ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 600ಕ್ಕೂ ಅರ್ಹ ವಿದ್ಯಾರ್ಥಿ ಸಹಾಯಧನ


ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದಿರುವ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮ ಜೂನ್ 19ರಂದು ನಡೆಯಲಿದೆ.
ಕುಂದಾಪುರ-ಬೈಂದೂರು ತಾಲ್ಲೂಕಿನ ವ್ಯಾಪ್ತಿಗೆ ಬರುವ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಸಹಾಯಧನಕ್ಕಾಗಿ ಅಧಿಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು “ಕುಂದಪ್ರಭ”, ಶ್ರೀ ನಾರಾಯಣಗುರು ಕಾಂಪ್ಲೆಕ್ಸ್, ವೆಸ್ಟ್ ಬ್ಲಾಕ್ ರಸ್ತೆ, ಕುಂದಾಪುರ. (9448120765) ಇಲ್ಲಿ ಪಡೆದು ಜೂನ್ 8ರೊಳಗೆ ನೀಡಬೇಕು ಎಂದು ಕಾರ್ಯದರ್ಶಿ ಯು. ಎಸ್. ಶೆಣೈ ತಿಳಿಸಿದ್ದಾರೆ