ಅಡ್ಡಗಲ್ ಗ್ರಾಮದ ಶಾಲೆಯ ಅಪ್ರಾಪ್ತ ಬಾಲಕಿಯನ್ನು ಹೆದರಿಸಿ ಲೈಂಗಿಕವಾಗಿ ಬಳಕೆ ಆಪಾದನೆ : ಶಿಕ್ಷಕನ ಬಂಧನ

ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾಮದ ಖಾಸಗಿ ಶಾಲೆಯೊಂದರ ಅಪ್ರಾಪ್ತ ಬಾಲಕಿಯೊಬ್ಬಳನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡ ಆಪಾದನೆ ಮೇಲೆ ಶಾಲೆಯ ಶಿಕ್ಷಕ ಶಿವಕುಮಾರ್ ಅವರನ್ನು ಗೌನಿಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಡ್ಡಗಲ್ ಗ್ರಾಮದ ಆದರ್ಶ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನನ್ನ ಮಗಳು, ಮನೆಗೆ ಬಂದು ಹೊಟ್ಟೆ ನೋವೆಂದು ಹೇಳಿದಳು. ಚಿಂತಾಮಣಿ ಆಸ್ಪತ್ರೆಯಲ್ಲಿ ತೋರಿಸಿದೆವು. ವೈದ್ಯರು ಸ್ಕ್ಯಾನಿಂಗ್ ಮಾಡಿಸಲು ಹೇಳಿದರು. ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭ ಧರಿಸಿರುವ ವಿಷಯ ತಿಳಿದು ಬಂತು. ಆ ಬಗ್ಗೆ ವಿಚಾರಿಸಿದಾಗ ಅದೇ ಶಾಲೆಯ ಶಿಕ್ಷಕ ಶಿವಕುಮಾರ್, ಸುಮಾರು 9 ತಿಂಗಳಿಂದ ಶಾಲೆ ಬಿಟ್ಟನಂತರ ಬಾಲಕಿಯನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ತಿಳಿದುಬಂದಿತು. ನನ್ನ ಮಗಳು ಗರ್ಭ ಧರಿಸಲು ಕಾರಣನಾದ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಾಲಕಿ ತಂದೆ ಶನಿವಾರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಗೌನಿಪಲ್ಲಿ ಪೊಲೀಸರು ಆರೋಪಿ ಶಿಕ್ಷಕ ಶಿವಕುಮಾರ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.