ಶ್ರೀ ವೀರಾಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಪೂರ್ವಭಾವಿ ಸಭೆ

ಶ್ರೀ ವೀರಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಾಂತಾವರ ಹಾಗೂ ಜೀರ್ಣೋದ್ಧಾರ ಸಮಿತಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 08-10-2023ರಂದು ನಡೆದ ಊರ ಗ್ರಾಮಸ್ಥರ ಹಾಗೂ ಸಾರ್ವಜನಿಕರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಬಗ್ಗೆ ಸಮಾಲೋಚನೆಯ ಪೂರ್ವಭಾವಿ ಸಭೆಯು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಎಸ್. ರತ್ನಾಕರ್ ಶೇರೆಗಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಸ್ತಾವಿಕವಾಗಿ ಕಂದಾವರ ಗ್ರಾಮ ಪಂಚಾಯತ್ ಸದಸ್ಯರು, ಬಸ್ರೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರು ಹಾಗೂ ಶ್ರೀ ವೀರಾಂಜನೇಯ ಮಿತ್ರ ವೃಂದ್ರ (ರಿ.) ಅಧ್ಯಕ್ಷರಾದ ಎಸ್. ಶೀನ ಪೂಜಾರಿ ಇವರು ದೇವಸ್ಥಾನದ ಈ ಹಿಂದೆ ನಡೆದು ಬಂದ ಬಗ್ಗೆ ಸವಿಸ್ತಾರವಾಗಿ ಹೇಳಿದರು.
ಜೀಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಪೂಜಾರಿಯವರು ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯದ ಬಗ್ಗೆ ಭಕ್ತಾದಿಗಳಿಂದ ಜೀರ್ಣೋದ್ಧಾರ ಕಾರ್ಯದಲ್ಲಿ ಸಹಕಾರ ನೀಡಬೇಕಾಗಿ ಕೇಳಿಕೊಂಡರು. ಧಾರ್ಮಿಕ ಮುಖಂಡ ಕೃಷ್ಣದೇವ ಕಾರಂತರು ಹೇಗೆ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು. ಪುರೋಹಿತರಾದ ಶ್ರೀಪತಿ ಕಂಬಿಕಲ್ಲಿ ಕಕ್ಕುಂಜಿ ಇವರು ದೇವಸ್ಥಾನ 800 ವರ್ಷಗಳ ಇತಿಹಾಸವುಳ್ಳ ಪ್ರಸಿದ್ಧ ವೀರಾಂಜನೇಯ ದೇವಸ್ಥಾನವಾಗಿರುತ್ತದೆ. ಧಾರ್ಮಿಕ ವಿಧಿ ವಿಧಾನ ದೇವಸ್ಥಾನದ ಮಹತ್ವದ ಬಗ್ಗೆ ಸವಿಸ್ತಾರವಾಗಿ ಹೇಳಿದರು. ವಕೀಲರಾದ ರತ್ನಾಕರ ಶೆಟ್ಟಿ ಸಟ್ವಾಡಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸಭೆಯಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಜೀರ್ಣೋದ್ಧಾರದ ಕಾರ್ಯದಲ್ಲಿ ಸಹಕಾರ ನೀಡವುದಾಗಿ ಭರವಸೆಯನ್ನು ನೀಡಿರುತ್ತಾರೆ. ವೇದಿಕೆಯಲ್ಲಿ ಕಂದಾವರ ಗ್ರಾಮ ಪಂಚಾಯತಿನ ಅಧ್ಯಕ್ಷಾರಾ ಅನುಪಮ ಶೆಟ್ಟಿ, ಮಾಜಿ ಉಪಾಧ್ಯಕ್ಷ ಶೋಭಾ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಸಂಜೀವ ಮೇಸ್ತ, ಉದ್ಯಮಿ ದಿನಕರ ಶೆಟ್ಟಿ, ಗ್ರಾಮ ಪಂಚಾಯತಿನ ಸದಸ್ಯರಾದ ಅಭಿಜಿತ್ ಕೊಠಾರಿ, ಊರಿನ ಹಿರಿಯರಾದ ಗೋಪಾಲ ಎನ್. ಉಗ್ರಾಣಿ, ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು. ಸ್ವಾಗತವನ್ನು ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ವೀರಾಂಜನೇಯ ಮಿತ್ರ ವೃಂದ (ರಿ.) ಇದರ ಕಾರ್ಯದರ್ಶಿಯಾದ ಸುರೇಶ್ ಕೋಟೆಗಾರ್, ಜೀಣೋದ್ಧಾರ ಸಮಿತಿಯ ಕಾರ್ಯದರ್ಶಿ ದೇವೇಂದ್ರ ಎನ್. ಉಗ್ರಾಣಿ ನಿರೂಪಿಸಿದರು. ಸತ್ಯನಾರಾಯಣ ಜಿ. ಧನ್ಯವಾದ ಅರ್ಪಿಸಿದರು.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ – ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿಶೇಶ ಸಾಧನೆ ಮಾಡಿದವರಿಗೆ ಸನ್ಮಾನ

Photo: Richard Dsouza


ಉಡುಪಿ: ಅ.8: ನಮ್ಮ ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ನಮ್ಮಲ್ಲಿ ಡಾಕ್ಟರ್ ಎಂಜಿನಿಯರ್ ಮತ್ತು ಇತರ ಕ್ಷೇತ್ರಗಳಲ್ಲಿ ಇದ್ದಾರೆ, ಆದರೆ ಸರಕಾರಿ ಸೇವೆಯ ಕ್ಷೇತ್ರದಲ್ಲಿ ಬಹಳ ವಿರಳ ಅದರಲ್ಲಿ ನಮ್ಮ ಮಕ್ಕಳ ಆಸಕ್ತಿ ಹೆಚ್ಚಬೇಕು. ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರ ಅನುಗ್ರಹದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದಾಗಿದೆ, ಶಿಕ್ಷಣ ಕ್ಷೇತ್ರ ವಿಸ್ತಾರವಾಗಿದ್ದು ಹೊಸ ಹೊಸ ಪ್ರಯೋಗಗಳಿಗೆ ಇಂದಿನ ವಿದ್ಯಾರ್ಥಿ ಸಮುದಾಯ ಆಸಕ್ತಿಯನ್ನು ತೋರಿದಾಗ ಉನ್ನತ ಸ್ಥಾನ ಲಭಿಸಲು ಸಾಧ್ಯವಿದೆ. ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ಸಮಾಜದಲ್ಲಿ ಹಲವಾರು ಅವಕಾಶಗಳಿದ್ದು ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕಾಗಿದೆ. .
ಭಾರತ ಸರಕಾರದ ಅಂಚೆ ಇಲಾಖಾ ಮಂಡಳಿಯ ಮಾಜಿ ಸದಸ್ಯ ನಿವೃತ್ತ ಸದಸ್ಯ ಡಾ| ಚಾರ್ಲ್ಸ್ ಲೋಬೊ ದಿಕ್ಸೂಚಿ ಭಾಷಣ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಎದುರಿಸುವತ್ತ ಗಮನ ಹರಿಸಬೇಕು. ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸರಕಾರಿ ಹುದ್ದೆಗಳತ್ತ ಆಸಕ್ತಿ ತೋರಬೇಕು ಇದಕ್ಕಾಗಿ ಹೆತ್ತವರ ಕರ್ತವ್ಯ ಹೆಚ್ಚಿದೆ, ಹೆತ್ತವರು ಅವರಲ್ಲಿ ಪ್ರೇರಣೆ ತುಂಬಬೇಕು, ಈ ವಿಶಯದಲ್ಲಿ ಪ್ರಾಥಮಿಕ ಹಂತದಲ್ಲಿಯೇ ಪ್ರಯತ್ನ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದರು.
ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ 53 ಚರ್ಚುಗಳಲ್ಲಿ ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾ ನೀಡಲಾಯಿತು. ಅಲ್ಲದೆ ವೀಶೆಷ ಸಾಧನೆ ಮಾಡಿದ ಪಿಎಚ್ ಡಿ ಪದವಿ ಪಡೆದ ಡಾ|ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಮತ್ತು ಚಾರ್ಟೆಡ್ ಅಕೌಂಟ್ ಪದವಿ ಪಡೆದ ವಿನಾರ್ಡ್ ಜೋಸೇಫ್ ಡಿಕೊಸ್ತಾ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ವಹಿಸಿ ಹಲವಾರು ವರ್ಷಗಳಿಂದ ಈ ಕಾರ್ಯಕ್ರಮದಲಕ್ಕೆ ಸಹಾಯ ಧನ ನೀಡುವ ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಗ್ಲ್ಯಾಡಿಸ್ ಡಿಸಿಲ್ವಾ ಅವರಿಗೆ ಹ್ರತ್ಪೂರ್ವಕ ಧನ್ಯವಾದಗಳನ್ನು ನೀಡಿದರು.
ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಮಾತನಾಡಿ ನಮ್ಮ ಸಮುದಾಯದವರು ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ನೀಡಬೇಕು, ಅದರಲ್ಲಿಯೂ ಈಗ ರಕ್ಷಣ ವಿಭಾಗದಲ್ಲಿ ಕೊರತೆ ಕಾಣುತ್ತೀದೆ ಅದರಲ್ಲಿಯೂ ಆಸಕ್ತಿವಹಿಸಬೇಕು’ ಎಂದರು. ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕ, ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ “ಇವತ್ತು ಸಾಧನೆ ಮಾಡಿ ಸನ್ಮಾನ ಪಡೆದ ಸಿಂಡ್ರೆಲಾ ಮತ್ತು ವಿನಾರ್ಡ್ ಇಬ್ಬರೂ ನನಗೆ ತಿಳಿದಿರುವರು, ಅವರು ನಿರಂತರ ಕಲಿತು ಸಾಧನೆ ಮಾಡಿದವರು, ಅವರಂತೆ ಇವತ್ತು ವಿದ್ಯಾರ್ಥಿ ಪುರಸ್ಕಾರ ಪಡೆದ ಮಕ್ಕಳು ಪ್ರಯತ್ನಿಸಬೇಕು” ತಿಳಿಸಿದರು.
ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಂಚಾಲಕರಾದ ಡಾ| ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಕಾರ್ಯದರ್ಶಿ ಒಲಿವೀಯಾ ಡಿಮೆಲ್ಲೊ ವಂದಿಸಿದರು. ಲೆರಿಸ್ಸಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಪ್ರಿಯಾಂಕಾ ಗಾಂಧಿಯವರು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದರು;ಬಿಸಿಯೂಟ ನೌಕರರಿಗೆ 6000 ವೇತನಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ ಅಕ್ಟೋಬರ್ 7 : ಪ್ರಜಾ ಸೇವಾ ಸಮಿತಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ರವರ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕೋಲಾರ ತಾಲೂಕು ಪಂಚಾಯಿತಿ ಕಾರ್ಯನಿವಾರಣಾಧಿಕಾರಿಗಳಾದ ಮುನಿಯಪ್ಪ ರವರ ಮುಖಾಂತರ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರಿಗೆ ಅಕ್ಷರ ದಾಸೋಹ ನೌಕರರ ಬೇಡಿಕೆಗಳ ಮನವಿ ಪತ್ರವನ್ನು ರವಾನೆ ಮಾಡಲಾಯಿತು
ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಮಾತನಾಡಿ ಕಾಂಗ್ರೆಸ್ ವರಿಷ್ಠರಾದ ಪ್ರಿಯಾಂಕಾ ಗಾಂಧಿ ರವರು ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅಕ್ಷರ ದಾಸೋಹ ನೌಕರರಿಗೆ 6000 ವೇತನವನ್ನು ಹೆಚ್ಚಳ ಮಾಡಲಾಗುವುದೆಂದು ಘೋಷಣೆ ಮಾಡಿದ್ದರು. ಈಗ ಅವರದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಈಗ ಬಿಸಿಊಟ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಯಿತು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಯುಕೆಜಿಯನ್ನ ಪ್ರಾರಂಭ ಮಾಡಲು ಸರ್ಕಾರ ಕ್ರಮ ವಹಿಸಬೇಕು ಸರ್ಕಾರಿ ನೌಕರರ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸುವ ಕಾನೂನನ್ನು ಸರ್ಕಾರ ರೂಪಿಸಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಕೆಲಸಗಳಲ್ಲಿ ಮೊದಲ ಆಧ್ಯತೆ ನೀಡಬೇಕು. ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಿಗೆ ಸಿಜಿ ಬಿಲ್‍ನ್ನು ಸಹಿಯನ್ನು ಮಾಡುವುದನ್ನು ಹಿಂಪಡೆದು ಈ ಹಿಂದೆ ಇದ್ದ ರೀತಿ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಶಾಲೆಯ ಮುಖ್ಯ ಅಡಿಗೆಯವರಿಗೆ ಸಿಜಿ ಬಿಲ್ಲಿನ ಸಹಿ ಮಾಡುವ ಅಧಿಕಾರವನ್ನು ನೀಡಬೇಕು. ಅಕ್ಷರ ದಾಸೋಹ ನೌಕರರು ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಮತ್ತು ಕುಕ್ಕರ್ ಇಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಸಂಪೂರ್ಣವಾಗಿ ವಹಿಸಿಕೊಂಡು ಹೆಣ್ಣು ಮಕ್ಕಳು ಪರವಾಗಿ ನಿಲ್ಲಬೇಕು. ಬಿಸಿಯೂಟ ನೌಕರರಿಗೆ ಕೆಲವು ಕಡೆ ಎಸ್‍ಡಿಎಂಸಿ ಮತ್ತು ಕೆಲವು ಶಾಲಾ ಶಿಕ್ಷಕರುಗಳ ಕಡೆಯಿಂದ ತೊಂದರೆ ಆಗುತ್ತಿದ್ದು, ಅದನ್ನ ಸರಿಪಡಿಸಲು ಜಿಲ್ಲಾ ಮಟ್ಟದ ವಿಶೇಷ ತಂಡವನ್ನು ರಚನೆ ಮಾಡಬೇಕು ಎಂಬ ಒತ್ತಾಯಗಳನ್ನ ಸಲ್ಲಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿವಾರಣಅಧಿಕಾರಿ ಮುನಿಯಪ್ಪ ಅಕ್ಷರ್ ದಾಸೋಹ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಸುಬ್ರಮಣಿ ಮನವಿ ಪತ್ರವನ್ನು ಸ್ವೀಕರಿಸಿದರು ಹಾಗೂ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿವಾರಣಾಧಿಕಾರಿಗಳಾದ ಮುನಿಯಪ್ಪ ರವರು ಬಿಸಿಯೂಟ ನೌಕರರಿಗೆ ಸರಕಾರದಿಂದ ಬರುವ ಯೋಜನೆಗಳನ್ನು ಸಕಾಲಕ್ಕೆ ಅಡುಗೆಯವರಿಗೆ ತಲುಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಶಾಲೆಗಳಲ್ಲಿ ಏನಾದರೂ ಅಡುಗೆ ನೌಕರರಿಗೆ ಸಮಸ್ಯೆಯಾದಲ್ಲಿ ತಕ್ಷಣ ತಮ್ಮ ಗಮನಕ್ಕೆ ತರಲು ಅಡುಗೆ ನೌಕರರಿಗೆ ತಿಳಿಸಿದರು. ತಾಲೂಕು ಪಂಚಾಯಿತಿ ಹಂತದಲ್ಲಿ ಆಗಬೇಕಾದ ಕೆಲಸಗಳನ್ನ ಅಡುಗೆ ನೌಕರರಿಗೆ ಮಾಡಿಕೊಡುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಕಲ್ವಮಂಜಲಿ ರಾಮುಶಿವಣ್ಣ ಕೋಲಾರ, ಜಿ ನಾರಾಯಣಸ್ವಾಮಿ, ಮಮತಾ, ಚಲ್ದಿಗಾನಹಳ್ಳಿ ಮಂಜುಳಮ್ಮ, ವಕ್ಕಲೇರಿ ನಾಗವೇಣಮ್ಮ, ಸುಗುಟೂರು ಶೋಭಾ, ಆರತಿ, ಗಿರಿಜಾ, ಅಂಜನಮ್ಮ, ಮಂಜುಳಾ, ಲಕ್ಷ್ಮಮ್ಮ, ರತ್ನಮ್ಮ, ಸುನಂದಮ್ಮ, ನಾರಾಯಣಮ್ಮ, ಮೀನಾಕ್ಷಿ, ಗೌರಮ್ಮ, ಶೈಲಮ್ಮ, ಅಂಬಿಕಾ, ಮುನಿರತ್ನಮ್ಮ, ಶೋಭಾ, ಅಖಿಲ, ಮಂಜುಳಮ್ಮ, ಸಾವಿತ್ರಮ್ಮ, ಕೋಕಿಲಮ್ಮ, ಆಶಾ, ಜಯಂತಿ, ಪಲ್ಲವಿ, ವರಲಕ್ಷ್ಮಿ, ಗೌರಮ್ಮ, ಶೈಲಮ್ಮ, ಮುನಿರತ್ನ, ಅನಿತಾ, ರಾಧಮ್ಮ, ಮುನಿಯಮ್ಮ, ಪ್ರಮೀಳಮ್ಮ, ಕನ್ಯಮ್ಮ, ಜರೀನಾ ಆಯುμï ಜಬೀನ ಫಾರಸ ಬೇಗಂ, ಕೀರ್ತಿ, ಗಿರಿಜಮ್ಮ, ಮಾಲಾಶ್ರೀ ಇನ್ನು ಮುಂತಾದ ನೌಕರರು ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ “ಆರಂಭ”

‘ಕುಂದಾಪುರ: ಅಕ್ಟೋಬರ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ “ಆರಂಭ ” ಎಂಬ 2023-24 ನೇ ಸಾಲಿನ ಕಾರ್ಯಾಚಟುವಟಿಕೆಗಳನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮೋಹನ್ ರಾವ್ “ಕೃತಕ ಬುದ್ಧಿಮತ್ತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಬಗ್ಗೆ ನೀಡಿದರು.
ಚೆಂಡೆ ವಾದನ, ಬಲೂನ್ ಹಾರಾಟ ಬ್ಯಾನರ್ ಪ್ರದರ್ಶನ ಮತ್ತು ಹೂವು ಬಣ್ಣಗಳ ಚದಉರಇಸಉವಇಕಎಯ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಿ.ವಿಜಯ ಕುಮಾರ್ ಕೆ.ಎಂ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥೆ ಅರ್ಚನಾ ಅರವಿಂದ್ ಕುಮಾರ್ , ವಿಭಾಗದ ಉಪನ್ಯಾಸಕರಾದ ಪ್ರಶಾಂತ ಹೆಗ್ಡೆ, ಅಂಜನ್ ಕುಮಾರ್, ಅಶ್ವಿನಿ ಉಪಸ್ಥಿತರಿದ್ದರು .
ವಿದ್ಯಾರ್ಥಿ ಗಳಾದ ಚೈತ್ರ, ಅಲೀಫಾ ಕಾರ್ಯಕ್ರಮ ನಿರೂಪಿಸಿದರು.

ಹೈದರ್ ಆಲಿ ಮೊಹಲ್ಲ ಹಾಗೂ ಜಾಕಿರ್ ಹುಸೆನ್ ಮೊಹಲ್ಲಾ ಉರ್ದು ಶಾಲೆಗಳಿಗೆ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ ಪಟ್ಟಣದ ಹೈದರ್ ಆಲಿ ಮೊಹಲ್ಲ ಹಾಗೂ ಜಾಕಿರ್ ಹುಸೆನ್ ಮೊಹಲ್ಲಾ ಉರ್ದು ಶಾಲೆಗಳಿಗೆ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ದುರಸ್ತಿ ಕಾಮಗಾರಿಗಳು ಹಾಗೂ ಶಾಲಾ ನಿರ್ವಹಣೆ ವೀಕ್ಷಣೆ ಮಾಡಿದರು.

ಶ್ರೀನಿವಾಸಪುರ: ಸರ್ಕಾರಿ ಉರ್ದು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು-ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಸರ್ಕಾರಿ ಉರ್ದು ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ಪಟ್ಟಣದಲ್ಲಿ ಸೋರುತ್ತಿರುವ ಉರ್ದು ಶಾಲಾ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಚಿಂತಾಮಣಿ ರಸ್ತೆ ಸಮೀಪದ ಸರ್ಕಾರಿ ಉರ್ದು ಶಾಲೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಏರ್ಪಡಿಸಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಭಾವಿ ಪ್ರಜೆಗಳನ್ನು ರೂಪಿಸುವ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.
ಬಳಕೆಗೆ ಯೋಗ್ಯವಲ್ಲದ ಹಾಗೂ ಮಳೆ ಸುರಿದಾಗ ಸೋರುವ ಶಾಲಾ ಕಟ್ಟಗಳಲ್ಲಿ ಮಕ್ಕಳನ್ನು ಕೂರಿಸಿ ನಿರ್ಭೀತಿಯಿಂದ ಪಾಠ ಮಾಡಲು ಸಾಧ್ಯವಿಲ್ಲ. ಅಪಾಯದ ಅಂಜಿನಲ್ಲಿರುವ ಶಾಲಾ ಕಟ್ಟಗಳು, ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಕ್ಷೇಮಕರವಲ್ಲ ಎಂದು ಹೇಳಿದರು.
ಪುರಸಭೆ ಅನುದಾನದಲ್ಲಿ ಶಾಲಾ ಕಟ್ಟಡ ದುರಸ್ತಿ ಮಾಡಿಸುವಂತೆ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಅವರಿಗೆ ಸೂಚಿಸಿದರು. ಸಂಬಂಧಪಟ್ಟ ಎಂಜಿನಿಯರ್ ಶಾಲೆಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಶೀಘ್ರವಾಗಿ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಕಟ್ಟಡ ಸಜ್ಜುಗೊಳಿಸಬೇಕು ಎಂದು ಹೇಳಿದರು.
ತಾಲ್ಲೂಕು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಬಿಟ್ಟುಕೊಟ್ಟಿಲ್ಲ. ಹಾಗಾಗಿ ಶಿಕ್ಷಕ ಸಮುದಾಯ ಅದನ್ನು ಕಾಯ್ದುಕೊಳ್ಳಬೇಕು. ಕಲಿಕೆಗೆ ಪೂರಕವಾದ ಎಲ್ಲ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಶಿಕ್ಷಣ ಸಂಯೋಜಕ ಅಮರನಾಥ್, ಸಿಆರ್‍ಪಿ ಆರೀಫ್ ಪಾಷ, ಸಾದಿಕ್ ಪಾಷ ಇದ್ದರು.

ಭಂಡಾರ್ಕಾರ್ಸ್ ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಕುಂದಾಪುರ: ಅಕ್ಟೋಬರ್ 6ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಿರಿಜಾ ಅತ್ತೀಗೇರಿ ಡಿಸೈನ್ ಥಿಂಕಿಂಗ್ ಮತ್ತು ಐಡಿಯೇಟ್ ಎಂಬ ವಿಷಯದ ಕುರಿತು ಮಾತನಾಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಮಣಿಪಾಲದ ಮಾಹೆ ಇದರ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಸುಚೇತಾ ವಿ.ಕೋಟೇಕಾರ್ ಅವರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಉಪಯೋಗವನ್ನು ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮಾತನಾಡಿ ನೀವು ಉದ್ಯೋಗದಾತರಾಗಿ ಬೆಳೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಐಕ್ಯೂಎಸಿ ಸಂಯೋಜಕರಾದ ಡಾ.ವಿಜಯ ಕುಮಾರ್ ಉಪಸ್ಥಿತರಿದ್ದರು.
ಕಾಲೇಜಿನ ಇನ್ಸ್ಟಿಟ್ಯೂಷನ್ ಇನ್ನೋವೇಶನ್ ಕೋಶ ಇದರ ಸಂಯೋಜಕರಾದ ಡಾ.ಲಲಿತಾದೇವಿ ಸ್ವಾಗತಿಸಿದರು.
ಬಿ.ಬಿ.ಎ ವಿದ್ಯಾರ್ಥಿನಿಯರಾದ ಆಯೇಷಾ ಮುಸ್ಕಾನ್ ಫಿರ್ಜಾದೆ ಕಾರ್ಯಕ್ರಮ ನಿರೂಪಿಸಿದರು.ಸಾಹಿತಿ ಮತ್ತು ಶ್ರಾವ್ಯ ಪರಿಚಯಿಸಿದರು.ಲೇಖನಾ ವಂದಿಸಿದರು.

ಲಿಪಿ ಅಕಾಡೆಮಿಯಿಂದ ಉಡುಪಿಯ ಸಂತೆಕಟ್ಟೆಯಲ್ಲಿ ಉದ್ಯೋಗ ಮೇಳ

ದಿನಾಂಕ 09-10-2023ರ ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಲಿಪಿ ಅಕಾಡೆಮಿ, ನವಮಿ ಬೇಕರಿ ಬಿಲ್ಡಿಂಗ್, 3ನೇ ಮಹಡಿ, ಸಂತೆಕಟ್ಟೆ, ಉಡುಪಿಯಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಐಟಿಐ ವಿದ್ಯಾರ್ಹತೆಯೊಂದಿಗೆ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ಮಾಹಿತಿಯನ್ನು ಲಿಪಿ ಅಕಾಡೆಮಿ, ನವಮಿ ಬೇಕರಿ ಬಿಲ್ಡಿಂಗ್, 3ನೇ ಮಹಡಿ, ಸಂತೆಕಟ್ಟೆ, ಉಡುಪಿಯಲ್ಲಿ ನಡೆಯಲಿದ್ದು, ಆಕಾಂಕ್ಷಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 8147534324 ಸಂಪರ್ಕಿಸಬಹುದು.

ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜೂನಿಯರ್ ರೆಡ್ ಕ್ರಾಸ್ ಉದ್ಘಾಟನೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ದಲ್ಲಿ ಅಕ್ಟೋಬರ್ 6 ರಂದು ಜೂನಿಯರ್ ರೆಡ್ ಕ್ರಾಸ್ ಉದ್ಘಾಟಿಸಲಾಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭ ವಾಯಿತು. ಇದರ ಅಧ್ಯಕ್ಷತೆಯನ್ನು ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ವಹಿಸಿದರು. ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ರೆಡ್ ಕ್ರಾಸ್ ನ ಧ್ಯೇಯ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು. ಜೂನಿಯರ್ ರೆಡ್ ಕ್ರಾಸ್ ಸಂಯೋಜಕ ರಾದ ದಿನಕರ್ ಅರ್ ಶೆಟ್ಟಿ ಇವರು ಮಕ್ಕಳಿಗೆ ಪ್ರತಿಜ್ಞಾವಿದಿ ಬೋದಿಸಿದರು. ಜೂನಿಯರ್ ರೆಡ್ ಕ್ರಾಸ್ನ ನೂತನ ಅದ್ಯಕ್ಷ ಮನ್ವಿತ್ ಗೆ ಸಭಾಪತಿ ಯವರು ಪಿನ್ ತೊಡಿಸಿದರು. ಅದ್ಯಕ್ಷರ ಭಾಷಣ ಮತ್ತು ವಂದನಾರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು. ರೆಡ್ ಕ್ರಾಸ್ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಜೂನಿಯರ್ ರೆಡ್ ಕ್ರಾಸ್ ಮಾರ್ಗದರ್ಶಿ ಅಧ್ಯಾಪಕರಾದ ಶ್ರೀಕಾಂತ್ ರಾವ್ ಕಾರ್ಯಕ್ರಮ ನಿರೂಪಿಸಿ ವಂಧಿಸಿದರು.