ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ

ಶ್ರೀನಿವಾಸಪುರ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.

ಮೊಹಲ್ಲಾ , ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಚಿಕ್ಕ ಮಕ್ಕಳು ಮೇಲೆ, ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ.

ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ಗಫರ್ ಖಾನ್ ಮೊಹಲ್ಲಾ, ಜಾಕಿರ್ ಹುಸೇನ್ ಮೊಹಲ್ಲಾ, ಆಜಾದ್ ರಸ್ತೆ, ಹೈದರ್ ಅಲಿ ಮೊಹಲ್ಲಾ ವಾರ್ಡ್‌, ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬೀದಿ ನಾಯಿಗಳು ಉಪಟಳ ಹೆಚ್ಚಾಗಿದೆ.

ಜಾಕಿರ್ ಹುಸೇನ್ ಮೊಹಲ್ಲಾ , ಗಫರ್ ಖಾನ್ ಮೊಹಲ್ಲಾ, ಆಜಾದ್ ರಸ್ತೆ, ಹೈದರ್ ಅಲಿ ಮೊಹಲ್ಲಾ ಮಕ್ಕಳನ್ನು ಮನೆಯಿಂದ ಹೊರಗೆ ಬಿಡುವುದು , ಭಯಾನಕ ಮತ್ತು ಅಸುರಕ್ಷಿತವಾಗಿದೆ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ನಾಯಿಗಳ ದಾಳಿಯ ಅನೇಕ ಘಟನೆಗಳು ಸಹ ನಡೆದಿವೆ .

ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪುರಸಭೆಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ಪುರಸಭೆಗೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ.

ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾ, ಗಫರ್ ಖಾನ್ ಮೊಹಲ್ಲಾ, ಆಜಾದ್ ರಸ್ತೆ, ಹೈದರ್ ಅಲಿ ಮೊಹಲ್ಲಾದ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಆಜಾದ್ ರಸ್ತೆ, ಮಾರ್ಗದ ರಸ್ತೆಗಳಲ್ಲಿ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ. ನಾಯಿಗಳ ಹಾವಳಿ ತಡೆಯಲು ಸುಮಾರು ಕೆಲ ವರ್ಷಗಳ ಹಿಂದೆ ಪುರಸಭೆ ವಿಷ ಹಾಕಿ ನಾಯಿಗಳನ್ನು ಕೊಂದಿತ್ತು. ಇದರಿಂದ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಆದ್ದರಿಂದ ಪುರಸಭೆ ಅಧಿಕಾರಿಗಳ ಬೀದಿ ನಾಯಿಗಳ ನಿಯಂತ್ರಣಕ್ಕೆ ಹೋಗುವುದನ್ನು ಬಿಟ್ಟಿತ್ತು. ಅಲ್ಲಿಂದ ಇಲ್ಲಿಯವರೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬಹುದು. ಆದರೆ, ಈ ಕಾರ್ಯಕ್ಕೆ ಪುರಸಭೆ ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಪುರಸಭೆ ಇವುಗಳ ನಿಯಂತ್ರಣ ಮಾಡುವುದಕ್ಕೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.