

ದುಬಾಯ್; ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರ ಹಾಗೂ ಪ್ರಾಧಿಕಾರದ ಸದಸ್ಯರಾದ ಡಾ. ಸಂಜೀವ ಕುಮಾರ ಅತಿವಾಲೆ, ಶಿವರೆಡ್ಡಿ ಖ್ಯಾಡೆದ್ ಅವರ ಉಪಸ್ಥಿತಿಯಲ್ಲಿ ತಾರೀಕು 19/04/25 ರಂದು ದುಬೈಯಲ್ಲಿ ನಡೆದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವಾರ್ಷಿಕ ಮಹಾಸಭೆಯಲ್ಲಿ ಜಿಸಿಸಿಯ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಅಶ್ರಫ್ ಶಾ ಮಾಂತೂರ್, ಯು.ಎ.ಇ ಘಟಕದ ಗೌರವ ಅಧ್ಯಕ್ಷರನ್ನಾಗಿ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲೆ, ಅಧ್ಯಕ್ಷರನ್ನಾಗಿ ಅಮರ್ ಕಲ್ಲುರಾಯ, ಪ್ರಧಾನ ಕಾರ್ಯದರ್ಶಿಯನ್ನಾಗಿ ಇಬ್ರಾಹಿಂ ಬಾಜೂರಿ, ಕೊಶಾಧಿಕಾರಿಯನ್ನಾಗಿ ಅಶ್ರಫ್ ಭಾಯಾರ್ ರವರನ್ನು ನೇಮಿಸಲಾಯಿತು.
ಗಡಿನಾಡು ಸಾಂಸ್ಕೃತಿ ಅಕಾಡೆಮಿ ಕೇಂದ್ರ ಸಮಿತಿಯ ಕೋಶಾಧಿಕಾರಿ ಝೆಡ್.ಎ.ಕಯ್ಯಾರ್ ಹಾಗೂ ಉದ್ಯಮಿ ಶಿವಶಂಕರ ನೆಕ್ರಾಜೆ, ಯೂಸುಫ್ ಶೇಣಿ, ಪಿ ಪಿ, ಮಂಜುನಾಥ ಕಾಸರಗೋಡು,ಅಲಿ ಸಾಗ್ ವಿಜಯಕುಮಾರ ಶೆಟ್ಟಿ ಗಾಣದಮೂಲೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಯು.ಎ.ಇ. ಪ್ರವಾಸದಲ್ಲಿರುವ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರನ್ನು ಹಾಗೂ ಪ್ರಾಧಿಕಾರದ ಸದ್ಯಸರನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯು.ಎ.ಇ. ಘಟಕದ ವತಿಯಿಂದ ಎಲ್ಲಾ ಪದಾಧಿಕಾರಿಗಳು ಸೇರಿ ಸನ್ಮಾನಿಸಿದರು.

ವರದಿ : ಹಾಜಿ ಶುಕೂರ್