ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಜಿಲ್ಲಾ‌ಮಟ್ಟದಲ್ಲಿ ಪ್ರಥಮ‌ ಸ್ಥಾನ‌ ಮತ್ತು ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ದಿ. 28-8-23 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ  ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಟೇಬಲ್ ಟೆನಿಸ್ ತಂಡ ಪ್ರಥಮ‌ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿ.ಯು.ಸಿ ಯ ದೀಪ್ತಿ‌ ಕೆ, ಸಿಂಚನಾ‌ ಶೆಟ್ಟಿ, ಕ್ಷಮಾ ಗೌತಮ್, ಅಂಕಿತಾ, ಭಾರ್ಗವಿ ಇವರು ಭಾಗವಹಿಸಿರುತ್ತಾರೆ. ಅವರಲ್ಲಿ ಮೂವರು ವಿದ್ಯಾರ್ಥಿನಿಯರಾದ ಅಂಕಿತಾ, ಕ್ಷಮಾ ಗೌತಮ್ ಹಾಗೂ ದೀಪ್ತಿ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗಾಗಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು,‌ ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.