

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕ ತರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಇ೦ದು ಜುಲಾಯ್ 9ರಂದು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯೇಸು ಕ್ರಿಸ್ತರು ಕೇವಲ ಚರ್ಚ್ ಗೋಡೆಗಳಲ್ಲಿ ಮಾತ್ರವಲ್ಲ, ಜನರ ಹೃದಯಗಳಲ್ಲಿ, ಅವರ ಸೇವೆಯಲ್ಲಿ ಹಾಗೂ ಕರ್ತವ್ಯಗಳಲ್ಲಿ ಸದಾ ಜೀವಂತವಾಗಿದ್ದಾರೆ. ಶಿಲುಬೆಯನ್ನು ಧ್ವ೦ಸಗೊಳಿಸುವ ಮೂಲಕ ನಂಬಿಕೆಯನ್ನು ನಾಶಪಡಿಸಲು ಸಾಧ್ಯವಿಲ್ಲ”ಎಂದು ಹೇಳಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ, ದ್ವೇಷ ಮತ್ತು ವೈಮನಸ್ಸನ್ನು ಹರಡುವ ದುರುದ್ದೇಶಪೂರಿತ ಪ್ರಯತ್ನಗಳಾಗಿವೆ. ಶಾ೦ತಿ ಮತ್ತು ಸೌಹಾರ್ದತೆಯನ್ನು ಬಯಸುವ ಯಾವದೇ ನಾಗರಿಕ ಸಮಾಜದಲಿ ಇಂತಹ ಕ್ರತ್ರಗಳಿಗೆ ಸ್ಥಾನವಿಲ್ಲ’ ಎಂದು ಅವರು ತಿಳಿಸಿದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ತಪ್ಪಿತಸ್ಮರನ್ನು ಕೂಡಲೆ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಪೊಲೀಸ್ ಇಲಾಖೆಯನ್ನು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ, ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ವಾತ೦ತ್ರ್ಯ ಹಾಗೂ ಅವರ ಪೂಜಾ ಸ್ಮಳಗಳ ಸುರಕ್ಷತೆಯನ್ನು ಸರ್ಕಾರ ಖಚಿತಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

