ಹಿಂದಿನ ಶಾಸಕರು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ ಕಾರಣದಿಂದ ಪ್ರತಿಹಳ್ಳಿಯಲ್ಲು ಬದಲಾವಣೆಯ ವಾತಾವರಣ ಸೃಷ್ಟಿಯಾಗಿದೆ: ಸಿಎಂಆರ್ ಶ್ರೀನಾಥ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ:- ಹಿಂದಿನ ಶಾಸಕರು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ ಕಾರಣದಿಂದ ಪ್ರತಿಹಳ್ಳಿಯಲ್ಲು ಬದಲಾವಣೆಯ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾರರು ಅಶೀರ್ವಾದ ಮಾಡಿದರೆ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು.
ನಗರದಲ್ಲಿ ತಮ್ಮ ಕಚೇರಿಯಲ್ಲಿ ಕಳೆದ ರಾತ್ರಿ ತಾಲ್ಲೂಕಿನ ಹೊನ್ನೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ 90ಕ್ಕೂ ಹೆಚ್ಚು ಮುಖಂಡರನ್ನು, ಯುವಕರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು. ನಾನು ರೈತನಾಗಿದ್ದು, ರೈತರ ಸಮಸ್ಯೆಗಳು ಏನು ಎಂಬುದು ಹತ್ತಿರದಿಂದ ಬಲ್ಲವನಾಗಿದ್ದೇನೆ. ವ್ಯವಸಾಯದ ಜೊತೆಗೆ ಟೊಮೆಟೊ ಮಂಡಿ ನಡೆಸಿಕೊಂಡು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಜನರ ಮಧ್ಯೆ ಗುರುತಿಸಿಕೊಂಡಿದ್ದೆನೆ. ಮತ್ತಷ್ಟು ಜನ ಸೇವೆ ಮಾಡಲು ರಾಜಕೀಯ ಪ್ರವೇಶ ಮಾಡಿದ್ದು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.