ಪಟಾಕಿ ಗೋದಾಮ್ ಹಠಾತ್ ಸ್ಪೋಟ : 8 ಜನರ ಸಾವು, ಹಲವರಿಗೆ ಗಾಯ

ಕೃಷ್ಣಗಿರಿ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಳೆಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟಗೊಂಡು ಸಂಭವಿಸಿದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಪೋಟದ ತೀವ್ರತೆಗೆ ಸಮೀಪದ ಮನೆಗಳು ಮತ್ತು ಅಂಗಡಿಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಸ್ಪೋಟ ನೆಡೆದ ಸುತ್ತಲಿನ ಜಾಗ ಚೆಲ್ಲಾಪಿಲ್ಲಿಯಾಗಿದೆ.

ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಪಡೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.ಸ್ಪೋಟಕ್ಕೆ ನಿಖರವಾದ ಕಾರಣ ಇನ್ನು ತಿಳಿಯಬೇಕಾಗಿದೆ.