

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೆಶಕರ ಕಛೇರಿ, ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಹ ಪ್ರಾಯೋಜಕತ್ವದಲ್ಲಿ ಬೈಂದೂರಿನಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಆದಿತ್ಯ ಇವರು 14ರ ವಯೋಮಾನದ ಒಳಗಿನ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇತ ತಲ್ಲೂರಿನ ವಿಷ್ಣು ದೇವಾಡಿಗ ಹಾಗೂ ನಿರ್ಮಲ ದಂಪತಿಯ ಪುತ್ರನಾಗಿದ್ದಾನೆ. ಇತನ ಈ ಸಾಧನೆಗೆ ಶಾಲಾ ಸಂಚಾಲಕರಾದ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೇಜ್ ಶಾಂತಿ ಎ.ಸಿ, ಅಧ್ಯಾಪಕ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.