ಕೋಲಾರ : ಬಾಲ ಕಾರ್ಮಿಕ ಅನಿಷ್ಠ ಪದ್ದತಿಯನ್ನು ನಿರ್ಮೂಲನೆ ಮಾಡಲು ಜನ ಜಾಗೃತಿ ಕಾರ್ಯಕ್ರಮ

ಕೋಲಾರ : ಕೋಲಾರ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಜುಲೈ 17 , 2023 ರಿಂದ 24 , 2023 ರವರೆಗೆ ಆಟೋ ಪ್ರಚಾರ ಮೂಲಕ ಬಾಲ ಕಾರ್ಮಿಕ ಅನಿಷ್ಠ ಪದ್ದತಿಯನ್ನು ನಿರ್ಮೂಲನೆ ಮಾಡಲು ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು , ಈ ಸಂಬಂಧ ಇಂದು ಅಕ್ರಂ ಪಾಷ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು , ಬಾಲಕಾರ್ಮಿಕ ಯೋಜನಾ ಸೊಸೈಟಿ , ಕೋಲಾರ ಜಿಲ್ಲೆ , ಕೋಲಾರ ಹಾಗೂ ಶ್ರೀಮತಿ ಪದ್ಮ ಬಸವಂತಪ್ಪ , ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ , ಜಿಲ್ಲಾ ಪಂಚಾಯಿತಿ , ಕೋಲಾರ ರವರು , ಜಿಲ್ಲಾಡಳಿತ ಭವನ , ಕೋಲಾರ ಇಲ್ಲಿ ಆಟೋ ಪ್ರಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ಶ್ರೀಮತಿ ಶಬಾನಾ ಅಜ್ಜಿ , ಮಾನ್ಯ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ , ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ , ಕೋಲಾರ ಜಿಲ್ಲೆ , ಕೋಲಾರ ಹಾಗೂ ಶ್ರೀಮತಿ ರಾಜೇಶ್ವರಿ , ಕಾರ್ಮಿಕ ನಿರೀಕ್ಷಕರು , ಕೋಲಾರ ವೃತ್ತ , ಕೋಲಾರ ರವರು ಹಾಗೂ ಸಿಬ್ಬಂದಿಯವರು ಹಾಜರಿದ್ದರು .