ಶ್ರೀನಿವಾಸಪುರ ಆದರ್ಶ ವಿದ್ಯಾಲಯಕ್ಕೆ 2022-23ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯಕ್ಕೆ 2022-23ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜ.24 ರಿಂದ ಫೆ.9 ರವರೆಗೆ ಅರ್ಜಿ ಸ್ವೀಕರಿಸಲಾಗುವುದು ಎಂದು ವಿದ್ಯಾಲಯದ ಮುಖ್ಯ ಶಿಕ್ಷಕ ಸುಬ್ರಮಣಿ ತಿಳಿಸಿದ್ದಾರೆ.
2021-22ನೇ ಸಾಲಿನಲ್ಲಿ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಹೊರ ತಾಲ್ಲೂಕು, ಜಿಲ್ಲೆ ಅಥವಾ ರಾಜ್ಯದಲ್ಲಿ 5ನೇ ತರಗತಿ ಓದುತ್ತಿದ್ದರೂ ಅರ್ಜಿ ಸಲ್ಲಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು, ವಿದ್ಯಾರ್ಥಿಯ ಸ್ಯಾಟ್ಸ್ ಸಂಖ್ಯೆ, ಇತ್ತೀಚಿನ ಪಾಸ್‍ಪೋರ್ಟ್ ಸೈಜ್ ಭಾವ ಚಿತ್ರ, ಆಧಾರ್ ಕಾರ್ಡ್, ಮೀಸಲಾತಿ ಬಯಸಿದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಸಂಖ್ಯೆ, ಪೋಷಕರ ಮೊಬೈಲ್ ಸಂಖ್ಯೆ ಒದಗಿಸಬೇಕು. ಹೆಚ್ಚಿನ ವಿವರಗಳಿಗಾರಿ ಮುಖ್ಯ ಶಿಕ್ಷಕರ ಮೊಬೈಲ್ ಸಂಖ್ಯೆ 9972913949 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.