ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು -ಡಾ || ಆರ್. ಸೆಲ್ವಮಣಿ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ: ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು .
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು . ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು . ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು . ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ . ಮಧ್ಯವನ್ನು ದಸ್ತಾನು ಮಾಡುವುದು , ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಹಣ ಹಂಚುವುದು , ದಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು . 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು , ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು . 10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು , ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .