ಕುಂದಾಪುರ ಕಾಂಗ್ರೆಸ್ ಕಛೇರಿಯಲ್ಲಿ ಆಸ್ಕರ್ ಫರ್ನಾಂಡಿಸ್ ಪುಣ್ಯಸ್ಮರಣೆ

ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ಕೇಂದ್ರ ಸರಕಾರದ ಮಾಜಿ ಸಚಿವ ದಿI ಆಸ್ಕರ್ ಫೆರ್ನಾಂಡಿಸ್ ರವರ 2 ನೇ ಪುಣ್ಯತಿಥಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು .

ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ. ಪ್ರತಾಪ ಚಂದ್ರ ಶೆಟ್ಟಿಯವರು ಈ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸರಳ ವ್ಯಕ್ತಿತ್ವದ ಮೂಲಕ ಪಕ್ಷ , ಜಿಲ್ಲೆ, ರಾಜ್ಯ , ಮತ್ತು ರಾಷ್ಟ್ರಕ್ಕೆ ಅವರು ಪ್ರಚಾರವಿಲ್ಲದೇ ಅನೇಕ ಕೆಲಸ ಮಾಡಿದ್ದರು ಮತ್ತು ಸಾಮಾನ್ಯ ಕಾರ್ಯಕರ್ತರೊಂದಿಗೆ ಉತ್ತಮ ಬಾಂದವ್ಯವಿಟ್ಟುಕೊಂಡ ರಾಜಕಾರಣಿಯೆಂದು ಸ್ಮರಿಸಿಕೊಂಡರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ , ಎಂ. ದಿನೇಶ ಹೆಗ್ಡೆ ಆಸ್ಕರ್ ರವರನ್ನು ಸ್ಮರಿಸಿಕೊಂಡರು.

ಪಕ್ಷದ ಮುಖಂಡರಾದ ಅಶೋಕ ಪೂಜಾರಿ ಬೀಜಾಡಿ , ದೇವಕಿ ಸಣ್ಣಯ್ಯ , ಗಂಗಾಧರ ಶೆಟ್ಟಿ , ಚಂದ್ರ ಕಾಂಚನ್ ಕಾಸನಕಟ್ಟೆ , ಪ್ರಭಾವತಿ ಶೆಟ್ಟಿ , ನಾರಾಯಣ ಆಚಾರ್ , ಶಶಿರಾಜ ಪೂಜಾರಿ , ರಮೇಶ ಶೆಟ್ಟಿ ವಕ್ವಾಡಿ , ಚಂದ್ರ ಅಮಿನ್ , ಅಶೋಕ , ಚಂದ್ರಶೇಖರ ಶೆಟ್ಟಿ , ಅಭಿಜಿತ್ ಪೂಜಾರಿ , ದರ್ಮಪ್ರಕಾಶ , ವಿವೇಕಾನಂದ , ಕೇಶವ ಭಟ್ , ಸುನೀಲ್ ಪೂಜಾರಿ , ಸುರೇಶ ಶೆಟ್ಡಿ , ಕಿಶೋರ್ ಮಂದಾರ್ತಿ , ವಿಜಯ ಪೂಜಾರಿ ಉಳ್ತೂರು , ಸದಾನಂದ ಖಾರ್ವಿ , ಸಂತೋಷ್ , ಸುರೇಶ್ ಶೆಟ್ಟಿ , ರಾದಾಕ್ರಷ್ಣ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷ ಚಂದ್ರಶೇಖರ ಖಾರ್ವಿ ಸ್ವಾಗತಿಸಿ , ಕಾರ್ಯದರ್ಶಿ ಆಶಾ ಕರ್ವೆಲ್ಲೋ ವಂದಿಸಿದರು . ಅಶೋಕ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.