ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ” ಕುರಿತು ಜಾಗೃತಿ ಕಾರ್ಯಕ್ರಮ ನಡೆಯಲಿದೆ

ಕುಂದಾಪುರ: ಆಗಸ್ಟ್ 28ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ಭಾರತ ಸರ್ಕಾರದ ಭೂವಿಜ್ಞಾನ ಸಚಿವಾಲಯ, ದೆಹಲಿ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ ಇವರ ಸಹಯೋಗದಲ್ಲಿ ” ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ” ಕುರಿತು ಜಾಗೃತಿ ಕಾರ್ಯಕ್ರಮ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ನಡೆಯಲಿದೆ. ಮಣಿಪಾಲದ ಎಂ.ಐ.ಟಿಯ ಸಹಪ್ರಾಧ್ಯಾಪಕ ಡಾ. ಅನಿಶ್ ಕುಮಾರ್ ವಾರಿಯರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.