ಸಂತ ಮೇರಿ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಶ್ರೀ ಪ್ರಕಾಶ ತೋಳಾರ್ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಪ್ರಖ್ಯಾತ ವೈದ್ಯರಾದ ಗೌರವಾನ್ವಿತ ಶ್ರೀ ಪ್ರಕಾಶ್ ತೋಳಾರ್ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ ನಮ್ಮನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸುತ್ತದೆ ಎನ್ನುತ್ತಾ, ಮಾದಕ ಸೇವನೆಯಿಂದ ನಮ್ಮ ಅಂಗಾಂಗಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು.ಅಲ್ಲದೆ ವಿದ್ಯಾರ್ಥಿಗಳು ಅರಿವು ಮೂಡಿಸಿಕೊಳ್ಳಬೇಕು ಎನ್ನುತ್ತಾ ಅನೇಕ ಎಚ್ಚರಿಕೆಯ,ಕಿವಿ ಮಾತುಗಳನ್ನಾಡುತ್ತಾ,ವಿದ್ಯಾರ್ಥಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೆರ್ನಾಂಡಿಸ್ ರವರು ಅಧ್ಯಕ್ಷ ಸ್ಥಾನ ವಹಿಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ, ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ತಿಳಿಸಿದರು. ಉಪ ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ ನಾಯರ್ ರವರು ಸಭೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ ಮಾಡಿಸಲಾಯಿತು.

ಕಾರ್ಯಕ್ರಮ ಪ್ರಾರ್ಥನೆಯಿಂದ ಪ್ರಾರಂಭವಾಗಿ, ವಿದ್ಯಾರ್ಥಿಗಳಾದ ಕುಮಾರಿ ಅಮೃತಾ ಹಾಗೂ ಪ್ರಗತಿ ಕ್ರಮವಾಗಿ ಸ್ವಾಗತಿಸಿ,ವಂದಿಸಿದರು. ಕುಮಾರಿ ನಂದಿತಾ ಹಾಗೂ ಕುಮಾರಿ ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.