ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ:ಡಾ|ಸೋನಿಯವರಿಗೆ ಸನ್ಮಾನ

ಕುಂದಾಪುರ : ಜೆಸಿಐ ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಕುಂದಾಪುರ ಆಯುಷ್ಯಧಾಮ ಆಸ್ಪತ್ರೆಯ ವೈದ್ಯರಾದ ಡಾ ಸೋನಿ ಡಿಕೋಸ್ತಾರವರನ್ನು ಕುಂದಾಪುರದ ಹೋಟೆಲ್ ಶ್ರೇಯಸ್ ಇನ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು

ಸನ್ಮಾನ ಸ್ವೀಕರಿಸಿದ ವೈದ್ಯರು ಮಾತನಾಡಿ ’ತಮ್ಮ ಜವಾಬ್ದಾರಿ ಅರಿತು ಸೇವೆ ಮಾಡಿದಾಗ ಮಾತ್ರ ಸಮಾಜ ಅವರನ್ನು ಗೌರವಿಸುತ್ತದೆ. ಹಾಗೆಯೇ ರೋಗಿಗಳು ಕೂಡ ತಮ್ಮ ವೈದ್ಯರಲ್ಲಿ ವಿಶ್ವಾಸವಿರಿಸಿ ಅವರ ಸಲಹೆಗಳನ್ನು ಪಾಲಿಸಬೇಕು’ ಎಂದು ಹೇಳಿದರು.
ಸಮಾರಂಭದಲ್ಲಿ ಜೆಸಿಐ ಕುಂದಾಪುರ ಸಿಟಿಯ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ವಲಯ ಉಪಾಧ್ಯಕ್ಷ ಅಭಿಲಾಶ್, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ನಾಗೇಂದ್ರ ಪೈ, ನಾಗೇಶ್ ನಾವಡ, ವಿಜಯ ಭಂಡಾರಿ, ಲೇಡಿ ಜೇಸಿ ಅಧ್ಯಕ್ಷ ಪ್ರೇಮಾ ಡಿಕುನ್ಹಾ, ಜೊತೆ ಕಾರ್ಯದರ್ಶಿ ಶೈಲಾ, ಸದ್ಯಸ್ಯರಾದ ದಿನೇಶ್ ಪುತ್ರನ್, ಅನಿತಾ ಡಿಸೋಜಾ, ನಾಗರಾಜ ಪಾಟ್ವಲ್, ಶ್ರುತಿ ಡಿಸೋಜಾ ಇನ್ನಿತರರು ಉಪಸ್ಥಿತರಿದ್ದರು
.