ಆರ್‌.ಎನ್.‌ಶೆಟ್ಟಿ : ಕುಮಾರಿ ಪೂರ್ವಿಕಾಳಿಂದ ಶಾಸ್ತ್ರೀಯ ನೃತ್ಯದಲ್ಲಿ ರಾಷ್ಟ್ರಮಟ್ಟದ ಸಾಧನೆ

ಕುಂದಾಪುರದ ಆರ್‌.ಎನ್.‌ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕುಮಾರಿ ಪೂರ್ವಿಕಾ ಇವರು ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ.

ಕು.ಪೂರ್ವಿಕಾ ಇವರು ವಿದುಷಿ ಪ್ರವಿತ ಮತ್ತು ಅಶೋಕ್ ಕುಮಾರ್ ರವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಮೆಚ್ಚಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ.‌ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.