

ಉದ್ಯಾವರ : ಕರಾವಳಿಯಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತ, ಧರೆ ಕುಸಿತ ತೋಡು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಅಲ್ಲಲ್ಲಿ ಅನಾಹುತಗಳು ನಡೆಯತ್ತಲೇ ಇವೆ. ಮಳೆಯ ಕಾರಣ ಹಲವರ ಪ್ರಾಣಕ್ಕೆ ಕುತ್ತಾಗಿದೆ. ಕರ್ನಾಟಕ ರಾಜ್ಯದಲ್ಲಿ ವವಿಪರೀತ ಮಳೆಯಿಂದಾಗಿ ಸುಮಾರು ೨೭ ಜನರ ಪ್ರಾಣ ಕಳೆದುಕೊಂಡಿದ್ದಾರೆ. ತೋಡಿಗೆ ಬಿದ್ದು ವ್ಯಕ್ತಿ ಸಾವು
ಉಡುಪಿ ಜಿಲ್ಲೆಯಲ್ಲಿಯೂ ಒಂದು ಸಾವಾಗಿದೆ. ಜೂನ್ 15 ರಂದು ಉದ್ಯಾವರ ಕೇದಾರ್ ನಿವಾಸಿಯೊಬ್ಬರು, ಕೆಲಸ ಮುಗಿಸಿ ಮನೆ ಬಳಿ ಬರುತ್ತಿದ್ದಾಗ ಮನೆ ಹಿಂಬದಿಯ ತೋಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನು ರೊನಾಲ್ಡ್ ಫೆರ್ನಾಂಡಿಸ್ (52) ಗುರುತಿಸಲಾಗಿದೆ. ಮೃತರು ಅವಿವಾಹಿತರು. ಅವ್ತರ್ಯು ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

