ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ‘ ವಿಶ್ವ ಭೂಮಿಯ ದಿನಾಚರಣೆ’


ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಭೂಮಿಯ ದಿನಾಚರಣೆಯನ್ನು ಆಚರಿಸಲಾಯಿತು.
ಭೂಮಿಯ ದಿನವು ಪರಿಸರ ಸಂರಕ್ಷಣೆಗೆ ಬೆಂಬಲವನ್ನು ಪ್ರದರ್ಶಿಸಲು ,ಹಸಿರು ಜೀವನ ಮತ್ತು ಹವಾಮಾನ ಬಿಕ್ಕಟ್ಟನ್ನು ಎದುರಿಸುವುದರ ಮೇಲೆ ಕೇಂದ್ರೀಕೃತವಾಗಿವೆ. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ ಎಂದು ಮುಖ್ಯ ಅತಿಥಿಯಾಗಿ ಕಾಲೇಜಿನ ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಪ್ರಕಾಶ್ ರವರು ಮಾತನಾಡಿದರು.

ಪರಿಸರ ಸಂರಕ್ಷಣೆಯು ಪರಿಸರದ ಗುಣಮಟ್ಟವನ್ನು ಸುಧಾರಿಸುವುದು, ರಕ್ಷಿಸುವುದು ಮತ್ತು ನಿರ್ವಹಿಸುವುದು. ಮರುಬಳಕೆ, ಹಸಿರು ಶಕ್ತಿ ಉತ್ಪಾದನೆ, ಹಸಿರು ಸಾರಿಗೆ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿ ಕೈಗಾರಿಕೀಕರಣದಂತಹ ಕೆಲವು ವಿಧಾನವನ್ನು ಸಮರ್ಪಕವಾಗಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಪರಿಸರ ರಕ್ಷಣೆಯಲ್ಲಿ ಕೈಜೋಡಿಸಬೇಕು ಬೇಕೆಂದು ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ, ಇಂತಹ ಒಂದು ಒಳ್ಳೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕಾಲೇಜಿನ ಎನ್ ಸಿ ಸಿ ಘಟಕವನ್ನು ಶ್ಲಾಘಿಸಿದರು.
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕೆಡೆಟ್ ಪುಣ್ಯ ಎಚ್ ಆರ್ ಕಾರ್ಯಕ್ರಮದ ಮುಖ್ಯ ಉದ್ದೇಶ ಮತ್ತು ಪ್ರಾಮುಖ್ಯತೆಯನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕೆಡೆಟ್ಗಳಾದ ಪೂಜಾ, ಲಾಯ್ ವಿನ್ಸ್ಟನ್ ಫರ್ನಾಂಡಿಸ್,ಅನುಪ್ ನಾಯಕ, ಅಲಿಸ್ಟಾರ್ ಸುಜಯ್ ಡಿಸೋಜಾ ರವರನ್ನು ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್, ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು. ಕೆಡೆಟ್ ವಿಶಾಲ್ ಟೆರೆನ್ಸ್ ವಾಜ್ ಸಹಕರಿಸಿ, ಜಿಯಾ ಸಿ ಪೂಜಾರಿ ಸ್ವಾಗತಿಸಿದರು. ಕೆಡೆಟ್ ಸೋನಾಲಿ ಕುಲಾಲ್ ಕಾರ್ಯಕ್ರಮ ನಿರೂಪಿಸಿ,ಮನೀಶ್ ಕರ್ಕೇರ ಶಿವಾನಂದ ವಂದಿಸಿದರು.