ಬಜೆಟ್‍ನಲ್ಲೂ ಜಿಲ್ಲೆಯ ನಿರ್ಲಕ್ಷ್ಯ ಮಾಡಿದ ಕಾಂಗ್ರೆಸ್ ಸರಕಾರ

ಕೋಲಾರ:- ರಾಜ್ಯ ಸರಕಾರದ ಮೊದಲೇ ಸಚಿವ ಸ್ಥಾನ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದರು ಈ ಬಾರಿಯ ಬಹುನಿರೀಕ್ಷಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಬಜೆಟ್ ನಲ್ಲಿ ಕೂಡ ಕೋಲಾರ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಜಿಲ್ಲೆಗೆ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದಿರುವುದು ಜಿಲ್ಲೆಯ ಜನರಿಗೆ ಬೇಸರ ಉಂಟುಮಾಡಿದೆ ಎಂದು ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಬೇಸರ ವ್ಯಕ್ತ ಪಡಿಸಿದ್ದಾರೆ
ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಸಿದ್ದರಾಮಯ್ಯನವರು ತಮ್ಮ ಬಜೆಟ್?ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡುವ ಜೊತೆಗೆ ಅಲ್ಪಸಂಖ್ಯಾತ ಸಮುದಾಯವು ಚುನಾವಣೆಯಲ್ಲಿ ಸಹಾಯ ಮಾಡಿದ್ದಾರೆ ಎಂದು ಅವರನ್ನು ಒಲೈಕೆ ಮಾಡಿ ಇತರೆ ಸಮುದಾಯಗಳಿಗೆ ಮೋಸ ಮಾಡಿದ್ದಾರೆ ಜಿಲ್ಲೆಯಲ್ಲಿ ನಾಲ್ಕು ಜನ ಕಾಂಗ್ರೆಸ್ ಶಾಸಕರು ಇದ್ದರು ಯಾವುದೇ ಯೋಜನೆಗಳನ್ನು ತರುವಲ್ಲಿ ವಿಫಲವಾಗಿದ್ದಾರೆ ಇವರಿಗೆ ಜಿಲ್ಲೆಯ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ ಹಣವೇ ಇಲ್ಲದೆ ಇರುವಾಗ ಬಜೆಟ್ ಮಂಡನೆ ಮಾಡಿ ಖರ್ಚು ಮಾಡಲು ಹೊರಟಿದ್ದಾರೆ ರಾಜ್ಯ ಸರಕಾರದ ಈ ಬಜೆಟ್ ನಿಂದ ಜನ ಸಾಮಾನ್ಯರಿಗೆ ಯಾವುದೇ ಸಹಾಯವಾಗುವುದಿಲ್ಲ ಚುನಾವಣಾ ವರ್ಷದಲ್ಲಿ ಜನರನ್ನು ದಿಕ್ಕುತಪ್ಪಿಸುವ ಬಜೆಟ್ ಇದಾಗಿದ್ದು ಇದು ಸುಳ್ಳಿನ ಬಜೆಟ್ ಆಗಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಬಜೆಟ್ ಸಂಬಂಧಿಸಿದಂತೆ ಜನರೇ ಉತ್ತರ ಕೊಡಲಿದ್ದಾರೆ ಎಂದರು.