ಐಎಂಜೆಐಎಸ್ಸಿ ಕಾಲೇಜು ಮೂಡ್ಲಕಟ್ಟೆ- ಶಿಕ್ಷಕ-ರಕ್ಷಕಸಭೆ

ಕುಂದಾಪುರ ಜು:4 ಐ ಎಂ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆಯ “ಸಂವಾದ” ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಪ್ರಾಂಶುಪಾಲೆಯವರಾದ ಡಾ| ಪ್ರತಿಭಾ ಎಂ ಪಟೇಲ್ ರವರು ಸಭೆಯಲ್ಲಿ ಶೈಕ್ಷಣಿಕ ವರ್ಷದ ಎಲ್ಲಾ ತತ್ವವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು. ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರು
ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ್ ಕುಮಾರ್ ರವರು, ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ| ಅಹಮದ್ ಖಲೀಲ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಪ್ರಾಧ್ಯಾಪಕಿ ಸುಮನರವರು ನಿರೂಪಿಸಿದರು.