ಭಂಡಾರ್ಕಾರ್ಸ್ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ : ಎನ್.ಸಿ.ಸಿ ವಿಶೇಷ ಪ್ರವೇಶದಲ್ಲಿ ಅಖಿಲ ಭಾರತ ರೇಂಕಿಗನಲ್ಲಿ 15ನೇ ರೇಂಕ್

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಜೆ.ಒ.ಯು (ವಿದ್ಯಾರ್ಥಿ) ಭರತ್ ಬಾಬು ದೇವಾಡಿಗ ಅವರು ಎನ್.ಸಿ.ಸಿ ವಿಶೇಷ ಪ್ರವೇಶದಲ್ಲಿ ಅಖಿಲ ಭಾರತ ರೇಂಕಿಗನಲ್ಲಿ ನಲ್ಲಿ 15ನೇ ರೇಂಕ್ ಗಳಿಸಿದ್ದಾರೆ. ಇವರು ಕೇಂದ್ರದ ಸಿಬ್ಬಂದಿ ಆಯ್ಕೆ ಮಂಡಳಿ ( ಎಸ್.ಎಸ್.ಸಿ)ಯ 21ಎಸ್.ಎಸ್.ಬಿ ಭೂಪಾಲ್ ನಿಂದ ಇವರನ್ನು ಶಿಫಾರಸು ಮಾಡಲಾಗಿದೆ. ಇವರು ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಿ.ಶುಭಕರಾಚಾರಿ, ಭೋದಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನಂದಿಸಿದ್ದಾರೆ’ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.