ಎಳು ತಿಂಗಳ ಹಿಂದೆ ನಾ ಪತ್ತೆಯಾದ ಯುವತಿಯನ್ನು ಹುಡುಕಿಕೊಡಲು ಕಥೊಲಿಕ್ ಸಭೆಯಿಂದ ಮನವಿ

JANANUDI.COM NETWORK


ಉಡುಪಿ: ಕಳೆದ ಏಳು ತಿಂಗಳ ಹಿಂದೆ ಪೆರಂಪಳ್ಳಿಯಿಂದ ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಕೆಥೋಲಿಕ್ ಸಭಾ ಉಡುಪಿ ಪ್ರದೇಶ್ ಶುಕ್ರವಾರ ನ.19ರಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಅವರಿಗೆ ಮನವಿ ಪತ್ರ ಸಲ್ಲಿಸಿತು. ಎಸ್ಪಿ ಅವರ ಅನುಪಸ್ಥಿತಿಯಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆರ್ರಿ ಡಿಸೋಜಾ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಕುಮಾರಚಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿ ಅವೀನಾ (16) ಅವರು ಏಪ್ರಿಲ್ 13, 2021 ರಂದು ತಮ್ಮ ಮನೆಯಿಂದ ನಾಪತ್ತೆಯಾಗಿದ್ದಾರೆ. ಅವೀನಾ ಅವರ ತಾಯಿ ಆಶಾ ಡಿಸೋಜಾ ಅವರು ಮಣಿಪಾಲ ಪೆÇಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಆದರೆ ಇವತ್ತಿನ ತನಕ ಯುವತಿ ಪತ್ತೆಯಾಗದೆ ಇರುವುದು ಆತಂಕಕ್ಕೆ ಕಾರಣವಾಗಿದೆ.
ಶೀಘ್ರವೇ ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚಿ ಆತಂಕದಲ್ಲಿರುವ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಮೇರಿ ಡಿಸೋಜಾ ಪೆÇಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿದ ಎಎಸ್ಪಿ ಕುಮಾರಚಂದ್ರ, ಬಾಲಕಿಯ ಪತ್ತೆಗೆ ಇಲಾಖೆ ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಭರವಸೆ ನೀಡಿದರು. ನಾಪತ್ತೆಯಾಗಿರುವ ಬಾಲಕಿಯನ್ನು ಆದಷ್ಟು ಬೇಗ ಪತ್ತೆ ಮಾಡಲಾಗುವುದೆಂದು ಭರವಸೆ ನೀಡಿದರು.
ಕೆಥೋಲಿಕ್ ಸಭಾ ಉಡುಪಿ ಪ್ರದೇಶ ನಿಯೋಜಿತ ಅಧ್ಯಕ್ಷ ಸಂತೋ ಷ್ ಕರ್ನೇಲಿಯೋ, ಉಡುಪಿ ವಲಯ ಅಧ್ಯಕ್ಷೆ ಲವೀನಾ ಪೆರೀರಾ, ಉಡುಪಿ ಘಟಕದ ಅಧ್ಯಕ್ಷೆ ಲೆಸ್ಲಿ ಕರ್ನೇಲಿಯೋ, ಪೆರಂಪಳ್ಳಿ ಘಟಕದ ಅಧ್ಯಕ್ಷ ಒಲಿವರ್ ಡಿಸೋಜ ಉಪಸ್ಥಿತರಿದ್ದರು.