ಚಾಕಪ್ಪಲ್ಲಿ ಗ್ರಾಮದ ಸಮೀಪ ಚಲಿಸುತ್ತಿದ್ದ ಕಾರು ಆಯತಪ್ಪಿ ಹಳ್ಳಕ್ಕೆ ಬಿದ್ದು ದಂಪತಿಯ ಸಾವು

ಶ್ರೀನಿವಾಸಪುರ: ತಾಲ್ಲೂಕಿನ ಚಾಕಪ್ಪಲ್ಲಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ ಚಲಿಸುತ್ತಿದ್ದ ಕಾರೊಂದು ಆಯತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮವಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಆಂಧ್ರಪ್ರದೇಶದ ಮದನಪಲ್ಲಿಯ ಶೇಖ್ ಷಫಿವುಲ್ಲಾ (62), ಶಾಹೀನಾ ಬೇಗಂ (55) ಮೃತರು. ಅವರು ತಮ್ಮ ಮಗಳನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಿಟ್ಟಿ ಹಿಂದಿರುಗುವಾಗ ಘಟನೆ ನಡೆದಿದೆ. ಮೃತ ದೇಹಗಳನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಡಿವೈಎಸ್‍ಪಿ ಜಯಶಂಕರ್, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ದಯಾನಂದ, ಗೌನಿಪಲ್ಲಿ ಠಾಣೆ ಪೊಲೀಸ್ ಠಾಣೆ ಸಬ್ ಇನ್ಸ್‍ಪೆಕ್ಟರ್ ರಾಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.