ಸೇಂಟ್ ಆಗ್ನೆಸ್ ಪಿಯು ಕಾಲೇಜ್: “ಕಲರ್ ಸ್ಪ್ಲಾಶ್” ವಿಷಯದೊಂದಿಗೆ ಹಳೆ ವಿದ್ಯಾರ್ಥಿಗಳ “ಅಗ್ನೋಸ್ಪಿಯರ್” ಜು. 22-23 ರ ಸಹಮಿಲನ

ಮಂಗಳೂರು: “ಕಲರ್ ಸ್ಪ್ಲಾಶ್” ಎಂಬ ವಿಷಯದೊಂದಿಗೆ ಬಹು ನಿರೀಕ್ಷಿತ ಹಳೆಯ ವಿದ್ಯಾರ್ಥಿಗಳ ಸಭೆ -ಅಗ್ನೋಸ್ಪಿಯರ್ ಜುಲೈ 22, 2023, ಶನಿವಾರ ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ನಡೆಯಿತು. ಈವೆಂಟ್ ಆಗ್ನೇಷಿಯನ್ನರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿತ್ತು, ಅವರು ತಮ್ಮ ಅಲ್ಮಾ ಮೇಟರ್ ಅನ್ನು ಮರುಭೇಟಿ ಮಾಡುವಾಗ ಉತ್ಕಟತೆ ಮತ್ತು ಸೌಹಾರ್ದತೆಯ ವಾತಾವರಣವನ್ನು ಸೃಷ್ಟಿಸಿದರು. ರೋಮಾಂಚಕ ಥೀಮ್ “ಕಲರ್ ಸ್ಪ್ಲಾಶ್” ಉತ್ಕ್ರಷ್ಟತೆ ಉತ್ಸಾಹ ಹಳೆ ನೆನಪುಗಳಿಂದ ತುಂಬಿದ ಸುಂದರ ಸಂಜೆಯಾಗಿ ಮಾರ್ಪಟ್ಟಿತು.
ಹಳೆಯ ವಿದ್ಯಾರ್ಥಿಗಳ ಸಭೆಯು ಹೃದಯಕ್ಕೆ ತಟ್ಟುವ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು, ದಿನದ ಪ್ರಕ್ರಿಯೆಗಳಿಗೆ ಪ್ರತಿಫಲಿತ ಮತ್ತು ಆಧ್ಯಾತ್ಮಿಕ ಧ್ವನಿಯನ್ನು ಹೊಂದಿಸುತ್ತದೆ. ಪ್ರತೀಕ್ಷಾ ಮತ್ತು ತಂಡದವರು ಮನಮೋಹಕ ನೃತ್ಯ ಪ್ರದರ್ಶನದೊಂದಿಗೆ ಸಭಿಕರನ್ನು ಸ್ವಾಗತಿಸಿದರು. ಕಾಲೇಜಿನ ಗೌರವಾನ್ವಿತ ಪ್ರಾಂಶುಪಾಲೆ ಸಿಸ್ಟರ್ ನೊರಿನ್ ಡಿಸೋಜಾ ಅವರು ಹಳೆ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಅವರನ್ನು ಉದ್ದೇಶಿಸಿ ಮಾತನಾಡಿ, ಅವರ ಉಪಸ್ಥಿತಿಗೆ ಕೃತಜ್ಞತೆ ಸಲ್ಲಿಸಿ, ತಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರುವುದರ ಮಹತ್ವವನ್ನು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರು ಅಗ್ನೋಸ್ಫಿಯರ್ – ದಿ ಅಲುಮ್ನಿ ಅಸೋಸಿಯೇಷನ್ ಅನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಮತ್ತು ಪ್ರಪಂಚದಾದ್ಯಂತದ ಹಳೆಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದಕ್ಕಾಗಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುವಾಸಿನಿ ಅವರನ್ನು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಆಗ್ನೇಶಿಯನ್ನರ ಮನಮೋಹಕ ನೃತ್ಯ ಪ್ರದರ್ಶನಗಳು ಪ್ರೇಕ್ಷಕರನ್ನು ರಂಜಿಸಿದವು. ಯೋಶಿತಾ ಮತ್ತು ಅವರ ತಂಡವು ತಮ್ಮ ಸಿಂಕ್ರೊನೈಸ್ ಮಾಡಲಾದ ಚಲನೆಗಳೊಂದಿಗೆ ವೇದಿಕೆಯನ್ನು ಆಕರ್ಷಣೆಗೆ ಒಳಪಡಿಸಿದರು, ಭೂಮಿಕಾ ಮತ್ತು ಅವರ ಗುಂಪಿನಿಂದ ಪ್ರದರ್ಶನ ಪ್ರೇಕ್ಷರ ಮೇಲೆ ಪ್ರಭಾವ ಬಿರಿತು. ತ್ರಿಶಾ ಶೆಟ್ಟಿ ತಮ್ಮ ಅಸಾಧಾರಣ ನೃತ್ಯ ಕೌಶಲ್ಯವನ್ನು ಪ್ರದರ್ಶಿಸುವ ಮೂಲಕ ತಮ್ಮ ಆಕರ್ಷಕ ಏಕವ್ಯಕ್ತಿ ಪ್ರದರ್ಶನದಿಂದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಪ್ರತಿಭಾವಂತ ಸಹೋದರಿಯರಾದ ಜೆನ್ನಿಫರ್ ಮತ್ತು ಶರಲ್ ಸಿಕ್ವೇರಾ ಅವರು ಜನಪ್ರಿಯ ಪಾಶ್ಚಿಮಾತ್ಯ ಗೀತೆಯ ಸುಮಧುರ ನಿರೂಪಣೆಯನ್ನು ನೀಡಿದರು, ಅವರ ಸಂಗೀತ ಪ್ರತಿಭೆಯ ಬಗ್ಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದರು. ಕಾಲೇಜು ದಿನಗಳಲ್ಲಿ ಸೆರೆಹಿಡಿಯಲಾದ ಅಚ್ಚುಮೆಚ್ಚಿನ ಫೋಟೋಗಳ ಮೂಲಕ ‘ಕಾಲೇಜು ದಿನಗಳ ಥ್ರೋಬ್ಯಾಕ್’ ವಿಷಯದ ಮೇಲೆ ಆತ್ಮವನ್ನು ಕಲಕುವ ವೀಡಿಯೊವನ್ನು ಪ್ರಸ್ತುತಪಡಿಸಲಾಯಿತು.
ಹಳೆಯ ವಿದ್ಯಾರ್ಥಿಗಳಿಗೆ ಎದ್ದುಕಾಣುವ ಕ್ಷಣಗಳನ್ನು ಸೆರೆಹಿಡಿಯಲು ಅವಕಾಶವನ್ನು ಒದಗಿಸಲು ಸೃಜನಾತ್ಮಕ ಫೋಟೋ ಬೂತ್‌ಗಳನ್ನು ಚಿಂತನಶೀಲವಾಗಿ ಹೊಂದಿಸಲಾಗಿತ್ತು. ಸಭಾಂಗಣದಲ್ಲಿ ರೋಮಾಂಚಕ ಮತ್ತು ವರ್ಣರಂಜಿತ ಅಲಂಕಾರಗಳು ಈ ಚಿತ್ರ-ಪರಿಪೂರ್ಣ ಕ್ಷಣಗಳಿಗೆ ಪರಿಪೂರ್ಣ ಹಿನ್ನೆಲೆಯನ್ನು ಒದಗಿಸಿತ್ತು.
ಸಹಮಿಲನದ ಪಾಲಿಸಬೇಕಾದ ಸಂಪ್ರದಾಯದಂತೆ, ಆಯಾಯ ಬ್ಯಾಚುಗಳ ಛಾಯಾಚಿತ್ರಗಳನ್ನು ಕ್ಲಿಕ್ ಮಾಡಲಾಗಿದ್ದು, ಘಟನೆಯ ನೆನಪುಗಳನ್ನು ಸಂರಕ್ಷಿಸಲಾಗಿದ್ದು ಹಳೆಯ ವಿದ್ಯಾರ್ಥಿಗಳ ಸಂಘದ ಏಕತೆ ಮತ್ತು ಶಕ್ತಿಯನ್ನು ಸಂಕೇತಿಸುತ್ತದೆ.
ಈ ಕಾರ್ಯಕ್ರಮವನ್ನು ಸಂಚಾಲಕ ಶ್ರೀಮತಿ ವೆನಿಟಿಯಾ ರಸ್ಕ್ವಿನ್ಹಾ ನೇತೃತ್ವದ ಆಗ್ನೋಸ್ಫಿಯರ್ ಕೋರ್ ಕಮಿಟಿಯು ನಿಖರವಾಗಿ ಯೋಜಿಸಿತ್ತು. ಇದಕ್ಕೆ ವೈಸ್ ಪ್ರಿನ್ಸಿಪಾಲ್, ಸೀನಿಯರ್ ಜಾನೆಟ್ ಸಿಕ್ವೇರಾ, ಬೋಧಕ ಮತ್ತು ಸಹಾಯಕ ಸಿಬ್ಬಂದಿ ಮತ್ತು ರೋಮಾಂಚಕ ಮತ್ತು ಶಕ್ತಿಯುತ ಹಳೆಯ ವಿದ್ಯಾರ್ಥಿಗಳ ದೊಡ್ಡ ಗುಂಪು ಸಾಕ್ಷಿಯಾಯಿತು. ಪ್ರೀವಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರೆ, ಕಾಲ್ಡ್ರಿಡಾ ಡಿಸೋಜ ವಂದಿಸಿದರು.
ಅಲುಮ್ನಿ ಮೀಟ್ “ಕಲರ್ ಸ್ಪ್ಲಾಶ್” ನಿಸ್ಸಂದೇಹವಾಗಿ ಸ್ಮರಣೀಯ ಮತ್ತು ಆನಂದದಾಯಕ ಘಟನೆಯಾಗಿದೆ. ವಿವಿಧ ಬ್ಯಾಚ್‌ಗಳ ಆಗ್ನೇಷಿಯನ್‌ಗಳು ಹಳೆಯ ಸ್ನೇಹವನ್ನು ಪುನರುಜ್ಜೀವನಗೊಳಿಸಿದರು, ಪ್ರೀತಿಯ ನೆನಪುಗಳನ್ನು ಹಂಚಿಕೊಂಡರು ಮತ್ತು ಕಾಲೇಜಿನೊಂದಿಗೆ ತಮ್ಮ ಸಂಪರ್ಕವನ್ನು ಆಚರಿಸಿದರು. ಯಶಸ್ವಿ ಸಭೆಯು ಸಂಸ್ಥೆ ಮತ್ತು ಅದರ ಹಿಂದಿನ ವಿದ್ಯಾರ್ಥಿಗಳ ನಡುವಿನ ಬಲವಾದ ಬಾಂಧವ್ಯವನ್ನು ಪುನರುಚ್ಚರಿಸಿತು, ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ಸ್ಪೂರ್ತಿಯು ಮುಂದಿನ ಪೀಳಿಗೆಗೆ ಅಭಿವೃದ್ಧಿ ಹೊಂದುವುದನ್ನು ಖಾತ್ರಿಪಡಿಸಿತು.

ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಕಲ್ಪಿಸಲು, ಮಾದರಿ ಜಿಲ್ಲೆಯನ್ನಾಗಿಸಲು ಕ್ರಮ : ಪತ್ರಕರ್ತರೊಂದಿಗೆ ಸಂವಾದದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ

ಕೋಲಾರ,ಜು.25: ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿರುವುದು ಗಮನಿಸಿದ್ದು ಅವುಗಳಿಗೆ ಶಾಶ್ವತವಾದ ಪರಿಹಾರಗಳನ್ನು ಹಂತ,ಹಂತವಾಗಿ ಕಲ್ಪಿಸಲು ಕ್ರಮ ಕೈಗೊಂಡು ರಾಜ್ಯದಲ್ಲಿ ಕೋಲಾರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಉತ್ತಮವಾದ ಆಡಳಿತ ನೀಡಲು ನಿಮ್ಮೆಲ್ಲರ ಸಹಕಾರದೊಂದಿಗೆ ಪಣ ತೊಡುವುದಾಗಿ ಜಿಲ್ಲಾಧಿಕಾರಿ ಅಕ್ರಂ ಪಾಷ ಘೋಷಿಸಿದರು.
ನಗರದ ಪತ್ರಕರ್ತರ ಭವನದಲ್ಲಿನ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ನಾನು ಇದೇ ರಾಜ್ಯದ, ತುಮಕೊರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕುಗ್ರಾಮದಲ್ಲಿ ಜನಿಸಿ ಇದೇ ಅವಿಭಜಿತ ಜಿಲ್ಲೆಯಲ್ಲಿ ಶಿಕ್ಷಣ ಪಡೆದ ಕನ್ನಡಿಗನಾಗಿದ್ದೇನೆ. ಕಳೆದ 8 ವರ್ಷ ಉಪನ್ಯಾಸಕನಾಗಿ ವಿವಿಧ ಕಡೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ಈ ಹುದ್ದೆಗೆ ಬಂದವನಾಗಿದ್ದೇನೆ. ಈಗಾಗಲೇ ಚಿಕ್ಕಬಳ್ಳಾಪುರದಲ್ಲಿ ಕಾರ್ಯನಿರ್ವಾಹಿಸಿದ್ದು, ಇದೀಗ ಕೋಲಾರದಲ್ಲಿ ಕಾರ್ಯನಿರ್ವಹಿಸಲು ಸಿಕ್ಕಿರುವ ಅವಕಾಶವನ್ನು ಸದ್ಬಳಸಿಕೊಳ್ಳುವುದಾಗಿ ತಿಳಿಸಿದರು.
ಜಿಲ್ಲೆಯ 17 ಇಲಾಖೆಗಳಲ್ಲಿ ನೇಮಕಾತಿಯ ಅಧಿಕಾರಿಗಳು ಇಲ್ಲ. ಕಂದಾಯ ಇಲಾಖೆಯಲ್ಲಿ ಶೇ 60 ರಷ್ಟು ಸಿಬ್ಬಂದಿ ಕೊರತೆ ಇದೆ. 300 ಗ್ರಾಮ ಲೆಕ್ಕಿಗರ ಪೈಕಿ 71 ಹುದ್ದೆಗಳು ಖಾಲಿ ಇದೆ. ವಿವಿಧ ಇಲಾಖೆಗಳಿಂದ ಬೇರೆ ಜಿಲ್ಲೆಗಳಲ್ಲಿ ನಿಯೋಜಿತ ಅಧಿಕಾರಿಗಳನ್ನು ವಾಪಾಸ್ ಕರೆಸಲು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ನನಗೆ ಹುದ್ದೆಯ ಆಹಂ ಇಲ್ಲ. ಎಲ್ಲಾ ಅಧಿಕಾರಿಗಳೊಂದಿಗೆ ಜಿಲ್ಲೆಯ ಶ್ರೇಯೋಭಿವೃದ್ದಿಗೆ ಕಾರ್ಯನಿರ್ವಹಿಸುತ್ತೇನೆ. ಮೈಸೂರು, ಮಡಿಕೇರಿ, ಹಾಸನ,ಬೆಂಗಳೂರು ಸೇರಿದಂತೆ ಅನೇಕ ಕಡೆ ಕಾರ್ಯನಿರ್ವಹಿಸಿದ್ದೇನೆ. ಆಲ್ಪಸಂಖ್ಯಾತರ ಇಲಾಖೆ, ಕಾರ್ಮಿಕ ಇಲಾಖೆ, ಸಕ್ಕರೆ ಕಂಪನಿ, ಹಿಂದುಳಿದ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದೇನೆಂದು ಹೇಳಿದರು.
ಕಾರ್ಮಿಕ ಇಲಾಖೆಯಲ್ಲಿದ್ದಾಗ 17 ಲಕ್ಷ ವಿಧ್ಯಾರ್ಥಿಗಳಿಗೆ ವಿಶೇಷವಾದ ವೇತನದ ಸೌಲಭ್ಯ ಕಲ್ಪಸಿದ್ದೇನೆ, 20 ವಿವಿಧ ಯೋಜನೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ಶೈಕ್ಷಣಿಕ ನೆರವು ಸಿಗುವಂತೆ ಮಾಡಿರುವೆ,150 ಮೂರಾರ್ಜಿ ವಸತಿ ಶಾಲೆ, 350 ವಿದ್ಯಾರ್ಥಿಗಳ ವಸತಿ ನಿಲಯಗಳು, ಸೇರಿದಂತೆ ಉನ್ನತವಾದ ಶಿಕ್ಷಣಕ್ಕೆ ಪೂರಕವಾದ ಅನೇಕ ಸೌಲಭ್ಯಗಳನ್ನು ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ನಿರ್ವಹಿಸಿರುವುದಾಗಿ ತಿಳಿಸಿದರು.
ಮುಖ್ಯವಾಗಿ ಶೈಕ್ಷಣಿಕವಾಗಿ 40 ಲಕ್ಷ ಕಾರ್ಮಿಕ ಮಕ್ಕಳನ್ನು ನೊಂದಾಯಿಸುವ ಮೂಲಕ ಅನುಕೊಲಗಳನ್ನು ಕಲ್ಪಿಸಿದೆ. 11 ಲಕ್ಷ ವಿದ್ಯಾರ್ಥಿಗಳಿಗೆ 800 ಕೋಟಿ ರೂ ವೇತನವನ್ನು ವಿತರಿಸಲಾಯಿತು. ಕಾರ್ಮಿಕ ಇಲಾಖೆಯಲ್ಲಿ ಪೈಲೆಟ್ ಯೋಜನೆ ಮೂಲಕ ವಿನೂತನವಾದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಒತ್ತು ನೀಡಲಾಯಿತು, ವಿಮೆ ಸೌಲಭ್ಯ, ಉನ್ನತ ಶಿಕ್ಷಣ ಸೌಲಭ್ಯಗಳು, ಸಾಮಾಜಿಕ ಭದ್ರತೆ ನೀಡಲಾಯಿತು. ಕೊರೋನಾ ಸಂದರ್ಭದಲ್ಲಿ ಶ್ರಮಿಕ ವರ್ಗದವರನ್ನು ಗುರುತಿಸಿ 25 ಸಾವಿರ ಜನಕ್ಕೆ ತಮ್ಮ ಊರುಗಳಿಗೆ ತೆರಳು ಸಾರಿಗೆ ಸೌಲಭ್ಯ ಪ್ರತಿ ದಿನ ಆಹಾರದ ಕಿಟ್‍ಗಳು ನೀಡಿದ್ದನ್ನು ನೆನಪಿಸಿಕೊಂಡರು.
ಜಿಲ್ಲಾ ಪಂಚಾಯುತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪದ್ಮಬಸಂತಪ್ಪ ಮಾತನಾಡಿ, ಪ್ರಥಮ ದರ್ಜೆ ಗುಮಾಸ್ತೆಯಾಗಿ, ಉಪನ್ಯಾಸಕಿಯಾಗಿ, ಉಪವಿಭಾಗಾಧಿಕಾರಿಯಾಗಿ, ಅಪರ ಜಿಲ್ಲಾಧಿಕಾರಿಯಾಗಿ ವಿವಿಧಡೆ ಕಾರ್ಯ ನಿರ್ವಹಿಸಿರುವ ವಿವಿಧ ಜಿಲ್ಲೆಗಳ ಪರಿಚಯದೊಂದಿಗೆ ತಮ್ಮ ಕೊಡುಗೆಗಳನ್ನು ತಿಳಿಸಿದ ಅವರು ಜಿಲ್ಲಾ ಪಂಚಾಯತ್ ಸಿ.ಇ.ಓ ಅಗಿ ಎರಡನೇ ಅವಕಾಶ ಕೋಲಾರದಲ್ಲಿ ದೊರಕಿದೆ. ಈಗಾಗಲೇ ಅಧಿಕಾರ ವಹಿಸಿಕೊಂಡ ನಂತರ ಅಂಗನಾವಡಿಗಳಿಗೆ, ಕೆರೆಗಳು ಅಭಿವೃದ್ದಿಯಲ್ಲಿ ಅಮೃತ ಸರೋವರ ಯೋಜನೆಗಳನ್ನು ಗಮನಿಸಿರುವೆ ಎಂದು ಹೇಳಿದರು.
ಈ ಹಿಂದಿನ ಸಿ.ಇ.ಓ. ಯುಕೇಶ್‍ಕುಮಾರ್ ಅವರು ಉತ್ತಮ ಕೆಲಸಗಳನ್ನು ಮಾಡಿ ಜಿಲ್ಲೆಗೆ ಪ್ರಶಸ್ತಿ ತಂದು ಕೊಟ್ಟಿದ್ದಾರೆ ಎಂದು ಶ್ಲಾಘಿಸಿದ ಅವರು, ಅಮೃತ ಸರೋವರ ಯೋಜನೆಯಲ್ಲಿ 200 ಕೆರೆಗಳ ಅಭಿವೃದ್ದಿ ಗುರಿ ನಿಗಧಿಪಡಿಸಲಾಗಿದೆ ಅದರೆ ನಾವು ಇನ್ನು ಹೆಚ್ಚುವರಿಯಾಗಿ 224 ಕೆರೆಗಳ ಗುರಿ ಹೊಂದಿರುವುದಾಗಿ ತಿಳಿಸಿದರು. ಅಂಗನವಾಡಿಗಳಲ್ಲಿ ಎಸ್.ಸಿ.ಎಸ್.ಟಿ. ಸಮುದಾಯದವರು ಅಡುಗೆ ಮಾಡುವುದಕ್ಕೆ ಕೆಲವಡೆ ಅಸಮಾಧಾನ ಹಾಗೂ ಅಸಹಕಾರ ವ್ಯಕ್ತಪಡಿಸುತ್ತಿರುವುದು ಸಮಂಜಸವಲ್ಲ. ಗರ್ಭಿಣಿ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಪೌಷ್ಠಿಕಾಂಶದ ಆಹಾರಗಳನ್ನು ಸಮರ್ಪಕವಾಗಿ ತಲುಪಿಸ ಬೇಕಾಗಿದೆ ಎಂದು ತಿಳಿಸಿದರು.
ಕೆರೆಗಳಲ್ಲಿ ಹೂಳು ತೆಗೆದು ನೀರು ತುಂಬಿಸುವ ಕೆಲಸಗಳಿಗೆ ಮರು ಚಾಲನೆ ನೀಡ ಬೇಕಾಗಿದೆ. ಗ್ರಾಮಗಳಲ್ಲಿ ತೆರಿಗೆ ಸಂಗ್ರಹಕ್ಕೆ ಪಂಚತಂತ್ರ ಅನುಷ್ಠಾನಕ್ಕೆ ಒತ್ತು ನೀಡ ಬೇಕಾಗಿದೆ.ಮೊಬೈಲ್‍ಗಳ ಅ್ಯಪ್‍ಗಳ ಸದ್ಬಳಿಸಿ ಕೊಂಡು ಹಣ ಪಾವತಿ, ಜಲ ಜೀವನ್ ಮಿಷನ್, ಶೌಚಾಲಯ, ಸ್ವಚ್ಚತೆ, ರಸ್ತೆಗಳ ಅಭಿವೃದ್ದಿ, ನರೇಗಾ ಯೋಜನೆ ಮೂಲಕ ಉದ್ಯೋಗ ಸೃಷ್ಠಿ ಇತ್ಯಾದಿ ಸರ್ಕಾರದ ಸೌಲಭ್ಯಗಳ ಅರಿವು ಮೋಡಿಸಿ ಸದ್ಬಳಿಸಿ ಕೊಳ್ಳುವಂತೆ ಗ್ರಾಮ ಪಂಚಾಯತ್‍ಗಲ ಮೂಲಕ ಜಾಗೃತಿ ಮೋಡಿಸುವುದು ಮಾಡಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಮಾತನಾಡಿ, ನಾನು ಇದೇ ಅವಿಭಜಿತ ಜಿಲ್ಲೆಯ ಮಂಡಿಗಲ್ ಗ್ರಾಮದವನಾಗಿದ್ದು ನಾನು ಬಡ ಕುಟುಂಬದಿಂದ ಬಂದವನು ನಮ್ಮ ತಂದೆ ಓರ್ವ ಕಾರ್ಮಿಕರಾಗಿದ್ದವರು.ನನ್ನ ಶಿಕ್ಷಣ ಚಿಕ್ಕಬಳ್ಳಾಪುರ,ಬೆಂಗಳೂರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದವನಾಗಿದ್ದೇನೆ.ಮೂಲತಹ ಕಾರ್ಮಿಕ ಕುಟುಂಬದಿಂದ ಬಂದ ನನಗೆ ಬಡತನದ ಅರಿವು ಇದೆ. ನನ್ನ ಉನ್ನತ ಶಿಕ್ಷಣದ ತರಬೇತಿಯಲ್ಲಿ 120 ಮಂದಿ ಪೈಕಿ 50 ಮಂದಿ ಕೋಲಾರದವರೇ ಇದ್ದದ್ದು ವಿಶೇಷತೆಯಾಗಿತ್ತು. ನನ್ನ ವೃತ್ತಿಯಲ್ಲಿ ಮೂಲತಹ ಕೋಲಾರದ ಅನೇಕ ಅಧಿಕಾರಿಗಳ ಪರಿಚಯವಾಗಿದ್ದನ್ನು ನೆನಪಿಸಿ ಕೊಂಡರು.
ಲೋಕಯುಕ್ತ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವುದು ನನಗೆ ತೃಪ್ತಿ ತಂದಿದ್ದು, ಬೆಸ್ಕಾಂ ಜಾಗೃತ ದಳದಲ್ಲಿ ಇದ್ದು ಕಾರ್ಯನಿರ್ವಹಿಸಿರುವೆ. ಪೊಲೀಸ್ ಇಲಾಖೆ ಇಂಟಲೇಜೇನ್ಸ್ ಇಲಾಖೆಯಲ್ಲಿ ಸೇರಿದಂಂತೆ ಎ.ಎಸ್.ಪಿ. ಡಿಸಿಪಿಯಾಗಿ ಸೇರಿದಂತೆ ಹಲವಾರು ಕಡೆ ಕಾರ್ಯನಿರ್ವಹಿಸಿದ ಸಂದರ್ಭಗಳನ್ನು ನೆನಪಿಸಿ ಕೊಂಡರು. ಪ್ರಮುಖವಾಗಿ ಕೊರೋನಾ ಸಂದರ್ಭದಲ್ಲಿ ತಮ್ಮ ಕುಟುಂಬವು ಸಂಕಷ್ಟಕ್ಕೆ ಸಿಲುಕಿದಾಗ ಕರ್ತವ್ಯವನ್ನು ನಿರ್ಲಕ್ಷಿಸದೆ ಸೇವೆ ಸಲ್ಲಿಸಿದ್ದನ್ನು ಹಾಗೂ ಬೆಂಗಳೊರಿನಲ್ಲಿ 150 ಅಂಬ್ಯುಲೆನ್ ವ್ಯವಸ್ಥೆ ಮಾಡಿದ್ದ ಸಂದರ್ಭ ಸೇರಿದಂತೆ ತಮ್ಮ ವೃತ್ತಿಯಲ್ಲಿ ಎದುರಾದ ಅನೇಕ ಸವಾಲುಗಳನ್ನು ಎದುರಿಸಿದ್ದನ್ನು ವಿವರಿಸಿದ ಅವರು ಕೊರೋನಾ ಸಂದರ್ಭವು ಪ್ರತಿಯೊಬ್ಬರಿಗೂ ಪಾಠ ಕಲಿಸಿದಂತಾಯಿತು ಎಂದು ಅಭಿಪ್ರಾಯಪಟ್ಟರು.
ಪತ್ರಿಕೆಗಳು ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿದೆ. ಪತ್ರಿಕಾ ರಂಗವು ಸಮಾಜದಲ್ಲಿ 4ನೇ ಅಂಗವಾಗಿ ಪರಿಗಣಿಸಲಾಗಿದೆ. ಶಾಸನಗಳ ಅನುಷ್ಟಾನಕ್ಕೆ ಪತ್ರಿಕಾ ರಂಗದ ಪಾತ್ರ ಮಹತ್ವದ್ದಾಗಿದೆ. ಪತ್ರಿಕಾ ವರದಿಗಳು ಅಧಿಕಾರಿಗಳ ಕರ್ತವ್ಯದಲ್ಲಿ ಎಚ್ಚರಿಸುವಂತ ಕೆಲಸಗಳನ್ನು ಮಾಡಲಿದೆ. ಸಾಮಾಜಿಕ ಜಾಲತಾಣದ ಯೂ ಟ್ಯೊಬ್‍ಗಳು, ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ಸಮಾಜ ಘಾತುಕ ಕೃತ್ಯಗಳಿಗೆ ಸಂಬಂಧಿಸಿದಂತೆ ವೈಭವಿಕರಣ ಸಲ್ಲದು, ಜನತೆ ಸೌಲಭ್ಯಗಳನ್ನು ಕಲ್ಪಿಸುವಂತ ಸಕಾರತ್ಮಕ ಸುದ್ದಿಗಳಿಗೆ ಹೆಚ್ಚು ಒತ್ತು ನೀಡ ಬೇಕೆಂದರು. ಅವರು ಸಂವಿಧಾನದ ಆಶಯಗಳಿಗೆ ಪೂರಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ತಮ್ಮ ಹಕ್ಕುಗಳನ್ನು ಚಲಾಯಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಪಡೆಯಬೇಕು. ಸಂವಿಧಾನದ ಪ್ರಕಾರ ಕಾನೂನುಗಳನ್ನು ಪ್ರತಿಯೊಬ್ಬರೂ ಪಾಲಿಸಿದಾಗ ಮಾತ್ರ ಅಭಿವೃದ್ದಿ ಸಾಧ್ಯ. ಸಂವಿಧಾನ ಬದ್ದ ಕೆಲಸಗಳಿಗೆ ಪೊಲೀಸ್ ಇಲಾಖೆಯ ಸಹಕಾರ ಸದಾ ಇರುತ್ತದೆ. ನಮ್ಮ ಸೀಮಿತದಲ್ಲಿ ಕಾರ್ಯನಿರ್ವಹಿಸಲು ನಾವುಗಳು ಬದ್ದರಾಗಿರುತ್ತೇವೆ ಎಂದರು.
ಕಳೆದ 4 ತಿಂಗಳು ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವ್ಯಸ್ಥೆಗಳ ಕಡೆ ಹೆಚ್ಚು ಗಮನ ಹರಿಸಲು ಸಾಧ್ಯವಾಗಲಿಲ್ಲ. ಈಗ ಕಳೆದ ತಿಂಗಳಿಂದ ಪ್ರಾರಂಭಿಸಿರುವೆ. ಮುಂದಿನ ದಿನಗಳಲ್ಲಿ ಮತ್ತು ಚುನಾವಣೆಗಳು ಬರಲಿದ್ದು ಅದಕ್ಕೆ ಅಗತ್ಯವಾದ ಸಿದ್ದತೆಗಳನ್ನು ಮಾಡಿ ಕೊಳ್ಳ ಬೇಕಾಗಿದೆ. ಜಿಲ್ಲೆಯಲ್ಲಿ ಕೆಲವಡೆ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು ಹಂತ, ಹಂತವಾಗಿ ಕ್ರಮಕೈಗೊಳ್ಳಲಾಗುತ್ತಿದೆ. ರಾತ್ರಿ 11 ಗಂಟೆಯಲ್ಲಿ ಸಂಚರಿಸುವರ ಬೆರಳಚ್ಚು ಪಡೆಯಲಾಗುವುದು, ಈಗಾಗಲೇ ಸಿ.ಸಿ.ಕ್ಯಾಮೆರಗಳಿಗೆ ಸಂಬಂಧಿಸಿದಂತೆ 40 ಲಕ್ಷ ನಗರೋತ್ಥಾನದಿಂದ ಪಡೆಯಲಾಗಿದೆ. ನರಸಾಪುರ ಮತ್ತು ಸುಗಟೂರಿನಲ್ಲಿ ಹೆಚ್ಚುವರಿಯಾಗಿ ಪೊಲೀಸ್ ಠಾಣೆಗಳ ಸ್ಥಾಪನೆಗೆ ಕ್ರಮ ಜರುಗಿಸಲಾಗುವುದು. 500 ವಸತಿಗಳಿರುವ ಕ್ವಾಟರ್ಸ್ ನಿರ್ಮಿಸಲು ಇಲಾಖೆಯು ಚಿಂತಿಸಿದೆ ಜೂತೆಗೆ ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು. ಜನರ ಹಲವು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿದರು.
ಇದಕ್ಕೂ ಮುನ್ನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಜಿಲ್ಲೆಯ ಸರ್ವತೋಮುಖ ಪ್ರಗತಿಗೆ ಜಿಲ್ಲಾಡಳಿತ ಮುಂದಾಗಬೇಕು. ದೊಡ್ಡ ಹಳ್ಳಿಯಂತೆ ಇರುವ ಕೋಲಾರದ ಅಭಿವೃದ್ಧಿಗೆ ಸಹಕಾರ ನೀಡಿ ಎಂದು ಜಿಲ್ಲಾಧಿಕಾರಿ ಆಕ್ರಂಪಾಷ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸಂತಪ್ಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ಅವರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬಂದ ಮರುದಿನವೇ ಪದ್ಮ ಬಸಂತಪ್ಪ ರವರು ಜಿಲ್ಲಾದ್ಯಂತ ಸಂಚರಿಸಿ ಸಮಸ್ಯೆಗಳ ಅವಲೋಕನ ನಡೆಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಾಗುತ್ತಿರುವುದು ಶ್ಲಾಘನೀಯ ಎಂದರು.
ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್ ಮಾತನಾಡಿ, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸ್ಥಳೀಯರು ಮತ್ತು ಕನ್ನಡಿಗರಾಗಿದ್ದು, ಹೊಂದಾಣಿಕೆಯಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿ ಎಂದು ಆಶಿಸಿದರು.
ಜಿಲ್ಲಾಧಿಕಾರಿ ಅಕ್ರಂಪಾಷ ಅವರು ನಗರಪ್ರದಕ್ಷಿಣೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಆಳಿತಕ್ಕೆ ಚುರುಕು ಮುಟ್ಟಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ನಾರಾಯಣ್ ಅಪರಾಧ ಪ್ರಕರಣಗಳನ್ನು ಒಂದೆರಡು ದಿನಗಳಲ್ಲಿ ಪತ್ತೆ ಹಚ್ಚಿ ಇಲಾಖೆಯ ಕೆಲಸಕ್ಕೆ ವೇಗವನ್ನು ನೀಡಿದ್ದಾರೆ. ಪದ್ಮ ಬಸಂತಪ್ಪ ರವರು ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದು, ಈ ಮೂವರ ಸಂಘಟಿತ ಪ್ರಯತ್ನಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು, ಮಾತನಾಡಿ, ಜಿಲ್ಲಾಧಿಕಾರಿ ಆಕ್ರಂಪಾಷ ಅವರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ವ್ಯಕ್ತಿ ಎಂದರೆ ತಪ್ಪಿಲ್ಲ, ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ವಿದೇಶದಲ್ಲಿ ಕೋಲಾರ ಜಿಲ್ಲಾಧಿಕಾರಿಯನ್ನು ನೆನೆಯುತ್ತಿದ್ದಾರೆ ಎಂದರು. ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ.
ಅಧಿಕಾರಿಗಳು ಕೆಲಸ ಮಾಡಿದರೆ, ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯ, ರಾಜಕಾರಣಿಗಳು ಒಂದು ಪಕ್ಷದಲ್ಲಿ ಇರುತ್ತಾರೆ, ಇನ್ನೊಂದು ಪಕ್ಷಕ್ಕೆ ಹೋಗುತ್ತಾರೆ ಇವರಿಂದ ಯಾವುದೇ ಅಭಿವೃದ್ಧಿ ಕಾಣಲ್ಲ ಎಂದರು.
ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್‍ಕುಮಾರ್ ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ಸ್ವಾಗತಿಸಿ, ಖಜಾಂಚಿ ಎ.ಜಿ.ಸುರೇಶ್‍ಕುಮಾರ್ ನಿರೂಪಿಸಿ, ವಂದಿಸಿದರು.
ಸಂವಾದದಲ್ಲಿ ಹಿರಿಯ ಪತ್ರಕರ್ತರಾದ ಎಂ.ಜಿ.ಪ್ರಭಾಕರ, ಎಸ್.ಸಚ್ಚಿದಾನಂದ, ಅಬ್ಬಣಿಶಂಕರ್, ಬಿ.ಎಲ್.ರಾಜೇಂದ್ರಸಿಂಹ, ಸಿ.ವಿ.ನಾಗರಾಜ್, ಎನ್.ಸತೀಶ್, ಜಹೀರ್‍ಆಲಂ, ಎಂ.ಡಿ.ಚಾಂದ್‍ಪಾಷ, ಕೋ.ನಾ.ಮಂಜುನಾಥ್, ಸಿ.ಜಿ.ಮುರಳಿ, ಕೆ.ಆಸೀಫ್‍ಪಾಷ ಕೆ.ನಾರಾಯಣಗೌಡ, ಚಂದ್ರು, ಮುಕ್ತಿಯಾರ್ ಅಹಮದ್, ರಮೇಶ್, ಶ್ರೀನಿವಾಸಮೂರ್ತಿ, ಗಂಗಾಧರ್, ಗೋಪಿನಾಥ್, ಬಿ.ಎಸ್.ಸ್ಕಂದಕುಮಾರ್, ವಿ.ನವೀನ್‍ಕುಮಾರ್, ಕೆ.ಬಿ.ಜಗದೀಶ್, ವೆಂಕಟೇಶಪ, ಶಮ್ಗರ್, ಎಂ.ವಿ.ವೇಣುಗೋಪಾಲ್, ಸುನೀಲ್‍ಕುಮಾರ್, ಅಮರ್, ಮದನ್, ಮಂಜುನಾಥ್, ಈಶ್ವರ್, ಸಮೀರ್‍ಅಹಮದ್, ಬಾಲನ್, ಲಕ್ಷ್ಮೀಪತಿ ಡಿ.ಎನ್, ಎನ್.ಶಿವಕುಮಾರ್, ಸುಧಾಕರ್, ರಾಘವೇಂದ್ರಪ್ರಸಾದ್ ಅಮರೇಶ್, ಪರ್ವೀಜ್ ಅಹಮದ್, ವಿಜಯಕುಮಾರ್, ವಿನೋದ್, ಸವಜ್ಞಮೂರ್ತಿ, ಅಮರ್ ಮಂಜುನಾಥ್ ಉಪಸ್ಥಿತರಿದ್ದರು.

ಸೇಂಟ್ ಆಗ್ನೆಸ್ ಪಿಯು ಕಾಲೇಜು ವಾರ್ಷಿಕ ಪರೀಕ್ಷೆಯ ಸಾಧಕರಿಗೆ ಸನ್ಮಾನ – ‘ಕೆರಿಯರ್ ಎಕ್ಸ್‌ಪೋ’ ಕಾರ್ಯಕ್ರಮ

“ಉತ್ತಮ ಕೆಲಸವನ್ನು ಮಾಡಲು ಏಕೈಕ ಮಾರ್ಗವೆಂದರೆ ನೀವು ಮಾಡುವ ಕೆಲಸವನ್ನು ಪ್ರೀತಿಸುವುದು. ನೀವು ಇನ್ನೂ ಕೆಲಸವನ್ನು ಅದನ್ನು ಪಡೆದುಕೊಳ್ಳದಿದ್ದರೆ ಅದನ್ನು, ಹುಡುಕುತ್ತಲೇ ಇರಿ”

ಸೇಂಟ್ ಆಗ್ನೆಸ್ ಪಿಯು ಕಾಲೇಜು ವಾಣಿಜ್ಯ ಮತ್ತು ಕಲಾ ವಿಭಾಗಗಳ ಮಾರ್ಚ್ 2023 ರ II PUC ವಾರ್ಷಿಕ ಪರೀಕ್ಷೆಯ ಸಾಧಕರಿಗೆ ಜುಲೈ 22, 2023 ರಂದು ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 9.15 ಕ್ಕೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹೇಳಿದರು.

ಈ ಕಾರ್ಯಕ್ರಮವು ‘ಕೆರಿಯರ್ ಎಕ್ಸ್‌ಪೋ’ ಜೊತೆಗೆ ವಿದ್ಯಾರ್ಥಿಗಳಿಗೆ ತೆರೆದಿರುವ ವಿವಿಧ ವೃತ್ತಿ ಮಾರ್ಗಗಳ ಬಗ್ಗೆ ಎಚ್ಚರವಹಿಸಲು ಅನುವು ಮಾಡಿಕೊಡುತ್ತದೆ. ಕಾರ್ಯಕ್ರಮವು Ms ಕ್ಯಾರೊಲಿನ್ ಡಿಕುನ್ಹಾ ಮತ್ತು ತಂಡದ ನೇತೃತ್ವದ ಭಾವಪೂರ್ಣ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು.

ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಟಾಪರ್‌ಗಳು, ಉತ್ತಮ ಅಂಕ ಗಳಿಸಿದವರು ಮತ್ತು ಡಿಸ್ಟಿಂಕ್ಷನ್ ಪಡೆದವರನ್ನು ಪ್ರಾಂಶುಪಾಲರಾದ ಶ್ರೀ ನೊರಿನ್ ಡಿಸೋಜಾ, ಮುಖ್ಯ ಅತಿಥಿಗಳಾದ ಶ್ರೀಮತಿ ಸಂಧ್ಯಾನಾಯಕ್, ಶ್ರೀಮತಿ ಶಾಂತಿ ನಜರೆತ್ ಮತ್ತು ಶ್ರೀ ರಾಡ್ನಿ ವಾಝೋನೂರೆಡ್ ವಿದ್ಯಾರ್ಥಿಗಳಿಗೆ ಅಸಾಧಾರಣ ಶೈಕ್ಷಣಿಕ ಸಾಧನೆಗಾಗಿ ಶ್ರೇಷ್ಠ ಪ್ರಮಾಣಪತ್ರವನ್ನು ನೀಡಿದರು.

ಕಲಾ ವಿಭಾಗದಲ್ಲಿ ಟಾಪರ್ ಆದ ಶ್ರೀಮತಿ ಸಂಹಿತಾ ಪ್ರಭು ಮತ್ತು ವಾಣಿಜ್ಯ ವಿಭಾಗದಲ್ಲಿ ಅಗ್ರಮಾನ್ಯರಾದ ಶ್ರೀಮತಿ ರೆನಿಶಾ ವಿಯೋಲಾ ಡಿಸೋಜಾ ತಮ್ಮ ಸ್ಪೂರ್ತಿದಾಯಕ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಪರೀಕ್ಷೆಯಲ್ಲಿ ಅಭೂತಪೂರ್ವ ಶೈಕ್ಷಣಿಕ ಸಾಧನೆಗಾಗಿ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜು (ಸ್ವಾಯತ್ತ) ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಂಧ್ಯಾನಾಯಕ್ ಅವರು ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಂಧ್ಯಾನಾಯಕ್, ಕಾರ್ಯದರ್ಶಿ ಅಭ್ಯಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಶಾಂತಿ ನಜರೆತ್, ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ (ಸ್ವಾಯತ್ತ) ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ರೋಡ್ನಿವಾಜ್ ಅವರು ವೃತ್ತಿ ಮಾರ್ಗದರ್ಶನ ಅಧಿವೇಶನದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

“ಸಂಪನ್ಮೂಲ ವ್ಯಕ್ತಿಗಳು ಸರಿಯಾದ ವೃತ್ತಿಯನ್ನು ಆರಿಸಿಕೊಳ್ಳುವುದು ಒಬ್ಬರ ಜೀವನದಲ್ಲಿ ಮಹತ್ವದ ಮತ್ತು ಪ್ರಮುಖ ನಿರ್ಧಾರವಾಗಿದೆ” ಎಂದು ಒತ್ತಿ ಹೇಳಿದರು. ಜೀವನದಲ್ಲಿ ಯಾವುದೇ ವೃತ್ತಿಯನ್ನು ಮುಂದುವರಿಸಲು ಅಗತ್ಯವಾದ ಕಠಿಣ ಪರಿಶ್ರಮ, ಶಿಸ್ತು ಮತ್ತು ಪರಿಕಲ್ಪನೆಯ ಜ್ಞಾನದ ಮೇಲೆ ಒತ್ತು ನೀಡಬೇಕೆಂದು ಹೇಳಿದರು. ಅವರ ತಂಡದಿಂದ ಆತ್ಮವಿಶ್ವಾಸ ಮೂಡಿಸುವ ಚಟುವಟಿಕೆಗಳು ನಡೆದವು.

ಕಾರ್ಯಕ್ರಮವನ್ನು ಮಾನವಿಕ ವಿಭಾಗದ ಎಚ್‌ಒಡಿ ಶ್ರೀಮತಿ ಜ್ಯೋತಿ ಎಂ ಪಿಂಟೋ, ಕಂಪ್ಯೂಟರ್ ಸೈನ್ಸ್ ವಿಭಾಗದ ಎಚ್‌ಒಡಿ ಶ್ರೀಮತಿ ಪ್ರೀಮಾ ಪಿರೇರಾ ಅವರು ಸಂಯೋಜಿಸಿದರು. ಶ್ರೀಮತಿ ಲೊವಿನಾ ಆರನ್ಹಾ, ವಾಣಿಜ್ಯ ವಿಭಾಗದವರು ಸನ್ಮಾನ ಸಮಾರಂಭದ ಜವಾಬ್ದಾರಿಯನ್ನು ವಹಿಸಿಕೊಂಡರು,ಗಣಕ ವಿಜ್ಞಾನ ವಿಭಾಗದ ಶ್ರೀಮತಿ ಶುಭವಾಣಿ ಸ್ವಾಗತಿಸಿದರು.

ಮಾನವಿಕ ವಿಭಾಗದ ಶ್ರೀಮತಿ ಅವಿತಾ ಡಿಸೋಜಾ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕನ್ನಡ ವಿಭಾಗದ ಶ್ರೀಮತಿ ಶೈಲಜಾ ಧನ್ಯವಾದವಿತ್ತರು.

ಆಟಗಳು ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ-ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ 1 : ಆಟಗಳು ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ. ಹಾಗು ಕ್ರೀಡೆಗಳಿಂದ ಪ್ರೀತಿ,ಒಗ್ಗಟಿನಬಲ, ಏಕಾಗ್ರತೆ,ಕ್ರಿಯಾಶೀಲತೆ,ಬುದ್ದಿವಂತಿಕೆಯನ್ನು ಚುರುಕುಗೊಳಿಸುವಂತಾಗುತ್ತದೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪ್ರೌಡಶಾಲಾವರಣದಲ್ಲಿ ಸೋಮವಾರ ರಾಯಲ್ಪಾಡು ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯ ಮೂಲಕ ದೇಶದ ಘನತೆ ಗೌರವವನ್ನು ಕಾಪಾಡುವಂತೆ ಕರೆನೀಡಿದರು.
ರಾಯಲ್ಪಾಡು ಗ್ರಾಮದಲ್ಲಿ ನಾನು ಪ್ರಾಥಮಿಕ ಶಾಲೆ ಓದಿರುತ್ತೇನೆ ಎಂದು ಹೇಳಿ ತಮ್ಮ ಶಾಲೆಯ ದಿನಗಳನ್ನು ಸ್ಮರಿಸಿ ಕೊಂಡು , ನಾನು ಪ್ರತಿದಿನ ಯೋಗಾಭ್ಯಾಸವನ್ನು ಮಾಡುತ್ತೇನೆ ನೀವು ಸಹ ಪ್ರತಿ ದಿನ ಯೋಗ ಮತ್ತು ಧ್ಯಾನವನ್ನು ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತಹೇಳಿದರು.
ತಾಲೂಕಿನ ಸರ್ಕಾರಿ ಶಾಲೆಗಳ ದುರಸ್ಥಿ ಕಾಮಗಾರಿಗಳಿಗಾಗಿ 2ಕೋಟಿ ರೂಗಳ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿ ರಾಯಲ್ಪಾಡು ಶಾಲಾ ಕಾಲೇಜು ಆವರಣದಲ್ಲಿ ಬೇಕಾಗಿರುವ ಮೂಲ ಭೂತ ಸೌಲಭ್ಯ ಕಲ್ಪಸಿಕೊಡುವುದಾಗಿ ಭರವಸೆ ನೀಡಿದರು.
ವಿದಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ ಆಗಬೇಕಾದರೆ ದೈಹಿಕ ಮುಖ್ಯ . ಶಾಲೆಗಳಲ್ಲಿ ವಿಷಯವಾರು ಶಿಕ್ಷಕರು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದದು ದೈಹಿಕ ಶಿಕ್ಷಕರು. ದೇಶದಲ್ಲಿ 143 ಕೋಟಿ ಜನಸಂಖ್ಯೆ ಇದ್ದು, 35 ಕೋಟಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು , ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಇಂದಿನ ಸರ್ಕಾರವು ಅದರ ಗಮನಿಸಿ, ಪರಿಹಾರ ನೀಡುತ್ತದೆ ಎಂದು ನಾನು ಭಾವಿಸುತ್ತಿದ್ದಾನೆ ಎಂದರು. ಸಾಮಾನ್ಯವಾಗಿ ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಕ ಭರ್ತಿ ನೀಡಿ ಕ್ರೀಡೆಗಳಿಗೆ ಸರ್ಕಾರಗಳು ವಿಶೇಷ ಪ್ರೋತ್ಸಾಹವನ್ನು ನೀಡಿದರೆ ವಿಶ್ವ ಮಟ್ಟದಲ್ಲಿ ನಡೆಯುವ ಒಲಂಪಿಕ್ ಹಾಗು ಇತರೆ ಕ್ರೀಡಾಕೂಟಗಳಲ್ಲಿ ಎಲ್ಲಾ ದೇಶಗಳನ್ನು ನಮ್ಮ ದೇಶದ ಕ್ರೀಡಾಪಟುಗಳು ಹೆಚ್ಚಿ ಸಾಧನೆ ಮಾಡುತ್ತಾರೆ ಎಂದರು.
ಸಾಮಾನ್ಯವಾಗಿ ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ದೈಹಿಕವಾಗಿ ಹಾಗು ಮಾನಸಿಕವಾಗಿ ಭಲಾಡ್ಯರು , ಆ ವಿದ್ಯಾರ್ಥಿಗಳು ಹೋಬಳಿ, ತಾಲೂಕು , ಜಿಲ್ಲಾ , ರಾಜ್ಯ ಮಟ್ಟದಲ್ಲಿ ಗೆಲುವು ಸಾಧನೆ ಮಾಡಲು ಸಾಧ್ಯ ಎಂದರು. ದೇಶದಲ್ಲಿ ನಮ್ಮ ರಾಜ್ಯವು ಶಿಕ್ಷಣ ಕ್ಷೇತ್ರದಲ್ಲಿ 2ನೇ ಸ್ಥಾನದಲ್ಲಿ ಇದೆ ಎಂದು ಮಾಹಿತಿ ನೀಡಿದರು.
ಸರ್ಕಾರದಿಂದ ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಗೆ ಅನುದಾನ ಬರುವುದಿಲ್ಲ. ಸಂಘ, ಸಂಸ್ಥೆಗಳ ಹಾಗೂ ದಾನಿಗಳ ಬಳಿ ಬಿಕ್ಷೆ ಬೇಡುವ ಪರಿಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ನಿಮ್ಮ ಜೀವನದ ಗುರಿಯನ್ನು ಮಟ್ಟುವಂತೆ ಸಲಹೆ ನೀಡಿದರು.
ಜಿಂಕಲವಾರಿಪಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಿತು. ಕ್ರೀಡಾ ವಿದ್ಯಾರ್ಥಿಗಳಿಗೆ ವಕೀಲ ಕೆ.ವಿ.ಶಿವಾರೆಡ್ಡಿ ಊಟದ ವ್ಯವಸ್ಥೆ ಮಾಡಿದ್ದರು.
ಇಒ ವಿ.ಕೃಷ್ಣಪ್ಪ, ಬಿಇಒ ಉಮಾದೇವಿ, ಜಿ.ಪಂ.ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಲೋಚನ, ಬಿಆರ್‍ಸಿ ಕೆ.ಸಿ.ವಸಂತ, ಇಸಿಒ ಹನುಮೇಗೌಡ, ಪಿಎಸ್‍ಐ ಯೋಗೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ವೆಂಕಟಸ್ವಾಮಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬೈರೆಡ್ಡಿ, ನೌಕರರ ಸಂಘದಾ ತಾಲೂಕು ಅಧ್ಯಕ್ಷ ಬಂಗವಾದಿ ನಾಗರಾಜ್, ಗೌನಿಪಲ್ಲಿ ಗ್ರಾ.ಪಂ. ಅಧ್ಯಕ್ಷ ಶೇಷಾದ್ರಿ, ಯರ್ರಂವಾರಿಪಲ್ಲಿ ಗ್ರಾ.ಪಂ. ಉಪಾಧ್ಯಕ್ಷ ವೈ.ಆರ್.ಶ್ರೀನಿವಾಸರೆಡ್ಡಿ, ಪಿಡಿಒ ನರೇಂದ್ರಬಾಬು, ಗ್ರಾ.ಪಂ.ಮಾಜಿ ಸದಸ್ಯ ಸಿಮೆಂಟ್‍ನಾರಾಯಣಸ್ವಾಮಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಶಶಿಕುಮಾರ್, ಮುಖಂಡ ಶ್ರೀರಾಮರೆಡ್ಡಿ, ಮದರಂಕಪಲ್ಲಿ ಶಂಕರರೆಡ್ಡಿ, ಆಂಜಿ, ಚಕ್ಕಾ ಲಕ್ಷ್ಮೀನಾರಾಯಣಶೆಟ್ಟಿ, ಸುಬ್ರಮಣಿ, ಕಾವೇರಿ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಮಹೇಶ್, ತಾಲೂಕು ಪ್ರೌಡಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್.ರಾಮಚಂದ್ರ, ಶಾಲೆಯ ಮುಖ್ಯ ಶಿಕ್ಷಕ ಪಿ.ಮಾರಣ್ಣ, ಸಿಆರ್‍ಪಿ ವರದರೆಡ್ಡಿ, ರಾಯಲ್ಪಾಡು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಂ.ಕೆ.ವೆಂಕಟರಮಣ, ಮಂಜೇಶ್ ಹಾಗೂ ಹೋಬಳಿಯ ಎಲ್ಲಾ ಕ್ಲಸ್ಟರ್‍ಗಳ ಸಿಆರ್‍ಪಿಗಳು, ಪ್ರಾಥಮಿಕ , ಪ್ರೌಡಶಾಲೆಗಳ ಶಿಕ್ಷಕ ಸಂಘಗಳ ಪದಾಧಿಕಾರಿಗಳು ಇದ್ದರು.

ಶ್ರೀನಿವಾಸಪುರ:ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಪುರಸಭೆ ಆವರಣದಲ್ಲಿನ ದಾಖಲಾತಿ ಕೇಂದ್ರಗಳ ಪ್ರಯೋಜನ ಪಡೆಯಿರಿ

ಶ್ರೀನಿವಾಸಪುರ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಪಟ್ಟಣದ ಪುರಸಭೆ ಆವರಣದಲ್ಲಿ ಸ್ಥಾಪಿಸಲಾಗಿರುವ ಎರಡು ದಾಖಲಾತಿ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪುರಸಭೆ ಕಂದಾಯ ಅಧಿಕಾರಿ ವಿ.ನಾಗರಾಜ್ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಭಾಗ್ಯಲಕ್ಷಿ ಯೋಜನೆ ಫಲಾನುಭವಿಗಳಿಗೆ, ಫಲಾನುಭವಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಯೋಜನೆ ಲಾಭ ಪಡೆಯುವ ಉದ್ದೇಶದಿಂದ ಎಲ್ಲ ಬ್ರೌಸಿಂಗ್ ಕೇಂದ್ರಗಳ ಮುಂದೆ ಮಹಿಳೆಯರು ಜಾತ್ರೆಯಂತೆ ನೆರೆದಿದ್ದಾರೆ. ದಟ್ಟಣೆ ತಪ್ಪಿಸುವುದಕ್ಕಾಗಿಯೇ ಇಲ್ಲಿ ಎರಡು ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ಫಲಾನುಭವಿಗಳು ತಲಾ ರೂ.12 ನೀಡಿ ಹೆಸರು ನೋಂದಾಯಿಸಬಹುದು. ನೋಂದಾವಣೆಗೆ ಕಾಲ ನಿಗದಿಪಡಿಸಿಲ್ಲ. ಹಾಗಾಗಿ ಫಲಾನುಭವಿಗಳು ಗಾಬರಿಗೊಳ್ಳದೆ ಸಾವಕಾಶವಾಗಿ ನೋಂದಾವಣೆ ಮಾಡಿಸಬೇಕು. ನೂಕುನುಗ್ಗಲಿಗೆ ಅವಕಾಶ ನೀಡಬಾರದು ಎಂದು ಹೇಳಿದರು.
ಪುರಸಭೆ ಕಂದಾಯ ನಿರೀಕ್ಷಕ ಎನ್.ಶಂಕರ್, ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಸಿಬ್ಬಂದಿ ಶ್ರೀನಾಥ್, ಕೀರ್ತನಾ ಇದ್ದರು.

ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆಯಾ ಶಾಲೆಯ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು : ಸಿ.ಆರ್.ಅಶೋಕ್

ಶ್ರೀನಿವಾಸಪುರ: ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆಯಾ ಶಾಲೆಯ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು. ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವಿಷಯಕ್ಕೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಹೇಳಿದರು.
ಮಾರೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಸರ್ಕಾರಿ ಶಾಲಾ ಶಿಕ್ಷಕ ಎಸ್.ಆರ್.ಧರ್ಮೇಶ್, ಪ್ರತಿ ತಿಂಗಳೂ ತಮ್ಮ ಸಂಬಳದಲ್ಲಿ ರೂ.10 ಸಾವಿರ ತೆಗೆದಿಟ್ಟು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಗತ್ಯಗಳಿಗೆ ಬಳಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರ ಪಡೆದುಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಬೇಕು. ಪ್ರಚಾರಕ್ಕಾಗಿ ಹಾತೊರೆಯದೆ, ದಾನಿ ಧರ್ಮೇಶ್ ಅವರಂತೆ ಎಲೆ ಮರೆ ಕಾಯಿಯಂತೆ ಸೇವೆ ಮಾಡಬೇಕು ಎಂದು ಹೇಳಿದರು.
ತಾಲ್ಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ಸುಲೋಚನ ಮಾತನಾಡಿ, ಶಿಕ್ಷಣ ಬದಲಾವಣೆಯ ಸಾಧನ. ಯಾವುದಾದರೂ ಹುದ್ದೆ ಪಡೆಯುವ ಉದ್ದೇಶದಿಂದ ಮಾತ್ರ ಓದಬಾರದು. ಜ್ಞಾನಾರ್ಜನೆ ಶಿಕ್ಷಣದ ಗುರಿಯಾಗಬೇಕು. ಪೋಷಕರು ಮಕ್ಕಳ ಕೈಗೆ ಮೊಬೈಲ್‍ಗೆ ಬದಲಾಗಿ ಪುಸ್ತಕ ಕೊಡಬೇಕು. ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಧರ್ಮೇಶ್ ತಾವು ದುಡಿದು ಗಳಿಸಿದ ಹಣದಿಂದ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಇಷ್ಟದ ಬಟ್ಟೆ ಕೊಡಿಸಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಕೊಡುಗೆ ಸರ್ಕಾರದ ಸೌಲಭ್ಯಕ್ಕೆ ಪೂರಕವಾಗಿದೆ. ವಿದ್ಯಾರ್ಥಿಗಳು ದಾನಿಗಳ ಕೊಡುಗೆ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕರಾದ ಗಿರೀಶ್ ಬಾಬು, ಪುರುಷೋತ್ತಮರೆಡ್ಡಿ, ಮುಖ್ಯ ಶಿಕ್ಷಕ ಮುನಿಶಾಮಿ, ಹಳೆ ವಿದ್ಯಾರ್ಥಿನಿ ಶುಭ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಇಷ್ಟದ ಬಟ್ಟೆ ವಿತರಿಸಲಾಯಿತು. ಅತಿಥಿಗಳನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಮುಖ್ಯ ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್, ಶಿಕ್ಷಕರಾದ ಸೊಣ್ಣಪ್ಪ, ಜಯಮ್ಮ, ನಾಗಿರೆಡ್ಡಿ, ವೆಂಕಟಲಕ್ಷ್ಮಮ್ಮ, ರಾಮಕೃಷ್ಣಪ್ಪ, ರಾಮರೆಡ್ಡಿ, ನಾಗರಾಜಪ್ಪ, ಎಸ್‍ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಅಂತರ ರಾಷ್ಟ್ರೀಯ ಕ್ರಿಡಾಪಟು ನಿಶಾಂತ್ ಕುಮಾರ್ ಇದ್ದರು.

.

ಮಂಗಳೂರು : ಬೊಂದೇಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಟ್ಯಾಲೆಂಟ್ ಫೆಸ್ಟ್’

ಮಂಗಳೂರು, ಜುಲೈ 24 ಹಾಗೂ 25 ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟ್ಯಾಲೆಂಟ್ ಫೆಸ್ಟ್ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತುಳು ರಂಗಭೂಮಿ ಮತ್ತು ತುಳು ಚಲನಚಿತ್ರೋದ್ಯಮದ ಖ್ಯಾತ ನಟ ಭೋಜರಾಜ್ ವಾಮಂಜೂರ್ ಇವರು ನೆರವೇರಿಸಿದರು. ವಿವಿಧ ಹಾಸ್ಯ ಹಾಗೂ ಹಾಡುಗಳ ಮುಖಾಂತರ ಮಕ್ಕಳನ್ನು ರಂಜಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಮಾರ್ಗದರ್ಶನವನ್ನು ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ವಂದನೀಯ ಗುರು ಆಂಡ್ರ್ಯೂ ಲಿಯೋ ಡಿಸೋಜಾ ರವರು

ತಮ್ಮ ಸಂದೇಶದಲ್ಲಿ, ಪ್ರತಿಯೊಬ್ಬ ಮಗುವಿಗೆ ಒಂದಲ್ಲ ಒಂದು ರೀತಿಯ ಪ್ರತಿಭೆ ಇದೆ. ಅದನ್ನು ಹುಡುಕಿ ಪ್ರೋತ್ಸಾಹಿಸಿದಾಗ ಪ್ರತಿಭೆಯು ಹೊರ ಚಿಮ್ಮುತ್ತದೆ. ನಾಚಿಕೆ ಭಯ ಮತ್ತು ಹಿಂಜರಿಕೆಯನ್ನು ಬಿಟ್ಟು ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಬೆಳೆಸಲು ಕರೆಕೊಟ್ಟರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ವಂದನೀಯ ಪೀಟರ್ ಗೊನ್ಸಾಲ್ವಿಸ್ ವಂದನೀಯ ಲ್ಯಾನ್ಸಿ ಡಿಸೋಜಾ ಹಾಗೂ ಶಾಲಾ ನಾಯಕ ತೇಜಸ್ ಮತ್ತು ಶಾಲಾ ಉಪ ನಾಯಕಿ ಮೇಘನ್ ವೇದಿಕೆಯಲ್ಲಿ ಆಸೀನರಾಗಿದ್ದರು. 

ತದನಂತರ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ತರಗತಿ ವಾರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.

ಅಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ದಾಳಿ ; ಅವಾಗ ಲಂಚದ ಹಣವನ್ನೇ ನುಂಗಿದ ಭೂಪ


ಜಬಲ್ಪುರ್: ಮಧ್ಯ ಪ್ರದೇಶದ ಕತ್ನಿ ಎಂಬಲ್ಲಿ ಕಂದಾಯ ವಿಭಾಗದ ಅಧಿಕಾರಿಯೊಬ್ಬರು ತಾವು ಲಂಚ ಸ್ವೀಕರಿಸುತ್ತಿದ್ದಾಗ ಆಗಮಿಸಿದ ಲೋಕಾಯುಕ್ತ ವಿಶೇಷ ಪೊಲೀಸ್‌ ಎಸ್ಟಾಬ್ಲಿಶ್ಮೆಂಟ್‌
ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನು ಕಂಡು ದಂಗಾಗಿ ಲಂಚವಾಗಿ ಸ್ವೀಕರಿಸಿದ ಆತ ರೂ. 5,000 ಹಣವನ್ನೇ ಜಗಿದು ನುಂಗಿಬಿಟ್ಟಿದ್ದಾನೆ.

ಕಂದಾಯ ವಿಭಾಗದ ಅಧಿಕಾರಿ ಪಟ್ವಾರಿ ಗಜೇಂದ್ರ ಸಿಂಗ್‌ ಎಂಬವರು ಸೋಮವಾರ ತಮ್ಮ ಖಾಸಗಿ ಕಚೇರಿಯಲ್ಲಿ ರೂ. 5,000 ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಅಧಿಕಾರಿ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆಂದು ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಲೋಕಾಯುಕ್ತದ ಬಳಿ ದೂರೂ ನೀಡಿದ್ದರು. ಲಂಚ ಸ್ವೀಕರಿಸಿದಾಕ್ಷಣ ಲೋಕಾಯುಕ್ತ ಅಧಿಕಾರಿಗಳನ್ನ ಗಮನಿಸಿದ ಸಿಂಗ್‌ ಏನು ಮಾಡಬೇಕೆಂದು ತೋಚದೆ ನೋಟುಗಳನ್ನು ನುಂಗಿ ಬಿಟ್ಟಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ವೈದ್ಯರ ಸಹಾಯದಿಂದ ಹಣವನ್ನು ಹೊರಗೆ ತೆಗೆಯಲು ಪ್ರಯತ್ನ ಪಟ್ಟರು. ಹಣ ಸುರುಳಿ ರೂಪದಲ್ಲಿ ವಾಂತಿ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.  ಈಗ ಅವರು ಚೆನ್ನಾಗಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು ತನಿಖೆ ಮುಂದುವರಿದಿದೆ.

ಹಣ ಜಗಿದು ನುಂಗುವ ದ್ರಶ್ಯದ ವಿಡೀಯೊ ಲಬ್ದವಾಗಿದೆ

ಮಣಿಪುರ ಮಹಿಳೆಯರ ವಿವಸ್ತ್ರ ಪ್ರಕರಣ – ಈ ತನಕ 7 ಆರೋಪಿಗಳ ಬಂದನ : ಹಿಂಸಾಚಾರದಲ್ಲಿ -160 ಕ್ಕೂ ಹೆಚ್ಚು ಜನರ ಸಾವು, 256 ಚರ್ಚುಗಳಿಗೆ ಬೆಂಕಿ

ಇಂಫಾಲ, ಜು.25: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಬಲ್ ಜಿಲ್ಲೆಯಿಂದ ಸೋಮವಾರ ಸಂಜೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು,  ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂದಿಸಿದಂತಾಗಿದೆ ಎಂದು ತಿಳಿದು ಬಂದಿದೆ.

      ಮೇ 4 ರಂದು ಇಬ್ಬರು ಮೈತೆಯಿ ಬುಡಕಟ್ಟು ಮಹಿಳೆಯರ ವಿವಸ್ತ್ರ ಪ್ರಕರಣದಲ್ಲಿ ಭಾಗವಹಿಸಿದ 14 ಜನರನ್ನು ವೀಡಿಯೊ ಮುಖಾಂತರ ಪೊಲೀಸರು ಮೊದಲು ಗುರುತಿಸಿದ್ದರು.

       ಇಬ್ಬರು ಮಹಿಳೆಯರನ್ನು ಅಪಹರಿಸಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯ 26 ಸೆಕೆಂಡುಗಳ ವಿಡಿಯೋ ಜುಲೈ 19 ರಂದು ಹೊರಬಿದ್ದಿತ್ತು, ವೀಡಿಯೊದಲ್ಲಿ ಕಂಡುಬರುವ ಮಹಿಳೆಯರಲ್ಲಿ ಒಬ್ಬರು ಮಾಜಿ ಸೈನಿಕರ ಪತ್ನಿಯಾಗಿದ್ದು, ಅವರ ಸೈನಿಕ ಪತಿ ಅಸ್ಸಾಂ ರೆಜಿಮೆಂಟ್‌ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದಾರೆ ಹಾಗೆ ಕಾರ್ಗಿಲ್ ಯುದ್ಧದಲ್ಲಿ ಸಹ ಹೋರಾಡಿದ್ದಾರೆ ಎಂದು ತಿಳಿದು ಬಂದಿದೆ.

       ಕಾಂಗ್‌ಪೊಕ್ಪಿ ಜಿಲ್ಲೆಯ ಸೈಕುಲ್ ಪೊಲೀಸ್ ಠಾಣೆಯಲ್ಲಿ ಒಂದು ತಿಂಗಳ ಹಿಂದೆ ಜೂನ್ 21 ರಂದು ವೀಡಿಯೊಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಅದರೆ ವೀಡಿಯೊ ಈಗ ವೈರಲ್ ಆದುದರಿಂದ ಈಗ ಕ್ರಮ ತೆಗೆದುಕೊಳ್ಳಲಾಗಿ. ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ, ಜೂನ್ ೧೩ ರಂದೇ 256 ಚರ್ಚುಗಳಿಗೆ ಬೆಂಕಿ ಹಚ್ಚಿದ್ದಾರೆ ಅಥವಾ ಧ್ವಂಸ ಮಾಡಿದ್ದಾರೆಂದು ಟೆಲಿಗ್ರಾಫ್ ವಾರ್ತೆ ಸಂಸ್ಥೆ ಪ್ರಕಟಿಸಿದೆ. ಪರಿಶಿಷ್ಟ ಪಂಗಡದ (ST) ಸ್ಥಾನಮಾನಕ್ಕಾಗಿ ಮೈತೆಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಲಾಗಿತ್ತು. ಅದಕ್ಕೆ ಪ್ರತೀಕಾರವಾಗಿ ಕುಕ್ಕಿ ಜನಾಂಗದ ಮೇಲೆ ಮೈತೆಯಿ ಜನಾಂಗ ಅಮಾನವೀಯ ರೀತಿಯಲ್ಲಿ ಹಿಂಸಾಚಾರ ಎಸಗಿದೆ      ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ, ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ