ಶ್ರೀ ಕೋಟಿಲಿಂಗೇಶ್ವರ ಕಲಾ ಬಳಗದಿಂದ ಮಕ್ಕಳ ಯಕ್ಷಗಾನದ ಪೂರ್ವ ತಯಾರಿ ಸಭೆ

ಶ್ರೀ ಕೋಟಿಲಿಂಗೇಶ್ವರ ಕಲಾ ಬಳಗ ಕೋಟೇಶ್ವರ ವತಿಯಿಂದ ಕೊಡಿ ಹಬ್ಬದ ಪ್ರಯುಕ್ತ ನಡೆಯುವ ಮಕ್ಕಳ ಯಕ್ಷಗಾನದ ಪೂರ್ವ ತಯಾರಿ ಸಭೆಯು ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಕಲಾ ಬಳಗದ ಅಧ್ಯಕ್ಷ ಶ್ರೀಧರ್ ಉಡುಪ ಮಾತನಾಡಿ, ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಮುಂದುವರಿಸುವ ಬಗ್ಗೆ ಕಲಾ ಬಳಗದ ಪಾತ್ರದ ಬಗ್ಗೆ ವಿವರಿಸಿದರು.
ಸ್ಥಾಪಕಾಧ್ಯಕ್ಷ ಡಾ| ರಾಜೇಶ್ ಕುಮಾರ್ ಶೆಟ್ಟಿ ಹಾಗೂ ಕುಂದಾಪುರದ ವಕೀಲ ಹಂದಕುಂದ ಅಶೋಕ ಶೆಟ್ಟಿ ಮಾತನಾಡಿದರು.
ಗುತ್ತಿಗೆದಾರ ಪ್ರಭಾಕರ್ ಶೆಟ್ಟಿ ಯಕ್ಷ ಗುರು ಕಡ್ಲೆ ಗಣಪತಿ ಹೆಗ್ಡೆ ಉಪಸ್ಥಿತರಿದ್ದರು.
ಉಪಾಧ್ಯಕ್ಷ ನಾರಾಯಣ ಭಂಡಾರಿ ಬೀಜಾಡಿ ಸ್ವಾಗತಿಸಿ, ಕಾರ್ಯದರ್ಶಿ ಚಂದ್ರ ಮರಕಾಲ ವಂದಿಸಿದರು.