ಹಿರಿಯ ಸಹಕಾರಿ ಧುರೀಣ – ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ ಇನ್ನಿಲ್ಲ

ಕುಂದಾಪುರ: ಹಿರಿಯ ಸಹಕಾರಿ ಧುರೀಣ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಬಸ್ರೂರು ಕೋಟಿ ಚೆನ್ನಯ್ಯ ಗರಡಿಯ ಮುಖ್ಯಸ್ಥರಾದ ಗೋಪಾಲ ಪೂಜಾರಿ (68 ವ) ಆ.8ರಂದು ಹೃದಯಘಾತದಿಂದ ನಿಧನರಾದರು.

ಸಹಕಾರ ಕ್ಷೇತ್ರದಲ್ಲಿ ಸುದೀರ್ಫ ಅವಧಿಯಿಂದ ಗುರುತಿಸಿಕೊಂಡಿದ್ದ ಅವರು ಕಳೆದ 25 ವರ್ಷಗಳಿಗೂ ಹೆಚ್ಚು ಕಾಲ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿದ್ದರು. ಬಸ್ರೂರು ಗರಡಿಯ ಪಾತ್ರಿಗಳಾಗಿ, ಗರಡಿಯ ಅಭಿವೃದ್ಧಿಯಲ್ಲಿ
ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಸ್ರೂರು ಪರಿಸರದ ಧಾರ್ಮಿಕ, ಸಹಕಾರ, ಸಾಮಾಜಿಕ ಕ್ಷೇತ್ರಗಳಲ್ಲಿ ಸತ್ರೀಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ಪತ್ನಿ, ಸಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.