ಹಸಿರು ಕ್ರಾಂತಿಗೆ ರಾಷ್ಟ್ರದ ಮಾಜಿ ಹಂಗಾಮಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ

ಶ್ರೀನಿವಾಸಪುರ: ಹಸಿರು ಕ್ರಾಂತಿಗೆ ರಾಷ್ಟ್ರದ ಮಾಜಿ ಹಂಗಾಮಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ ಕೊಡುಗೆ ಅಪಾರ. ಅವರು ತಮ್ಮ ಸಾಮಾಜಿಕ ಬದ್ಧತೆಯಿಂದಾಗಿ ಸಮಾಜದ ಎಲ್ಲ ಸಮುದಾಯಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ದಲಿತ ಮುಖಂಡ ಸೀತಪ್ಪ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಡಾ. ಬಾಬು ಜಗಜೀವನ್ ರಾಂ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಂ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಡಾ. ಬಾಬು ಜಗಜೀವನ್ ರಾಂ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶಿವಕುಮಾರ್, ರಾಜೇಶ್, ದಲಿತ ಸಂಘಟನೆಗಳ ಮುಖಂಡರಾದ ಶಂಕರ್, ರಾಮಕೃಷ್ಣ, ಎಂ.ವೆಂಕಟೇಶ್, ಭಾವನ ಇದ್ದರು.