

ಶ್ರೀನಿವಾಸಪುರ : ತಾಲ್ಲೂಕಿನ ಯಲ್ದೂರು ಗ್ರಾಮದ ಶ್ರೀ ಶ್ರೀನಿವಾಸ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಎ. ಎಸ್ ವೇದಾಂತ್ 2025-26ನೇ ಸಾಲಿನ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ. ಈ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರನಾಥ್, ನಾರಾಯಣ ಆಡಳಿತಾಧಿಕಾರಿ ಆರ್ ಅಂಬರೀಶ್, ಕರಾಟೆ ಶಿಕ್ಷಕ ನರಸಿಂಹಯ್ಯ ಹಾಗೂ ಶಿಕ್ಷಕ ವರ್ಗದವರು ಅಭಿನಂದಿಸಿದರು.

