ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಉಚಿತ ಬ್ಯಾಗ್ ವಿತರಣೆ

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉದಾರ ದಾನಿಗಳು ಹಾಗೂ ಸಂಸ್ಥೆಯ ಬಗ್ಗೆ ಅಭಿಮಾನ ಹೊಂದಿರುವ ಶ್ರೀಯುತ ಕಿರಣ್ ಸಲ್ದಾನ್ ಇವರು ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ನೀಡಿದ್ದಾರೆ.

ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು ವಿದ್ಯಾರ್ಥಿಗಳಿಗೆ ವಿತರಿಸಿ, ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಕಳೆದ ಸಾಲಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ಶ್ರೀಯುತ ರವಿ ಪೂಜಾರಿಯವರು ಶಾಲಾ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.