ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ, ಸಂತ ಜೋಸೆಫರ ಪ್ರೌಢಶಾಲೆಯ ಪ್ರಸ್ತುತ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಎಂ ಸಿ ಸಿ ಬ್ಯಾಂಕ್ ಇವರು 02-06-2023 ರಂದು ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಂ. ಸಿ. ಸಿ. ಬ್ಯಾಂಕಿನ ಚೇರ್ಮನ್ ಶ್ರೀ ಅನಿಲ್ ಲೋಬೊ ಇವರು ಮಾತನಾಡಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆ ಜ್ಞಾನ ದೇಗುಲವಿದ್ದಂತೆ.ವಿದ್ಯಾರ್ಥಿಗಳು ಶಿಕ್ಷಕರಲ್ಲಿ ದೇವರನ್ನು ಕಾಣಬೇಕು. ತಂದೆ ತಾಯಿಯರನ್ನು ಗೌರವಿಸಬೇಕು. ನಮ್ಮ ಬ್ಯಾಂಕ್ ವತಿಯಿಂದ ಪ್ರತಿ ವರ್ಷವೂ ನೋಟ್ ಪುಸ್ತಕಗಳನ್ನು ನೀಡುವುದಾಗಿ ತಿಳಿಸಿದರು. ಬ್ಯಾಂಕಿನ ನಿರ್ದೇಶಕರಾಗಿರುವ ಎಲ್ರೊಯ್ ಕಿರಣ್ ಕ್ರಾಸ್ಟೋ ಇವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಆಡಿದರು. ಕಾರ್ಯಕ್ರಮದ ಅಧ್ಯಕ್ಷರಾಗಿರುವ ಶಾಲೆಯ ಜಂಟಿ ಕಾರ್ಯದರ್ಶಿಗಳಾಗಿರುವ ಸಿಸ್ಟರ್ ಸುಪ್ರಿಯ ಇವರು ಬ್ಯಾಂಕಿನ ಅಧಿಕಾರಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ವಿದ್ಯಾರ್ಥಿಗಳು ಅವರು ನೀಡಿದ ಕೊಡುಗೆಗಳನ್ನು ಸರಿಯಾಗಿ ಬಳಸಿಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಸ್ವಾಗತಿಸಿದರು. ಮೈಕಲ್ ಸರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಶ್ರೀಲತಾ ಇವರು ವಂದಿಸಿದರು.