ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜೂನಿಯರ್ ರೆಡ್ ಕ್ರಾಸ್ ಉದ್ಘಾಟನೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ದಲ್ಲಿ ಅಕ್ಟೋಬರ್ 6 ರಂದು ಜೂನಿಯರ್ ರೆಡ್ ಕ್ರಾಸ್ ಉದ್ಘಾಟಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭ ವಾಯಿತು. ಇದರ ಅಧ್ಯಕ್ಷತೆಯನ್ನು ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ವಹಿಸಿದರು. ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ರೆಡ್ ಕ್ರಾಸ್ ನ ಧ್ಯೇಯ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು. ಜೂನಿಯರ್ ರೆಡ್ ಕ್ರಾಸ್ ಸಂಯೋಜಕ ರಾದ ದಿನಕರ್ ಅರ್ ಶೆಟ್ಟಿ ಇವರು ಮಕ್ಕಳಿಗೆ ಪ್ರತಿಜ್ಞಾವಿದಿ ಬೋದಿಸಿದರು. ಜೂನಿಯರ್ ರೆಡ್ ಕ್ರಾಸ್ನ ನೂತನ ಅದ್ಯಕ್ಷ ಮನ್ವಿತ್ ಗೆ ಸಭಾಪತಿ ಯವರು ಪಿನ್ ತೊಡಿಸಿದರು. ಅದ್ಯಕ್ಷರ ಭಾಷಣ ಮತ್ತು ವಂದನಾರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು. ರೆಡ್ ಕ್ರಾಸ್ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಜೂನಿಯರ್ ರೆಡ್ ಕ್ರಾಸ್ ಮಾರ್ಗದರ್ಶಿ ಅಧ್ಯಾಪಕರಾದ ಶ್ರೀಕಾಂತ್ ರಾವ್ ಕಾರ್ಯಕ್ರಮ ನಿರೂಪಿಸಿ ವಂಧಿಸಿದರು.