ಶ್ರೀನಿವಾಸಪುರ : ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

ಶ್ರೀನಿವಾಸಪುರ : ಪುರಸಭಾ ಕಚೇರಿಯ  ಸಭಾಂಗಣದಲ್ಲಿಂದು ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ,ಚಾಲನೆ ನೀಡಿದರು

ಕಚೇರಿ ವ್ಯವಸ್ಥಾಪಕರಾದ ಶ್ರೀ ನವೀನ್ ಚಂದ್ರ,ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀ ಕೆ ಜಿ. ರಮೇಶ್,ಕಂದಾಯ ನಿರೀಕ್ಷಕ ಎನ್.ಶಂಕರ್ ಸರ್ಕಾರಿ ಬಾಲಕಿಯರ  ಕಾಲೇಜಿನ ಶಿಕ್ಷಕಿ ಶ್ರೀಮತಿ ಮಂಜುಳಾ,ಸ್ವಚ್ಛ ಭಾರತ್ ರಾಯಬಾರಿ ಶ್ರೀಮತಿ ಮಾಯಾ ಬಾಲಚಂದ್ರ,,ನಂದಿನಿ ಅರ್ಜುನ್ ಸೇರಿದಂತೆ ಸರ್ಕಾರಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.