ಮರವಂತೆ ಬೀಚ್ : ಸಮುದ್ರ ಪಾಲಾದ ಯುವಕನ ಶವ ಪತ್ತೆ


ಕುಂದಾಪುರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್‌ನಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ಸಮುದ್ರ ಪಾಲಾದ ಯುವಕನ ಶವ ಬುಧವಾರ ಬೆಳಿಗ್ಗೆ ಕಂಡು ಬಂದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕು ಮೇವಂಡಿ ಗ್ರಾಮದ 23 ವರ್ಷ ಪ್ರಾಯದ ಪೀರ್ ನದಾಫ್ ಮೃತ ಯುವಕ. ಮೃತ ದೇಹವು ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆ ಬಳಿ ಪತ್ತೆಯಾಗಿದೆ.
ನದಾಫ್ ಕಳೆದ ನಾಲ್ಕು ವರ್ಷಗಳಿಂದ ಊರಿನ ತನ್ನ ಸ್ನೇಹಿತರ ಜತೆ ಪಡುಬಿದ್ರಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ಮಂಗಳವಾರ ನದಾಫ್ ಸಹಿತ ಮೂವರು ಸ್ನೇಹಿತರು ಟ್ಯಾ0ಕರ್ ಒಂದರಲ್ಲಿ ಊರಿಗೆ ಹೊರಟಿದ್ದರು.ಮರವಂತೆ ಬೀಚ್‌ಗೆ ಬಳಿ ಬಂದಾಗ ಸೆಲ್ಫಿ ತೆಗೆಯುವ ಹುಚ್ಚಿನಿಂದ ಸಮುದ್ರಕ್ಕಿಳಿದಿದ್ದ ವೇಳೆ ನದಾಫ್ ಸಮುದ್ರ ಪಾಲಾಗಿದ್ದ ಸ್ಥಳೀಯರು ಈಜುಗಾರ ಜತೆ ಸೇರಿ ಅವನ ಪತ್ತೆಗೆ ಸಾಕಷ್ಟು ಶ್ರಮಿಸಿದರೂ ಪ್ರತಿ ಕೂಲ ಹವಾಮಾನದಿಂದಾಗಿ ಸಾಧ್ಯವಾಗಿರಲಿಲ್ಲ. ಬುಧವಾರ ಬೆಳಿಗ್ಗೆ ಅಂಬಿಕಾ ಖಾರ್ವಿ ಮಹಿಳೆ ಮನೆಯ ಬಳಿ ಸಮುದ್ರದ ಹತ್ತಿರ ಹೋಗುತ್ತಿರುವಾಗ ಸಮುದ್ರದಲ್ಲಿ ತೇಲಾಡುತ್ತಿರುವ ಮೃತ ದೇಹ ನೋಡಿ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಗಂಗೊಳ್ಳಿ ಪೊಲೀಸ್ ಸಿಬ್ಬಂದಿ ಹಾಗೂ ಜೀವ ರಕ್ಷಕ ಈಜು ತಜ್ಞ ದಿನೇಶ್ ಖಾರ್ವಿ ತಂಡ, ಆಂಬ್ಯುಲೆನ್ಸ್ ಡ್ರೈವರ್ ಮೃತ ದೇಹವನ್ನು ನೀರಿನಿಂದ
ಮೇಲಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ಕುಂದಾಪುರ ಸರಕಾರಿ ತಾಲೂಕು ಆಸ್ಪತ್ರೆಗೆ ರವನಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.