ಫಾದರ್ ಮುಲ್ಲರ್ ಹೋಮಿಯೋಪಥಿ ಮಹಾವಿದ್ಯಾಲಯ, ದೇರಳಕಟ್ಟೆಯಲ್ಲಿ‘ ವಿಶ್ವ ಹೋಮಿಯೋಪಥಿ ದಿನಾಚರಣೆ’


ಹೋಮಿಯೋಪಥಿ ಜನಕ ಡಾಕ್ಟರ್ ಸ್ಯಾಮ್ಯುಯೆಲ್ ಹಾನ್ನಿಮನ್ನರ 268ನೇ ಜನ್ಮ ದಿನದ ನೆನಪಿಗಾಗಿ ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ದಿನಾಂಕ 19.04.2023 ರಂದು ವಿಶ್ವ ಹೋಮಿಯೋಪಥಿ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಪರ್ಯಾಯ ವೈದ್ಯಕೀಯ ವ್ಯವಸ್ಥೆ ಮತ್ತು ವೈದ್ಯಕೀಯ ಜಗತ್ತಿಗೆ ಅದರ ಕೊಡುಗೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಗುರಿಯಾಗಿದೆ.
ಮುಖ್ಯ ಅತಿಥಿಗಳಾದ ಆಯುಷ್ ವಿಭಾಗ ಬೆಂಗಳೂರು ಇದರ ಉಪನಿರ್ದೇಶಕರಾದ ಡಾ.ಅಶ್ವತ್ ನಾರಾಯಣರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೌರವಾನ್ವಿತ ಅತಿಥಿಗಳಾದ 1998ನೇ ಬ್ಯಾಚ್‍ನ ಹಳೆಯ ವಿದ್ಯಾರ್ಥಿ, ನ್ಯಾಶನಲ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅನಾಟಮಿ ವಿಭಾಗದ ಅಸಿಸ್ಟೆಂಟ್ ಪೆÇ್ರಫೆಸರ್ ಡಾ.ಆನಂಂದ್ ಬಿಹಾರಿ ಸಿಂಗ್, ಕಾರ್ಯಕ್ರಮದ ಅಧ್ಯಕ್ಷರಾದ ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ ರೋಶನ್‍ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದಡಾ. ಇ.ಎಸ್.ಜೆ.ಪ್ರಭುಕಿರಣ್, ಉಪಪ್ರಾಂಶುಪಾಲರಾದ ಡಾ.ವಿಲ್ಮಾ ಮೀರಾ ಡಿ’ಸೋಜ ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ| ಜೋನ್ ಪೌಲ್‍ರವರು ಉದ್ಘಾಟನಾ ಸಮಾರಂಭದಲ್ಲಿ ಜೊತೆಗೂಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ| ಮೊಹಮ್ಮದ್ ಇಕ್ಬಾಲ್, ಹಾಗೂ ಡಾ| ಭಾತ್ರಾಸ್ ಹೋಮಿಯೋಪಥಿ, ಮುಂಬಯಿ ವಲಯದ ಮುಖ್ಯಸ್ಥ ಡಾ ಸಮೀರ್ ಚೌಕರ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳು ಪ್ರತಿಷ್ಟಿತ ‘ಡಾ| ಬಾತ್ರಾರವರು ಪ್ರಾಯೋಜಿಸಿದ ಬಾತ್ರಾ ವಿದ್ಯಾರ್ಥಿವೇತನ’ವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ನಡೆಸಿರುವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳ ಮೂಲಕ ರ್ಯಾಂಕ್ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಾದ ಜಿದ್ದು ಸಾಯಿ ಅಖಿಲ, ಅಸ್ವಥಿ ದಿನೇಶ್ ಹಾಗೂ ಆರ್ದ್ರಾ ಗಣೇಶ್ ಜಿ. ರವರಿಗೆ ವಿತರಿಸಿ, ತಮ್ಮ ಅತಿಥಿ ಭಾಷಣದಲ್ಲಿ ವಿಶ್ವ ಹೋಮಿಯೋಪಥಿ ದಿನಾಚರಣಾ ಸಮಾರಂಭದಲ್ಲಿ ತಮ್ಮ ಉಪಸ್ಥಿತಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು ಹಾಗೂ ವಿದ್ಯಾರ್ಥಿಗಳನ್ನು ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವಂತೆ ಪ್ರೇರೇಪಿಸಿದರು.
ಆಡಳಿತಾಧಿಕಾರಿಯಾದ ವಂದನೀಯ ಫಾದರ್ ರೋಶನ್ ಕ್ರಾಸ್ತಾರವರು ಸಮಾಜಕ್ಕೆ ಹೋಮಿಯೋಪಥಿ ಕ್ಷೇತ್ರದ ವೈದ್ಯರು ನೀಡಿರುವಂತಹ ಸೇವೆಯನ್ನು ಹೊಗಳಿ, ಈ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಯ ಅಗತ್ಯ ಇರುವುದನ್ನು ಮನವರಿಸಿದರು ಹಾಗೂ ಸಮಾರಂಭದಲ್ಲಿ ಭಾಗವಹಿಸಿದ ಗಣ್ಯ ವ್ಯಕ್ತಿಗಳ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಅವರ ಅನುಕರಣೆಯನ್ನು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳುವಂತೆ ಹುರಿದುಂಬಿಸಿದರು.
ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲೊರವರು ತಮ್ಮ ಅಧ್ಯ ಕ್ಷೀಯ ಭಾಷಣದಲ್ಲಿ ನೆರೆದಿರುವ ಎಲ್ಲರಿಗೂ ವಿಶ್ವ ಹೋಮಿಯೋಪಥಿ ದಿನಾಚರಣೆಯ ಶುಭಾಶಯವನ್ನು ನೀಡಿದರು ಹಾಗೂ ಈ ದಿನವನ್ನು ಡಾ.ಸಾಮ್ಯುವೆಲ್ ಹಾನ್ನಿಮನ್ನ್ ಹಾಗೂ ಫಾದರ್ ಅಗಸ್ಟಸ್ ಮುಲ್ಲರ್‍ನಂತಹ ಶ್ರೇಷ್ಟವ್ಯಕ್ತಿಗಳಿಗೆ ಗೌರವ ಸಲ್ಲಿಸಲು ಹಾಗೂ ಅವರಿಂದ ಪ್ರೇರೇಪಣೆಗೊಳ್ಳಲು ಆಚರಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಗೌರವ ಅತಿಥಿ ತಮ್ಮ ಕ್ಲಿನಿಕಲ್ ಅನುಭವನ್ನು ನೆರೆದಿರುವವರೊಂದಿಗೆ ಹಂಚಿಕೊಂಡು ವಿದ್ಯಾರ್ಥಿಗಳನ್ನು ಹೋಮಿಯೋಪಥಿ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು.

ಕಾರ್ಯಕ್ರಮದ ಸಂಯೋಜಕರಾದ ಡಾ| ಜೋನ್ ಪೌಲ್ ವಂದನಾರ್ಪಣೆಗೈದರು.

ವಿಶ್ವ ಹೋಮಿಯೋಪಥಿ ದಿನಾಚರಣೆಯ ಪ್ರಯುಕ್ತ ದಿನಾಂಕ 18.04.2023 ಹಾಗೂ 19.04.2023 ರಂದು ವಿವಿಧ ಸಾಹಿತ್ಯ ಸ್ಪರ್ದೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಬಹುಮಾನವನ್ನು ನೀಡಿ ಸನ್ಮಾನಿಸಲಾಯಿತು. ಡಾ. ರೆನಿಟಾ ಡಿ’ಸೋಜ ಹಾಗೂ ಡಾ. ವಿಗ್ನೇಶ್ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.