ಬಸ್ರೂರೂ ಸರಕಾರಿ ಪ್ರೌಢಶಾಲೆಯ ನಕ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ 2 ರಲ್ಲಿ 616 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಒಂಬತ್ತನೇ ರ‍್ಯಾಂಕ್

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ನಿಧನ

ಸೈoಟ್ ಮೇರಿಸ್ ಪ ಪೂ ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆಯ ಉದ್ಘಾಟನೆ – ಪ್ರಥಮ ಚಿಕೆತ್ಸೆ ಅರಿವು ಕಾರ್ಯಕ್ರಮ

ಬೆಂಗಳೂರು ಆರ್ಚ್‌ಡಯಾಸಿಸ್‌ನ ನಿವ್ರತ್ತ ಆರ್ಚ್ ಬಿಷಪ್ ಅಲ್ಫೋನ್ಸ್ ಮಥಾಯಸ್ ನಿಧನ (96) / Bangalore Retired Archbishop Alphonsus Mathais passed away (96)

ಖತರ್ ನಾಕ್ ಚಡ್ಡಿ ಗ್ಯಾಂಗ್ 5 ಗಂಟೆಯೊಳಗೆ ಎರೆಷ್ಟ್ ತಪ್ಪಿಸಿಕೊಳ್ಳಲು ಪ್ರಯತ್ನ – ಇಬ್ಬರ ಕಾಲಿಗೆ ಗುಂಡು

ಹಾಲಿನ ಟ್ಯಾಂಕರ್-ಬಸ್ ನಡುವೆ ಭೀಕರ ಅಪಘಾತ : 18 ಮಂದಿ ದುರ್ಮರಣ

ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು – ರೈತ ಸಂಘದ ಉಪಾಧ್ಯಕ್ಚ ಬಚ್ಚೇಗೌಡ

ಶ್ರೀನಿವಾಸಪುರ : ಚುನಾವಣೆ ಸಂದರ್ಭದಲ್ಲಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತ ವಿರೋಧಿ 3 ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ರೈತ ಸಂಘದ ಉಪಾಧ್ಯಕ್ಚ ಬಚ್ಚೇಗೌಡ ಆಗ್ರಹಿಸಿದರು.
ಪಟ್ಟಣದ ನೌಕರರ ಭವನದಲ್ಲಿ ಮಂಗಳವಾರ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಬಾರದು, ಹಾಗೂ ಕೇರಳ, ತಮಿಳು ನಾಡು, ತೆಲಂಗಾಣ ರಾಜ್ಯ ಸರ್ಕಾರಗಳಂತೆ ರಾಜ್ಯದಲ್ಲಿಯೂ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲ ಎಂದು ವಿಧಾನ ಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ರಾಜ್ಯದಲ್ಲಿ ನೀರಾವರಿ ಯೋಜನೆಗಳ ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿದ್ದು, ಯೋಜನೆಗಳಿಗೆ ಸೂಕ್ತ ಹಣ ಬಿಡುಗಡೆ ಮಾಡಿ ತೋರಿತವಾಗಿ ಕಾಮಗಾರಿಗಳು ಸಂಪೂರ್ಣಗೊಳ್ಳಲು ಸರ್ಕಾರ ಕ್ರಮವಹಿಸಬೇಕು ಎಂದರು.
ರೈತ ಸಂಘದ ರಾಜ್ಯ ಮುಖಂಡ ಪ್ರಭಾಕರಗೌಡ ಮಾತನಾಡಿ ಜಿಲ್ಲೆಯು ಪದೇಪದೇ ಬರಗಾಲಕ್ಕೆ ಗುರಿಯಾಗುತ್ತಿದ್ದೆ. ಜಿಲ್ಲೆಯ ರೈತರು ಕೃಷಿಯ ಜೊತೆ ಹೈನುಗಾರಿಕೆಯನ್ನು ಉಪ ಕಸುಬಾಗಿ ಮಾಡುತ್ತೀರುತ್ತಾರೆ. ಇಂತಹ ಸಮಯದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟಯು ರೈತರಿಗೆ ನೀಡುತ್ತಿದ್ದ ಹಾಲಿನ ಬೆಲೆಯಲ್ಲಿ 2 ರೂಂ.ಗಳನ್ನು ಕಡಿತ ಮಾಡಿರುವುದು ಜಿಲ್ಲೆಯ ರೈತರಿಗೆ ಮಾಡಿದ ದ್ರೋಹವಾಗಿದೆ. ಹೆಚ್ಚು ಹಾಲು ಉತ್ಪಾದನೆ ಆಗುತ್ತಿದೆ ಮಾರುಕಟ್ಟೆ ಮಾಡಲು ಆಗದೆ ರೈತರಿಗೆ ನೀಡುತ್ತಿದ್ದ ಬೆಲೆಯಲ್ಲಿ ಕಡಿತ ಮಾಡಿರುವುದು ರೈತರಿಗೆ ಮಾಡಿದ ಮೋಸ ವಾಗಿದೆ. ಕೂಡಲೇ ಕಡಿತ ಮಾಡಿರುವ ದರವನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿ ವಿವಿಧ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿದರು.
ರೈತ ಮುಖಂಡರಾದ ಅಬ್ಬಣಿ ಶಿವಪ್ಪ, ಆನಂದ್, ಚಂದ್ರಪ್ಪ, ವೆಂಕಟಸ್ವಾಮಿ ರೆಡ್ಡಿ, ಸೀನಪ್ಪ, ಉಮಾದೇವಿ, ಅನ್ನಪೂರ್ಣ, ಭಾರತಿ ಇದ್ದರು.

ನಿತಿನ್ ಗಡ್ಕರಿಯನ್ನು ಭೇಟಿಯಾದ ಸಂಸದ ಎಂ.ಮಲ್ಲೇಶ್ ಬಾಬು

ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ’ನವ ಸಂಕೇತ್’- ಫ್ರೆಷರ್ಸ್ ಫಿಯೆಸ್ಟಾ