ನಂದಳಿಕೆ ಅಬ್ಬನಡ್ಕ ಪ್ರೆಂಡ್ಸ್ ಕ್ಲಬ್ : ಉಡುಪಿ ಪರ್ಯಾಯ ಮಹೋತ್ಸವಕ್ಕೆ ಹೊರೆ ಕಾಣಿಕೆ ಸಮರ್ಪಣೆ

ವರದಿ:  ವಾಲ್ಟರ್ ಮೊಂತೇರೊ, ಬೆಳ್ಮಣ್ಣು


ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ನೇತೃತ್ವದಲ್ಲಿ ಸಂಘದ ಸದಸ್ಯರ ಸಹಕಾರದೊಂದಿಗೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಹೊರೆ ಕಾಣಿಕೆ ಸಮರ್ಪಿಸಲಾಯಿತು. (35kg ಬೆಳ್ತಿಗೆ ಅಕ್ಕಿ, 66 ತೆಂಗಿನಕಾಯಿ, 21kg ಸುವರ್ಣಗೆಡ್ಡೆ, 30½kg ಬೆಲ್ಲ, 7kg ಸಿಹಿ ಕುಂಬಳಕಾಯಿ, 2kg ಬೂದಿ ಕುಂಬಳಕಾಯಿ) 
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ,  ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಉಪಾಧ್ಯಕ್ಷರಾದ ಅಬ್ಬನಡ್ಕ  ಸುರೇಶ ಪೂಜಾರಿ, ಜೊತೆ ಕಾರ್ಯದರ್ಶಿ ಪುಷ್ಪಾ ಕುಲಾಲ್,  ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಹರೀಶ್ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಲಿತಾ ಆಚಾರ್ಯ, ಸಂಘದ ಸದಸ್ಯರಾದ ಸುದರ್ಶನ್ ಸಾಲ್ಯಾನ್, ಪ್ರಶಾಂತ್ ಕುಮಾರ್ ಮೊದಲಾದವರಿದ್ದರು.