ಕುಂದಾಪುರದಲ್ಲಿ ಎಕಾ ಕಾಲದಲ್ಲಿ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ – ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ

ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.

   ಉದ್ಘಾಟನೆ ಮಾಡಿದ ಅವರು ಮಹಿಳೆಯರಿಗೆ ನಾ- ನಾಯಕಿ ಎಂದು ಪುನರುಚ್ಚಸಿ ಹೇಳಿ ಎಂದು ಹೇಳಿದರು. ಒಂದು ಕುಟುಂಬದಲ್ಲಿ ಹಾಲಿಗೆ ದಿನ ಒಂದರಂತೆ ರೂ.೫೦ ಬೇಕು ಅದಕ್ಕೆ ನೀವು ಯಾರ ಹತ್ತಿರವೂ ಕೇಳಬೇಕಾಗಿಲ್ಲ. ನಾರಿಯರಿಗೆ ಇದರಿಂದ ಆರ್ಥಿಕ ಸಹಾಯವಾಗುತ್ತೆ, ನಾರಿ ಅಂದರೆ ಲಕ್ಷ್ಮಿ, ನಾರೀಯರ ಸಬಲೀಕರಣವಾಗ ಬೇಕು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯ 155 ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರತಿ ನಗರ ಸ್ಥಳೀಯ ಸಂಸ್ಥೆಯ 52 ವಾರ್ಡ್‌ಗಳಲ್ಲಿ ಹಾಗೂ 6 ತಾಲೂಕು ಕೇಂದ್ರಗಳಲ್ಲಿ ಮತ್ತು 1 ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು 114 ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. 2.48 ಸಾವಿರ ಫಲಾನುಭವಿಗಳು ಈಗಾಲೇ ನೋಂದಾಯಿಸಿಕೊಂಡಿದ್ದಾರೆ. ನೀವು ಈಗ ನೊಂದಾಯಿಸಿ ಕೊಂಡವರಿಗೆ ಈ ಯೋಜನೇಯನ್ನು ತಿಳಿಸಬೇಕು ಎಂದು ಅವಾಗ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾಗುತ್ತದೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೆಕರ್, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ, ಪುರಸಭಾ ಸದಸ್ಯ ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ, ಕಲಾವತಿ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರುನ್ಉಪಸ್ಥಿತರಿದ್ದರು.ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರಿಗೆ ಸಂತೋಷವನ್ನು ಇಮ್ಮಡಿಕೊಳಿಸಲು ಸಿಹಿ ಹಂಚಿ ಸಂತೋಷವನ್ನು ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನೆ ಸ್ವಾಗತಿಸಿದರು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ಆರ್ ವಂದಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಂದೇ ಕಾಲದಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಮತ್ತು ಕಲಾಮಂದಿರದಲ್ಲಿ ಒಟ್ಟಾರೆ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನ ಕಾರ್ಯಕ್ರಮ ನದೆಯಿತು.

ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು