ಸಾರ್ವಜನಿಕರು ಯೋಗ ಮತ್ತು ಪ್ರಾಣಾಯಮದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯಪಡೆದುಕೊಳ್ಳಬೇಕು;ಐಸಿರಿ ಹೀಲಿಂಗ್ ಸೆಂಟರ್‍ನ ಹೀಲರ್

ಶ್ರೀನಿವಾಸಪುರ: ಸಾರ್ವಜನಿಕರು ಯೋಗ ಮತ್ತು ಪ್ರಾಣಾಯಮದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪಡೆದುಕೊಳ್ಳಬೇಕು ಎಂದು ಐಸಿರಿ ಹೀಲಿಂಗ್ ಸೆಂಟರ್‍ನ ಹೀಲರ್ ಹೇಳಿದರು.
ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಸಿರಿ ಹೀಲಿಂಗ್ ಸೆಂಟರ್ ಸೆಂಟರ್ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗುವುದು ಎಂದು ಹೇಳಿದರು.
ಆ.2 ರಿಂದ ಮೂರು ದಿನಗಳ ಕಾಲ ಬೆಳಿಗ್ಗೆ 11 ರಿಂದ 2 ಗಂಟೆ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆ ವರೆಗೆ ಉಚಿತ ಯೋಗ ಹಾಗೂ ಪ್ರಾಣಾಯಾಮ ಶಿಬಿರ ಏರ್ಪಡಿಸಲಾಗುವುದು. ಅಗತ್ಯ ಇರುವ ನಾಗರಿಕರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಬಹುದು ಎಂದು ಹೇಳಿದರು.