ಬೀಜಾಡಿ ರೋಟರಿ ಸಮುದಾಯ ದಳ ಪದಪ್ರದಾನ ಸಮಾರಂಭ


ಬೀಜಾಡಿ:ರೋಟರಿ ಸಮುದಾಯದಳ ಮೂಲಕ ಗ್ರಾಮೀಣ ಭಾಗದಲ್ಲಿ ಸಮಾಜಸೇವಾ ಚಟುವಟಿಕೆ ಮಾಡಬಹುದಾಗಿದ್ದು, ಇದರಿಂದ ಸಮಾಜದ ಅಶಕ್ತರಿಗೆ ಸಹಾಯವಾಗಲಿದೆ ಎಂದು ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಅಧ್ಯಕ್ಷ ಜಗನ್ನಾಥ ಮೊಗೇರ ಹೇಳಿದರು.
ಅವರು ಬೀಜಾಡಿ-ಗೋಪಾಡಿ ರೋಟರಿ ಸಮುದಾಯದಳ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ್ ಹೆಬ್ಬಾರ್ ಶುಭ ಹಾರೈಸಿದರು. ರೋಟರಿ ಸಮುದಾಯ ದಳದ ಹಿಂದಿನ ಅಧ್ಯಕ್ಷ ಬಿ.ಜಿ.ನಾಗರಾಜ್ ಅನಿಸಿಕೆ ಹಂಚಿಕೊಂಡರು. ನೂತನ ಅಧ್ಯಕ್ಷ ಪ್ರದೀಪ್ ದೇವಾಡಿಗ,ಕಾರ್ಯದರ್ಶಿ ಪಾಂಡುರಂಗ,ಕೋಶಾಧಿಕಾರಿ ಗಜೇಂದ್ರ ಮೊಗವೀರ,ಕ್ಲಬ್ ಸರ್ವಿಸ್ ಗಿರೀಶ್ ಕೆ.ಎಸ್.,ವೃತ್ತಿಪರ ಸೇವೆ ಸುಭಾಷ್ ಪುತ್ರನ್,ಅಂತರಾಷ್ಟ್ರೀಯ ಸೇವೆ ವಿವೇಕ್ ಹೆಬ್ಬಾರ್,ಸೋಶಿಯಲ್ ಸರ್ವಿಸ್ ಗಿರೀಶ್ ಆಚಾರ್ಯ,ದಂಡಪಾಣಿ ನಿಚ್ಚಿತ್ ಭಂಡಾರಿ ಇವರಿಗೆ ಪದಪ್ರದಾನ ಮಾಡಲಾಯಿತು.
ವೇದಿಕೆಯಲ್ಲಿ ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ್ ಮೊಗವೀರ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಿಂದಿನ ಕಾರ್ಯದರ್ಶಿ ರೋನಿ ಡಿ ಉಪಸ್ಥಿತರಿದ್ದರು.
ಉಪನ್ಯಾಸಕ ಪಾಂಡುರಂಗ ಸ್ವಾಗತಿಸಿದರು.ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರ ಬಿ.ಎನ್ ವಂದಿಸಿದರು.ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.