ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತರನ್ನು ಅವರ ಮನೆಯಂಗಳದಲ್ಲಿ ಮನದುಂಬಿ ಗೌರವಿಸುವ ಕಾರ್ಯಕ್ರಮ

ಕೋಲಾರ: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸುದ್ದಿಮನೆಯಲ್ಲಿ ಕೆಲಸ ಮಾಡಿದ ಅತ್ಯಂತ ಹಿರಿಯ ಪತ್ರಕರ್ತರನ್ನು ಅವರ ಮನೆಯಂಗಳದಲ್ಲಿ ಮನದುಂಬಿ ಗೌರವಿಸುವ ಕಾರ್ಯಕ್ರಮವನ್ನು ಸಂಘದಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಎಂ.ಎಸ್.ಪ್ರಭಾಕರ(ಕಾಮರೂಪಿ) ಕಠಾರಿಪಾಳ್ಯದಲ್ಲಿರುವ ಅವರ ಮನೆಯಂಗಳದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾಜಿ ಅಧ್ಯಕ್ಷರಾದ ವಿ.ಮುನಿರಾಜು, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಕಾರ್ಯದರ್ಶಿ ಸಿ.ಜಿ.ಮುರಳಿ, ಹಿರಿಯ ಪತ್ರಕರ್ತರಾದ ಪಾ.ಶ್ರೀ.ಅನಂತರಾಮ್ ಹೆಚ್.ಕೆ. ರಾಘವೇಂದ್ರ, ಕೋ.ನಾ.ಮಂಜುನಾಥ್, ಕೆ.ಬಿ.ಜಗದೀಶ್, ಸಾಕ್ಷಿ ಮಂಜುನಾಥ್, ಸಿ.ವಿ.ನಾಗರಾಜ್, ಕಾರ್ಯಕಾರಿ‌ ಸಮಿತಿ ಆಸೀಫ್ ಪಾಷ, ರಮೇಶ್, ಕಿರಣ್, ಗಂಗಾಧರ್ ಉಪಸ್ಥಿತರಿದ್ದರು.