಾಗಿ ಕುಂದಾಪುರ ಸಿಟಿ ಜೆ ಸಿ ಐ ನ ಅಭಿಲಾಶ್ ಬಿ. ಎ, ಜೆ ಸಿ ಐ ನ ರಾಘವೇಂದ್ರ ಕುಲಾಲ್, ಪ್ರಶಾಂತ್ ಹವಾಲ್ದಾರ್, ಗಿರೀಶ್ ಹೆಬ್ಬಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕುಂದಾಪುರ ಸಿಟಿ ಜೆಸಿಐನ ಅಧ್ಯಕ್ಷ ಸೋನಿ ಡಿ. ಕೋಸ್ಟಾ ಸ್ವಾಗತಿಸಿದರು . ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಪ್ರಸ್ತಾವಿಸಿದರು. ಕುಂದಾಪುರ ಸಿಟಿ ಜೆಸಿಐನ ಮಹಿಳಾ ಸಂಚಾಲಕಿ ಪ್ರೇಮಾ ಸನ್ಮಾನಿತರನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕೀರ್ತಿ ಪ್ರಾರ್ಥಿಸಿ,ಕನ್ನಡ ಉಪನ್ಯಾಸಕಿ ಪ್ರವೀಣ ಎಂ ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು