ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು  ಸ್ಥಳೀಯ ಸಹಕಾರದಿಂದ ಅಧಿಕಾರಿಗಳು ಮಾಡಬೇಕಾಗಿದೆ : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ  : ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು  ಸ್ಥಳೀಯ ಸಹಕಾರದಿಂದ ಅಧಿಕಾರಿಗಳು ಮಾಡಬೇಕಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. 

ಪಟ್ಟಣದ ಪುರಸಭೆಯಲ್ಲಿ ಗುರುವಾರ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು. 

ಕುಂದುಕೊರತೆ ಸಭೆಯಲ್ಲಿ ಸಾರ್ವಜಿನಕರೊಂದಿಗೆ ಮಾತನಾಡುತ್ತಾ ಯಾವುದೇ ಕಛೇರಿಯಲ್ಲಿ ತಮ್ಮ ಕೆಲಸ ಕಾರ್ಯಗಳು ನಡೆಯದೆ ಇದ್ದರೆ ಅಥವಾ ನಿಮ್ಮ ಕೆಲಸಗಳನ್ನು ಸಂಬಧಿಸಿದ ಅಧಿಕಾರಿ ಮಾಡಿಕೊಡದೆ ಇದ್ದ ಪಕ್ಷದಲ್ಲಿ ನನಗೆ ಮಾಹಿತಿ ನೀಡಿದರೆ ಆ ಅಧಿಕಾರಿಯೊಂದಿಗೆ ನಿಮ್ಮ ಸಮಸ್ಯೆಯ ಬಗ್ಗೆ ಚರ್ಚೆ ಮಾಡಿ ಪರಿಹಾರ ನೀಡಲಾಗುವುದು ಎಂದು ಭರವಸೆ ಇತ್ತರು. 

ಕ್ಷೇತ್ರಾದ್ಯಾಂತ ಎಲ್ಲಾ ಹಳ್ಳಿಗಳಲ್ಲಿಯೂ ರಸ್ತೆ, ಕುಡಿಯುವ ನೀರು, ಬೀದಿ ದೀಪಗಳು , ಬಗ್ಗೆ ಹಾಗೂ ಪಟ್ಟಣದಲ್ಲಿ ಸ್ವಚ್ಚತೆ ಹಾಗೂ ಇತರೆ ಮೂಲ ಭೂತ ಸೌಲಭ್ಯಗಳ ಸ್ಥಿತಿ ಗತಿಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಕೊರೆತೆಗಳ ಬಗ್ಗೆ ಸಂಬAದ ಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದರು. 

ಇನ್ನು ಕುಂದು ಕೊರತೆ ಸಭೆಗೆ ಕೆಲ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ತಂದ ಅರ್ಜಿಗಳನ್ನು ಪರಿಶೀಲಿಸಿ ಸಂಬAದಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚೆ ಮಾಡಿ ಅರ್ಜಿದಾರನ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ನೀಡುವಂತೆ ಸೂಚಿಸಿದರು. 

ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹಾಗೂ ಅಧಿಕಾರಿಗಳು ಇತರ ಮುಖಂಡರು ಇದ್ದರು.

ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ.) ಸಿಟಿ ವಲಯದ ಬೆಳ್ಳಿ ಹಬ್ಬದ ಸಮಾರಂಭ ವಾಮಂಜೂರಿನಲ್ಲಿ 15.10.2023 ರಂದು ನಡೆಯಲಿದೆ / Catholic Sabha Mangalore Region(R.) City Zone Silver Festival Ceremony to be held at Wamanjur on 15.10.2023

ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ.) ಸಿಟಿ ವಲಯದ ಬೆಳ್ಳಿ ಹಬ್ಬದ ಸಮಾರಂಭ ಆದಿತ್ಯವಾರ ದಿನಾಂಕ 15.10.2023 ರಂದು  ಸಂಜೆ 4:30 ಗಂಟೆಗೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಇವರ ಸಾರಥ್ಯದಲ್ಲಿ ದಿವ್ಯ ಬಲಿ ಪೂಜೆ ವಾಮಂಜೂರ್ ಶ್ರಮಿಕ ಸಂತ ಜೋಸೆಫ್ ದೇವಾಲಯದಲ್ಲಿ ನಡೆಯಲಿದೆ. 6:00 ಗಂಟೆಗೆ ಸಭಾ ಕಾರ್ಯಕ್ರಮವು ವಾಮಂಜೂರ್ ಶ್ರಮಿಕ ಸಂತ ಜೋಸೆಫ್ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ .

ಕಾರ್ಯಕ್ರಮದ ಅಧ್ಯಕ್ಷರಾಗಿ ಕಥೊಲಿಕ್ ಸಭಾ ಸಿಟಿ ವಲಯ ಅಧ್ಯಕ್ಷರಾದ ಶ್ರೀ ವಿಲ್ಫ್ರೆಡ್ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಸಿಟಿ ವಲಯದ ಮುಖ್ಯ ಧರ್ಮಗುರು ಹಾಗೂ ವಾಮಂಜೂರು ಚರ್ಚ್‌ನ ಧರ್ಮಗುರು ವಂ| ಫಾದರ್ ಜೇಮ್ಸ್ ಡಿಸೋಜ, ಕಥೊಲಿಕ್ ಸಭಾ ಮಂಗಳೂರು ಪ್ರದೇಶದ ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜಾ, ಸಿಟಿ ವಲಯದ ಆಧ್ಯಾತ್ಮಿಕ ನಿರ್ದೇಶಕರು ಹಾಗೂ ಆಂಜೆಲೋರ್‌ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಫಾದರ್ ವಿಲಿಯಂ ಮಿನೇಜಸ್, ಕೇಂದ್ರೀಯ ಸಮಿತಿಯ ಹಾಗೂ ಸಿಟಿ ವಲಯದ ಕಾರ್ಯದರ್ಶಿಯಾದ ಶ್ರೀಮತಿ ವಿಲ್ಮಾ ಮೊಂತೇರೊ, 

ಅತಿಥಿಗಳಾಗಿ ಸಿಟಿ ವಲಯದ ಸ್ಥಾಪಕ ಅಧ್ಯಕ್ಷರಾದ ಶ್ರೀ ಮಾರ್ಟಿನ್ ಡಿಸೋಜಾ, ವಾಮಂಜೂರ್ ಚರ್ಚ್‌ನ ಉಪಾಧ್ಯಕ್ಷರಾದ ಶ್ರೀ ಚಾರ್ಲ್ಸ್ ಪಾಯ್ಸ್, ಕಥೊಲಿಕ್ ಸಭಾ, ವಾಮಂಜೂರ್ ಘಟಕದ ಅಧ್ಯಕ್ಷರಾದ ಶ್ರೀ ಪ್ಯಾಟ್ರಿಕ್ ಲೋಬೊ, ಬೆಳ್ಳಿ ಹಬ್ಬದ ಸಂಚಾಲಕರಾದ ಶ್ರೀ ಪ್ರಶಾಂತ್ ಸಲ್ಡಾನ್ಹಾ ಭಾಗವಹಿಸುವರು. ವೇದಿಕೆ ಕಾರ್ಯದ ನಂತರ ಎಲ್ಲಾ ಘಟಕಗಳ ಸಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 

ಕಾರ್ಯಕ್ರಮದ ಕೊನೆಯಲ್ಲಿ ಬೆಳ್ಳಿ ಹಬ್ಬದ ಊಟದ ವ್ಯವಸ್ಥೆ ಇದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

Catholic Sabha Mangalore Region(R.) City Zone Silver Festival Ceremony to be held at Wamanjur on 5.10.2023

Catholic Sabha Mangalore Pradesh (R) City Deanery celebrates its silver jubilee on October 15, 2023, at St. Joseph the Worker Church, Vamanjoor At 4.30 pm, there will be a solemn thanksgiving mass with the main celebrant Bishop Emeritus of Mangalore Diocese Aloysius Paul ‘D’Souza, accompanied by other priests, followed by a cultural programme at 6.00 pm at Vamanjoor Church Sabha Bhavan.

Mr. Wilfred Alvares Bondel, the president of the city deanery, will preside over the celebration with chief guests Rev. Fr. James Dsouza the vicar Forane and Parish priest of Vamanjoor. Mr. Alwyn D’Souza, Panir president of the Central Catholic Sabha Mangalore Pradesh Mrs. Vilma Monteiro, general secretary of the same Rev. Fr. Williams Menezes, parish priest of Angelore Church and spiritual director of the city deanery, is accompanied by guests of honour, including the founder president, Mr. Martin R D’Souza. Mr. Charles Pais vice president of the parish council Vamanjoor church. Mr Patrick Lobo, president of the local body. 

All 10 units coming under the city deanery, Angelore, Bajal,Bajjodi, Bondel, Derebail, Fermai, Kelarai, Neermarga, Shakthinagar, and Vamanjoor—will be performing at the cultural event and the programme will conclude with a fellowship meal.  

Mr. Prashant M Saldanha, convener of the programme, and the organisers are expecting good support from all units and well-wishers in making this Silver Jubilee celebration a memorable one.

ಇಸ್ರೇಲ್‍ – ಹಮಾಸ್ ಉಗ್ರರಿಂದ  ಹಿಂದಿ ಕಿರುತೆರೆ ನಟಿ ಮಧುರಾ ನಾಯ್ಕ್ ತಂಗಿ ಮತ್ತು ಬಾವನ ಹತ್ಯೆ / Hindi TV actress Madhura Naik’s sister and brother-in-law killed by Hamas terrorists in Israel

ಹಿಂದಿ ಕಿರುತೆರೆ ನಟಿ ಮಧುರಾ ನಾಯ್ಕ್ ಕುಟುಂಬಸ್ಥರನ್ನು ಇಸ್ರೇಲ್‍ನಲ್ಲಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ಇನ್‍ಸ್ಟಾಗ್ರಾಮ್‍ನಲ್ಲಿ ನಟಿ ಮಧುರಾ ನಾಯ್ಕ್ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಸದೋರ ಸಂಬಂಧಿ ತಂಗಿ ಒಡೆಯಾ ಮತ್ತು ಆಕೆಯ ಪತಿಯನ್ನು ಹಮಾಸ್ ಉಗ್ರರರು( ಬಂಡೋಕೋರರು) ಹತ್ಯೆ ಮಾಡಿದ್ದಾರೆ. ಮಕ್ಕಳ ಎದುರೇ ಅವರನ್ನು ಕೊಲ್ಲಲಾಗಿದೆ ಎಂದುನಟಿ ಮಧುರಾ ನಾಯಕ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಕಣ್ಣೀರಿಟ್ಟಿದ್ದಾರೆ. ಮಧುರಾ ’ನಾನು ಯೆಹುದಿ ಧರ್ಮಕ್ಕೆ ಸೇರಿದವಳು, ಭಾರತದಲ್ಲಿ ಸುಮಾರು ಯೆಹುದಿಯರ ಸಂಖ್ಯೆ 3000 ಸಾವಿರ ಮಾತ್ರವೇ ಇರಬಹ್ದೆಂದು. ಹೇಳಿಕೊಳ್ಳುತ್ತಾಳೆ.

ಒಟ್ಟಿನಲ್ಲಿ ಒಂದು ಕಡೆ ಹಮಾಸ್ ನಿರಂತರ ರಾಕೆಟ್ ದಾಳಿ ನಡೆಸುತ್ತಿದ್ದರೆ ಮತ್ತೊಂದು ಕಡೆ ಇಸ್ರೇಲ್ ಯುದ್ಧ ವಿಮಾನಗಳ ಏರ್ ಸ್ಟೈಕ್ ಮಾಡುತ್ತಿದೆ. ಇಸ್ರೇಲ್‍ನ ಅಶ್ಕೆಲೋನ್ ಮೇಲೆ ಬುಧವಾರ ಹಮಾಸ್ ರಾಕೆಟ್ ದಾಳಿ ಮಾಡಿತ್ತು ಆದರೆ ಇಸ್ರೇಲ್‍ನ ಐರನ್ ಡೋಮ್ ರಕ್ಷಣಾ ಕ್ಷಿಪಣಿ ವ್ಯವಸ್ಥೆಯಿಂದ ರಾಕೆಟ್‍ಗಳನ್ನು ತಡೆದು ಗಾಳಿಯಲ್ಲಿ ಅವುಗಳನ್ನು ನಾಶ ಮಾಡಲಾಗುತ್ತದೆ.

Hindi TV actress Madhura Naik’s sister and brother-in-law killed by Hamas terrorists in Israel

Hindi TV actress Madhura Naik’s family members were killed in Israel. Actress Madhura Naik shared information about this on Instagram. My cousin Odeya and her husband were killed by Hamas militants (rebels). Actress Madhura Naik wrote on social media that she was killed in front of her children and cried. Madhura, I belong to Judaism, there are only about 3000 thousand Jews in India. She says.
On the one hand, Hamas is carrying out continuous rocket attacks, while on the other hand, Israel is carrying out airstrikes by warplanes. Israel’s Ashkelon was attacked by Hamas rockets on Wednesday, but Israel’s Iron Dome missile defense system intercepted the rockets and destroyed them in the air.
Three Canadians have died and three are missing in Israel, Canadian Foreign Minister Melanie Joly said. More than 4,700 Canadian citizens and permanent residents are registered with the government in Israel, Gaza and the West Bank. He said that six of them have no contact.

ಭಂಡಾರ್ಕಾರ್ಸ್ ಕಾಲೇಜು: ಯಕ್ಷಗಾನ ಮತ್ತು ಸಾಹಿತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೀವನದ ಯಶೋರಹಸ್ಯ’ಕುರಿತು ಉಪನ್ಯಾಸ


ಕುಂದಾಪುರ :- ಅಕ್ಟೋಬರ್ 11ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತಸಂಘ, ಲಲಿತ ಕಲಾಸಂಘ, ಭಾರತೀಯ ರೆಡ್ ಕ್ರಾಸ್ ಘಟಕ, ,ಕನ್ನಡ ಸಾಹಿತ್ಯ ವೇದಿಕೆ ಹಾಗೂ ಐಕ್ಯೂಎಸಿ ಇವರಸಹಯೋಗದಲ್ಲಿ’ ಯಕ್ಷಗಾನ ಮತ್ತು ಸಾಹಿತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೀವನದ ಯಶೋರಹಸ್ಯ ‘ ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಿ.ಎನ್. ಪುರಾಣಿಕ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿಅವರು ” ಸಮಯ ಎನ್ನುವುದು ಎಲ್ಲರಿಗೂ ಸಮಾನವಾಗಿ ಹಂಚಲ್ಪಟ್ಟಿದೆ, ಆದ್ದರಿಂದ ಪ್ರತಿಯೊಬ್ಬರಿಗೂ ಸಮಯಪ್ರಜ್ಞೆ ಇರಬೇಕು, ಸಮಯ ತುಂಬಾ ಅಮೂಲ್ಯವಾದದ್ದು ” ಎಂದರು. ಹಾಗೆಯೇ ವಿದ್ಯಾರ್ಥಿಗಳಿಗೆ ಸತತ ಪ್ರಯತ್ನ, ಶ್ರದ್ದೆ, ತಾಳ್ಮೆ ಇರಬೇಕೆಂದು ಹೇಳಿದರು. ಹೀಗೆ ಜೀವನಕ್ಕೆ ಬೇಕಾದ ಅಮೂಲ್ಯ ಮಾಹಿತಿ ಮತ್ತು ಸಲಹೆಗಳನ್ನು ನೀಡುವುದರ ಜೊತೆಗೆ ಯಕ್ಷಗಾನ ಮತ್ತು ಸಾಹಿತ್ಯದ ಪ್ರಾಮುಖ್ಯತೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಡಾ. ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿಗಳು ಹಾಗೂ ರೆಡ್ ಕ್ರಾಸ್ ಸಂಯೋಜಕರಾದ ಪ್ರೊ. ಸತ್ಯನಾರಾಯಣ್ ಹತ್ವಾರ್, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಕೆ.ಎಂ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಯಶವಂತಿ ಕೆ, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಮೈತ್ರಿಯವರು ಮತ್ತು ಲಲಿತ ಕಲಾ ಸಂಘದ ಸಂಯೋಜಕರಾದ ಪ್ರೊ. ಶಶಾಂಕ್ ಪಟೇಲ್ ರವರು ಉಪಸ್ಥಿತರಿದ್ದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದಿಂದ ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಉದ್ಘಾಟನೆ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕ ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಉದ್ಘಾಟನೆ ಯನ್ನು ರೆಡ್ ಕ್ರಾಸ್ ಸಭಾಪತಿ ಎಸ್.ಜಯಕರ ಶೆಟ್ಟಿ ಯವರು ನಡೆಸಿ ಕೊಟ್ಟರು. ಮತ್ತು ರೆಡ್ ಕ್ರಾಸ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಯವರು ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಸಂಯೋಜಕರಾದ ಯೋಗೀಶ್ ಅತಿಥಿ ಗಳನ್ನು ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್ ಕ್ರಾಸ್ ಸಂಯೋಜಕ ರಾದ ಸತ್ಯನಾರಾಯಣ ಪುರಾಣಿಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ದರು. ಕಾರ್ಯಕ್ರಮ ದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ ಮತ್ತು ಸದಸ್ಯರಾದ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ಇನ್ನೋರ್ವ ಸಂಯೋಜಕರಾದ ಮಾಲತಿ ವಾದಿಸಿದರು ಹಾಗೂ ವಿದ್ಯಾರ್ಥಿನಿ ಶಿಲ್ಪಾ ನಿರೂಪಿಸಿದರು.

ರೆಡ್ ಕ್ರಾಸ್ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ( USA) ಕೊಡ ಮಾಡಿದ ರೂಪಾಯಿ ಒಂದು ಲಕ್ಷ ವಿದ್ಯಾರ್ಥಿ ವೇತನ ಹದಿನೇಳು ಬಡ ವಿದ್ಯಾರ್ಥಿಗಳಿಗೆ ನೀಡಲಾಯಿತು.

ಭಂಡಾರ್ಕಾರ್ಸ್ ಪದವಿ ಕಾಲೇಜ್ – ಡಾ. ರಾಮಚಂದ್ರ ಶೆಟ್ಟಿಗಾರ್ ಅವರಿಗೆ ಶ್ರದ್ಧಾಂಜಲಿ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಡಾ. ರಾಮಚಂದ್ರ ಶೆಟ್ಟಿಗಾರ್ ಅವರು ಅಕ್ಟೋಬರ್ 10ರಂದು ನಿಧನರಾದರು.  ಅಕ್ಟೋಬರ್ 11ರಂದು  ಶ್ರದ್ಧಾಂಜಲಿ ಸಭೆ ಕರೆದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಮತ್ತಿತರ ಉಪನ್ಯಾಸಕರು ಪುಷ್ಪನಮನ ಸಲ್ಲಿಸಿ ನಿಧನರಾದ ಅವರಿಗೆ ಚಿರಶಾಂತಿ ಕೋರಿದರು. ಡಾ.ರಾಮಚಂದ್ರ ಶೆಟ್ಟಿಗಾರ್ ಅವರು ಕುರಿತುಇತಿಹಾಸವಿಭಾಗಮುಖ್ಯಸ್ಥಪ್ರೊಗೋಪಾಲ್ಕೆ ಮಾತನಾಡಿದರು.

ಅರಣ್ಯ ಭೂಮಿ ಒತ್ತುವರಿ ಕಾರ್ಯಚಾರಣೆ ಮುಂದುವರೆಸಿ ಬಲಾಡ್ಯಗೂ, ಬಡವರಿಗೂ ಒಂದೇ ಕಾನೂನು ಎಂದು ಸಾಭೀತುಪಡಿಸಬೇಕು-ರೈತ ಸಂಘ ಒತ್ತಾಯ

ಕೋಲಾರ, ಆ.11: ಅರಣ್ಯ ಭೂಮಿ ಎರಡನೇ ಒತ್ತುವರಿ ಕಾರ್ಯಚಾರಣೆ ಮುಂದುವರೆಸಿ ಬಲಾಡ್ಯ ಶ್ರೀಮಂತರಿಗೂ ಬಡವರಿಗೂ ಕಾನೂನು ಒಂದೇ ಎಂದು ಸಾಭೀತುಪಡಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲುರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಆಕ್ರಮ ದರಕಾಸ್ತ್ ಕಮಿಟಿ ಮೂಲಕ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ 30 -40 ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಮಂಜೂರಾತಿ ನೆಪದಲ್ಲಿ 3200 ಎಕರೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮಾತ್ರ ಒತ್ತುವರಿ ಕಾರ್ಯಚಾರಣೆ ಮಾಡುವ ಮುಖಾಂತರ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂಬ ಗಾದೆಯಂತೆ ಮೊದಲನೇ ಹಂತದಲ್ಲಿ 1550 ಎಕರೆ ಅರಣ್ಯ ಭೂಮಿಯನ್ನು ಬಲಾಡ್ಯ ಭೂಗಳ್ಳರಿಂದ ವಶಪಡಿಸಕೊಂಡ ಅರಣ್ಯ ಅಧಿಕಾರಿಗಳಿಗೆ ರೈತ ಸಂಘದಿಂದ ಅಭಿನಂದನೆ ಸಲ್ಲಿಸಿ ಎರಡೇ ಹಂತದ ಕಾರ್ಯಾಚಾರಣೆ ಪ್ರಾರಂಭ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
ಅರಣ್ಯ ಒತ್ತುವರಿ ತೆರೆವುಗೊಳಿಸುತ್ತಿರುವ ಅಧಿಕಾರಿಗಳ ವಿರುದ್ದ ತನ್ನ ಪ್ರತಾಪವನ್ನು ತೋರಿಸುವ ಜೊತೆಗೆ ಬಲಾಡ್ಯ ಭೂಗಳ್ಳರ ಪರ ನಿಂತು ದೌರ್ಜನ್ಯ ದಬ್ಬಾಳಿಕೆ ಮಾಡುತ್ತಿರುವ ಸಂಸದರ ಒತ್ತಡಕ್ಕೆ ಅರಣ್ಯ ಅಧಿಕಾರಿಗಳು ಮಣಿದಿದ್ದೀರಾ ಎಂದು ಪ್ರಶ್ನೆ ಮಾಡಿದರು.
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ಅರಣ್ಯ ಅಧಿಕಾರಿಗಳು ಶ್ರೀಮಂತರಿಗೆ ಒಂದೇ ಕಾನೂನು ಪಾಲನೆ ಮಾಡಬೇಕು ಅದನ್ನು ಬಿಟ್ಟು ಸಣ್ಣ ಪುಟ್ಟ ರೈತರ ಭೂ ಒತ್ತುವರಿ ತೆರೆವುಗೊಳಿಸಿ ನೂರಾರು ಎಕರೆ ಒತ್ತುವರಿದಾರರ ಒತ್ತುವರಿ ತೆರೆವುಗೊಳಿಸದೆ ದಿನಗಳು ಕಳೆಯುವುದು ಸಾರ್ವಜನಿಕರು ಅರಣ್ಯ ಇಲಾಖೆಯ ಮೇಲಿಟ್ಟಿರುವ ಕಳೆದು ಕೊಳ್ಳುವಂತಾಗುತ್ತದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಹೆಚ್ಚಿನ ಪೋಲಿಸ್ ಭದ್ರತೆ ಪಡೆದು ಎರಡನೇ ಅರಣ್ಯ ಒತ್ತುವರಿ ಕಾರ್ಯಚಾರಣೆ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲು ರವರು ಅರಣ್ಯ ಭೂಮಿ ನನ್ನ ಜನ್ಮ ಕೊಟ್ಟ ತಾಯಿಗೆ ಸಮಾನ ಅರಣ್ಯ ಭೂಮಿ ಉಳಿವಿಗಾಗಿ ನನ್ನ ಪ್ರಾಣವನ್ನು ಬೇಕಾದರೂ ಒತ್ತೆ ಇಡುತ್ತೇನೆಹೊರತು ಒಂದಿಚು ಅರಣ್ಯ ಭೂಮಿ ಭೂಗಳ್ಳರ ಪಾಲಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ಮನವಿ ನೀಡುವಾಗ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್, ರಾ.ಪ್ರ. ಕಾರ್ಯದರ್ಶಿ ಫಾರೂಖ್ ಪಾಷ, ಜುಬೇರ್‍ಪಾಷ, ಬಂಗಾರಿ ಮಂಜು, ಭಾಸ್ಕರ್, ವಿಜಯ್ ಪಾಲ್, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ವೆಂಕಟೇಶಪ್ಪ, ರಾಮಸಾಗರ ವೇಣು, ಸುರೇಶ್‍ಬಾಬು, ಕದಿರಿನತ್ತ ಅಪ್ಪೋಜಿರಾವ್, ಯಾರಂಘಟ್ಟ ಗಿರೀಶ್, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ನರಸಿಂಹಯ್ಯ, ತೆರ್ನಹಳ್ಳಿ ಆಂಜಿನಪ್ಪ ಸುಪ್ರೀಂಚಲ, ವಿನುತ್‍ಗೌಡ, ಶೈಲಜ, ರಾಧಮ್ಮ, ಚೌಡಮ್ಮ, ಶೋಭ, ಮುಂತಾದವರಿದ್ದರು.

ಮಾನಸಿಕ ಅಸ್ವಸ್ಥ ದಿನಾಚರಣೆ ಮಾನಸಿಕವಾಗಿ ಅಸ್ವಸ್ಥಾದವರ ಬಗ್ಗೆ ಜಾಗೃತಿ, ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ : ಸಿವಿಲ್ ನ್ಯಾಯಾದೀಶ ಬಿ.ಕೆ.ಮನು

ಶ್ರೀನಿವಾಸಪುರ : ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥಾದವರ ಬಗ್ಗೆ ಜಾಗೃತಿ ಹಾಗು ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್ಯಾಯಾದೀಶರಾದ ಬಿ.ಕೆ.ಮನು ಹೇಳಿದರು.
ತಾಲೂಕಿನ ಪಿಲ್ಲಕುಂಟೆ ಗ್ರಾಮದ ದಿವ್ಯಜ್ಯೋತಿ ವೃದ್ಧಾಶ್ರಮದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ ಮಂಗಳವಾರ ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾನಸಿಕ ಆರೋಗ್ಯ ಪರಿಸ್ಥಿತಿಗಳ ಪ್ರಭುತ್ವ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸುವ ಸಾಮೂಹಿಕ ಪ್ರಯತ್ನಗಳು ಇದಾಗಿವೆ. ಇಂತಹ ಕಾರ್ಯಕ್ರಮಗಳಿಂದ ಮಾನಸಿಕ ಆರೋಗ್ಯಕ್ಕೆ ಸಂಬಂದಿಸಿದ ಕಳಂಕವನ್ನು ಕಡಿಮೆ ಮಾಡಲು ಮತ್ತು ಅಗತ್ಯವಿದ್ದಾಗ ಸಹಾಯ ಮತ್ತು ಬೆಂಬಲವನ್ನು ಪಡೆಯಲು ಸಹಕಾರಿಯಾಗುತ್ತದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾನಸಿಕ ಅಸ್ವಸ್ಥರನ್ನು ಸರಿಪಡಿಸುವ ವೇದಿಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾನಸಿಕ ಅಸ್ವಸ್ಥರು ಪಾಲ್ಗುಳ್ಳುವದರಿಂದ ತಮ್ಮ ಸಮಸ್ಯೆಗಳು ಇದ್ದರೆ ಅವುಗಳನ್ನು ಆಪ್ತಸಮಾಲೋಚನೆಗಳನ್ನು ನಡೆಸಿ ಬಗಹರಿಸಕೊಳ್ಳಬಹುದಾಗಿದೆ ಎಂದರು.
ಇನ್ನು ಹಿರಿಯ ನಾಗರೀಕರಿಗೆ ಸಮಾಜ ಗೌರವ ಕೊಡಬೇಕು. ಅವರಿಗೆ ಸಿಗಬೇಕಾದ ಅವಕಾಶಗಳು ಒದಗಿಸುವ ನೆಲೆಯಲ್ಲಿ ಸ್ಪಂದಿಸಬೇಕು. ಅವರಿಗೆ ಸಾಂತ್ವನದ ಮಾತುಗಳು ನಾಡಿ ಅವರೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದರು.
ಹಿರಿಯರು ಆರೋಗ್ಯ ನೆಮ್ಮದಿ ಜೀವನವನ್ನು ದ್ಯಾನ, ಯೋಗ ಮಾಡುವುದ ಮೂಲಕ ನಿಮ್ಮ ಆರೋಗ್ಯವನ್ನು ಸರಿಪಡಿಸಿಕೊಳ್ಳುತ್ತಾ ನೆಮ್ಮದಿ ಜೀವನವನ್ನು ನಡೆಸಬೇಕು ಎಂದು ಸಲಹೆ ನೀಡಿದರು.
ತಹಶೀಲ್ದಾರ್ ಶರೀನ್‍ತಾಜ್ ಮಾತನಾಡಿ ಹಿರಿಯರು ತಮ್ಮ ಹಳೆಯ ಕಹಿ ಘಟನೆಗಳನ್ನು ಮರೆತು, ನೆಮ್ಮದಿ ಜೀವನವನ್ನು ನಡೆಸುವಂತೆ ಸಲಹೆ ನೀಡಿ , ತಾಲೂಕು ಆಡಳಿತವು ನಿಮ್ಮೊಂದಿಗೆ ಇದ್ದು , ಸರ್ಕಾರದ ಸೌಲಭ್ಯಗಳನ್ನು ಪಡೆದು ನೆಮ್ಮದಿ ಜೀವನವನ್ನು ನಡೆಸುವಂತೆ ಸಲಹೆ ನೀಡಿದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಜಯರಾಮೇಗೌಡ, ವಕೀಲರಾದ ಜಯಲಕ್ಷ್ಮೀ, ಎನ್.ಎಸ್.ಶ್ರೀನಿವಾಸಗೌಡ, ಆರೋಗ್ಯ ಇಲಾಖೆ ಕ್ಷೇತ್ರ ಅಧಿಕಾರಿ ಆಂಜಲಮ್ಮ ಮಾತನಾಡಿದರು.
ಟಿಎಚ್‍ಒ ಮಹಮ್ಮದ್ ಶರೀಫ್, ದಿವ್ಯ ಜ್ಯೋತಿ ವೃದ್ದಾಶ್ರಮ ಕಾರ್ಯದರ್ಶಿ ನರಸಿಂಹಪ್ಪ, ದಿವ್ಯ ಜ್ಯೋತಿ ವೃದ್ಧಾಶ್ರಮ ನಿರ್ದೇಶಕ ಟಿ.ಎಂ.ರಾಮಕೃಷ್ಣೇಗೌಡ ಇದ್ದರು.

ನವೆಂಬರ್ 6ರಿಂದ14ರ ವರೆಗೆ ಕುಂದಾಪುರದಲ್ಲಿ ಶಾಲಾ ಮತ್ತು ಕಾಲೇಜು ಮಟ್ಟದ 1೦ ಓವರ್‌ಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ : ಗೌತಮ್ ಶೆಟ್ಟಿ


ಕುಂದಾಪುರ: ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉಡುಪಿ ಜಿಲ್ಲೆಯ ವತಿಯಿಂದ ಶಾಲಾ ಮತ್ತು ಕಾಲೇಜ್ ಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಮೆಂಟ್ ನವೆಂಬರ್ 6ರಿಂದ ನವೆಂಬರ 14, 2023ರ ವರೆಗೆ ಕುಂದಾಪುರದಲ್ಲಿ ಆಯೋಜಿಸಲಾಗಿದೆಂದು ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷಿನಿನ ಅಧ್ಯಕ್ಷರಾದ ಗೌತಮ್ ಶೆಟ್ಟಿ ಅವರು ತಿಳಿಸಿದ್ದಾರೆ.
ಈ ಪಂದ್ಯಾಟವು ಶಾಲಾ ಮತ್ತು ಕಾಲೇಜು ಮಟ್ಟ ಇದ್ದು, ಈದು ಎರಡು ಹಂತಗಳಲ್ಲಿ ನಡೆಯಲಿದೆ.
1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಶಾಲಾ ಮಟ್ಟದಲ್ಲಿ, ಪಿಯುಸಿಯಿಂದ ಡಿಗ್ರಿವರೆಗಿನ ವಿದ್ಯಾರ್ಥಿಗಳು ಕಾಲೇಜು ಮಟ್ಟದಲ್ಲಿ ಸ್ಪರ್ಧಿಸಬಹುದಾಗಿದೆ. ಇದು 1೦ ಓವರ್‌ಗಳ ಟೂರ್ನ್ಮೆಂಟ್ ಆಗಿರುತ್ತದೆ.ಈ ಪಂದ್ಯಾಟಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ.
ಈ ಪಂದ್ಯಾಟದ ಹೆಚ್ಚಿನ ವಿವರ ಮತ್ತು ಮಾಹಿತಿಗಾಗಿ 9901850385 (ಚೇತನ್), 9964244946 (ಪ್ರವೀಣ್), 8660457633-ಪ್ರಶಾಂತ 8310010819 (ಅಜೀಜ್) ಇವರನ್ನು ಸಂಪರ್ಕಿಸಬಹುದಾಗಿದೆ
.