ಪ್ರಚೋದನಕಾರಿ ಭಾಷಣ ಹಿನ್ನೆಲೆ; ರಘು ಸಕಲೇಶಪುರ ಬಂಧನಕ್ಕೆ ಪೋಲಿಸರಿಂದ ವ್ಯಾಪಕ ಬಲೆ

ಸಕಲೇಶಪುರ: ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಪೋಲಿಸರು ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಸಕಲೇಶಪುರರವರ ಮನೆಗೆ ನುಗ್ಗಿ‌ ಪೋಲಿಸರು ರಘುರವರನ್ನು ಬಂಧಿಸಲು ಮುಂದಾಗಿದ್ದಾರೆ‌‌ ಆದರೆ ಸ್ಥಳದಿಂದ ರಘುರವರು ಪರಾರಿಯಾಗಿದ್ದು ಪೋಲಿಸರು ರಘು ಬಂಧನಕ್ಕೆ ವ್ಯಾಪಕ ಬಲೆ ಬೀಸಿದ್ದಾರೆ. 

ಘಟನೆ ವಿವರ: ತಾಲೂಕಿನ ಕ್ಯಾಮನಹಳ್ಳಿ ಸೇರಿದಂತೆ ಸುತ್ತಮುತ್ತಲು ವ್ಯಾಪಕ ಗೋಹತ್ಯೆ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ತಾಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಶುಕ್ರವಾರ ಬೆಳಿಗ್ಗೆ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಗಿತ್ತು.ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರೆಂಬ ಆರೋಪದ ಮೇಲೆ ರಘು ಸಕಲೇಶಪುರ ಸೇರಿದಂತೆ ಸಂಘಟನೆಯ ಕೆಲವು ಮುಖಂಡರನ್ನು ಪೋಲಿಸರು ಬಂಧಿಸಲು ಮುಂದಾಗಿದ್ದಾರೆ.ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೋಲಿಸರನ್ನು ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ.