ಚಾರ್ತರ್ಮಾಸದ ಸಮಯದಲ್ಲಿ ಭಕ್ತಿ ಮತ್ತು ತಪಸ್ಸು ಇತರ ತಿಂಗಳುಗಳಲ್ಲಿ ಮಾಡುವುದಕಿಂತ ಹೆಚ್ಚಿನ ಪುಣ್ಯ ಪಡೆಯಬಹುದು

ರಾಯಲ್ಪಾಡು 1 :ಈ ಚಾರ್ತರ್ಮಾಸದ ಸಮಯದಲ್ಲಿ ಭಕ್ತಿ ಮತ್ತು ತಪಸ್ಸು ಇತರ ತಿಂಗಳುಗಳಲ್ಲಿ ಮಾಡುವುದಕಿಂತ ಹೆಚ್ಚಿನ ಪುಣ್ಯವನ್ನು ಮತ್ತು ಭಕ್ತಿ ಮತ್ತು ತಪಸ್ಸಿನಿಂದ ನಮ್ಮ ಇಂದ್ರಿಯಗಳು ಮತ್ತು ಮನಸ್ಸು ಶುದ್ಧವಾಗುವುದು ಮತ್ತು ಶುದ್ಧವಾದ ಮನಸ್ಸು ಮಾತ್ರ ದೇವರಿಗೆ ಸಂಪರ್ಕ ಹೊಂದುತ್ತದೆ ಎಂದು ಚಾರ್ತಮಾಸ್ಯೆ ಸೇವಾ ಸಮಿತಿಯ ಪ್ರಧಾನ ಸಂಚಾಲಕ ಹಾಗೂ ಆಖಿಲ ಕರ್ನಾಟಕ ಬ್ರಾಹ್ಮಣರ ಸಂಘದ ಮಾಹಾ ಸಭೆಯ ಉಪಾಧ್ಯಕ್ಷ ಬಿ.ಎಸ್.ರಾಘವೇಂದ್ರಭಟ್ ಹೇಳಿದರು.
ರಾಯಲ್ಪಾಡಿನ ಮೇಧಾಗುರು ಜ್ಯೋರ್ತಿವಿಜ್ಞಾನ ಕೇಂದ್ರದಲ್ಲಿ ಗುರುವಾರ ಬೆಂಗಳೂರಿನ ಚಾರ್ತಮಾಸ್ಯೆ ಸೇವಾ ಸಮಿತಿ ವತಿಯಿಂದ ಹರಿಹರ ಮಠದ ಸ್ವಾಮಿಗಳು ಚಾರ್ತಮಾಸದ ಆಹ್ವಾನ ಪತ್ರಿಕೆಯನ್ನು ನೀಡಿ ಮಾತನಾಡಿದರು.
ಚಾರ್ತರ್ಮಾಸದ ಮೊದಲ ಆಹ್ವಾನ ಪತ್ರಿಕೆಯನ್ನು ಮೇಧಾಗುರು ಜ್ಯೋರ್ತಿವಿಜ್ಞಾನ ಕೇಂದ್ರ ಸಂಸ್ಥಪಾಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ರವರಿಗೆ ವಿತರಿಸಿದರು.
ಮೇಧಾಗುರು ಜ್ಯೋರ್ತಿವಿಜ್ಞಾನ ಕೇಂದ್ರ ಸಂಸ್ಥಪಾಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ಮಾತನಾಡಿ ಆತ್ಮಜ್ಞಾನದಿಂದಲೇ ಮುಕ್ತಿ ದೊರಕುವುದು ನಿಜ , ಆದರೆ ಜ್ಞಾನಮಾರ್ಗವನ್ನು ಹಿಡಿಯಲಾರದವನು ಭಗವಂತನನ್ನು ಭಕ್ತಿಯಿಂದ ಪೂಜಿಸಬೇಕು. ಭಕ್ತಿ ಸಾಮನ್ಯ ಜನರಿಗಷ್ಟೇ ಮೀಸಲಲ್ಲ ,ಭಗವಂತನ ದೃಷ್ಟಿಯಲ್ಲಿ ಬಡವ -ಶ್ರೀಮಂತನೆಂಬ ಬೇಧಬಾವವಿಲ್ಲ ಎಂದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಸಹ ಕಾರ್ಯದರ್ಶಿ ಡಾ|| ಪಿ.ಎಸ್.ರಾಜೇಂದ್ರಪ್ರಸಾದ್, ಹರಿಹರ ಮಠದ ಸೇವಾ ಸದಸ್ಯ ಡಾ|| ಜಯಂತಿ ಆಗಸ್ತ್ಯ , ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಕೆ.ಎಸ್.ಅಂಜನ್‍ಕುಮಾರ್‍ಶರ್ಮ, ಕೆ.ಸತೀಶ್ ಶಾಸ್ತ್ರಿ, ಕೆ.ಎಸ್.ಅರುಣ್‍ಕುಮಾರ್, ಜಿಲ್ಲಾ ಸಹ ಸಂಚಾಲಕರಾದ ಎಸ್.ಸುಬ್ರಮಣ್ಯ, ನವೀನ್‍ಬಾಬು ಇದ್ದರು.

ಸಚಿವ ಕೆ.ಎಚ್.ಮುನಿಯಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು

ಕೋಲಾರದ ಮಾಜಿ ಸಂಸದರೂ ಆಗಿದ್ದು ಈಗ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿಯೂ ಅಧಿಕಾರ ವಹಿಸಿಕೊಂಡಿರುವ ಕೆ.ಎಚ್.ಮುನಿಯಪ್ಪ ಅವರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.

MITK Moodlakatte: Inauguration of YUVA-2023

Yuva-2023 an intercollegiate Management and Cultural Fest , organized by the department of MBA, MITK,  Moodlakatte, Kundapura  was inaugurated by lighting the lamp by Dr. Bhaskar Shetty, Principal, Dr. G Shankar Women’s first grade college Udupi.

While speaking on the occasion in his inaugural address Dr. Bhaskar Shetty appreciated the caption of the programme ‘Yuva-2023’ since building the structure of the nation depends upon the todays youth and we have very good percentage of youth in India, aged between 18 to 35 and it is our greatest strength, he opined. He also told that organizing such events is very essential to carry forward the legacy of great Indian Culture.

Principal, MITK Dr. Abdul Kareem opined that the  highlight of the programme is  ‘Unity in Diversity’. He also told that only getting certificate will not serve the purpose of education, and the programmes like ‘Yuva’   will reinforce the students and will make them give positive contribution to the Society.

While speaking on the occasion Prof.  Doma Chandrashekar , Director of IMJ Institutions and the President of the function told that child like curiosity, confidence , compassion and creativity is very important to be successful in any stream of life.

Director Brand Building IMJ Institutions Dr. Ramkrishna Hegde , Vice- Principal MITK, Prof.  Melwin D’ Souza , Dean TPIR Prof. Amruthmal, HOD of MBA Dept. and Convener of the programme Prof. Harish Kanchan, Principal of IMJISC Dr. Prathibha  Patel, students and faculty of various  Colleges , HOD’s , Faculty Members and Students of MITK were Present on the occasion.

Programme started with the invocation.  Ms.  Sinchana Shetty welcomed the Gathering , Ms. Namrutha introduced the Chief Guest, Ms.  Shristi  Kunder proposed the vote of thanks and Mr. Karthik was the MC for the Programme .

ಕ್ಯಾಬಿನೆಟ್ ಸಚಿವ ಸತೀಶ್ ಜಾರಕಿಹೊಳಿರನ್ನು ಭೇಟಿ ಮಾಡಿದ ಕೋಲಾರ ಜಿಲ್ಲೆಯ ನಾಯಕ ಜನಾಂಗದ ಮುಖಂಡರು

ಕೋಲಾರ,ಮೇ.23: ಸರಳತೆಯ ಸಾಹುಕಾರ, ಅಭಿವೃದ್ಧಿಯ ಹರಿಕಾರ, ನಮ್ಮ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ರವರು ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಕೋಲಾರ ಜಿಲ್ಲೆಯ ನಾಯಕ ಜನಾಂಗದ ಮುಖಂಡರು ಸಚಿವರ ನಿವಾಸದಲ್ಲಿ ಭೇಟಿಯಾಗಿ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ನರಸಿಂಹಯ್ಯ, ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಂ.ಬಾಲಗೋವಿಂದ್, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಭಾ ತಾಲೂಕು ಅಧ್ಯಕ್ಷ ಆನಂದ್‍ಕುಮಾರ್, ಐತರಾಸನಹಳ್ಳಿ ನರಸಿಂಹಯ್ಯ, ಗರುಡನಹಳ್ಳಿ ಬಾಬು, ವಕ್ಕಲೇರಿ ಬಾಬು, ರಾಜ್ಯ ಸಂಘಟನಾ ಕಾರ್ಯದರ್ಶಿ ಬೆಳ್ಳೂರು ತಿರುಮಲೇಶ್, ಕುಡುವನಹಳ್ಳಿ ಆಂಜಿ, ರಂಗನಾಥ್, ಜಿಲ್ಲಾಧ್ಯಕ್ಷ ಕೋಟೆ ಮಧು, ಲಕ್ಷ್ಮಣ್, ಶ್ಶಾಮನಾಯಕ್, ಮೇಡಿಹಾಳ ಮಂಜು, ಮುನಿರಾಜು ಮತ್ತು ಕಲ್ಲಂಡೂರು ನಾಗರಾಜ್ ಉಪಸ್ಥಿತರಿದ್ದರು.

ಕಳೆದೆರಡು ದಿನಗಳ ಮುಂಗಾರು ಪೂರ್ವ ಮಳೆಯ ಅಬ್ಬರದಿಂದ ಬೆಳೆ ಹಾನಿಯಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ

ಕೋಲಾರ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯ ಅಬ್ಬರಕ್ಕೆ ಕೋಲಾರ ಜಿಲ್ಲೆಯ ಅಂದಾಜು 3000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದ್ದು , ರೈತರು ಕಂಗಾಲಾಗಿದ್ದಾರೆ .

ಅಕಾಲಿಕ ಮಳೆಗೆ ರಾಜ್ಯದಲ್ಲೇ ಅತೀ ಹೆಚ್ಚು ಬೆಳೆ ನಷ್ಟ ಕೋಲಾರ ಜಿಲ್ಲೆಯಲ್ಲಾಗಿದ್ದು , ಅಂದಾಜು 3000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು , ಆಸ್ತಿ ಪಾಸ್ತಿ , ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮೇ 23 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿತ್ತು .

ಅದರಂತೆ ಶ್ರೀನಿವಾಸಪುರ ತಾಲ್ಲೂಕಿನ ಕಸಬಾ ಹೋಬಳಿ ದ್ವಾರಸಂದ್ರ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಹಾನಿಗೊಳಗಾದ ತೋಟಗಾರಿಕಾ ಬೆಳೆಗಳಾದ ಮಾವು , ಪರಂಗಿ ಹಾಗೂ ಹೂ ಕೋಸು ತೋಟಗಳಲ್ಲಿ ಪರಿಶೀಲನೆ ನಡೆಸಿದರು .

ಈ ಗ್ರಾಮಗಳಲ್ಲಿ ಶೇಕಡ 33 ಕ್ಕಿಂತಲೂ ಹೆಚ್ಚು ಮಾವಿನ ಫಸಲು ನೆಲ ಕಚ್ಚಿದ್ದು , ಜಿಲ್ಲಾಧಿಕಾರಿಗಳಾದ ವೆಂಕಟರಾಜಾ , ತೋಟಗಾರಿಕಾ ಉಪ ನಿರ್ದೇಶಕರಾದ ಕುಮಾರಸ್ವಾಮಿ , ಹಿರಿಯ ಸಹಾಯಕ ನಿರ್ದೇಶಕರಾದ ಎಂ. ಶ್ರೀನಿವಾಸನ್ , ಹಾಗೂ ಸಂಬಂಧಿತ ರೆವಿನ್ಯೂ ಇನ್ಸ್‌ಪೆಕ್ಟರ್‌ , ಗ್ರಾಮ ಲೆಕ್ಕಾಧಿಕಾರಿಗಳು ಖುದ್ದು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಿದರು .

ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಜಂಟಿ ಸಮೀಕ್ಷೆ ನಡೆಸಿ ಒಂದು ವಾರದೊಳಗೆ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು .

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಒಳಿತಿಗಾಗಿ ಶ್ರಮಿಸುವ ಅವಕಾಶ ಸಿಕ್ಕಿದೆ : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಕೋಲಾರ : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಯನ್ನು ರಾಜ್ಯದ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಒಳಿತಿಗಾಗಿ ಶ್ರಮಿಸುವ ಅವಕಾಶ ಎಂದು ಭಾವಿಸಿ ಕಾರ್ಯನಿರ್ವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ಬುಧವಾರ ಸಂಜೆ ಬೆಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ತಮಗೆ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪತ್ರಕರ್ತರು ಯಾವುದೇ ಸಂದರ್ಭದಲ್ಲಿ ವೃತ್ತಿಯ ಮೌಲ್ಯಗಳಿಗೆ ಕಳಂಕ ಬಾರದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿಗಳಿಗೆ ರಾಜಕೀಯ ಸಲಹೆಗಾರ, ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಯಾಗುವ ಅವಕಾಶ ಇದ್ದರೂ ಸಹ ತಮ್ಮನ್ನು ಇದುವರೆಗೂ ಸಾಕಿ, ಸಲುಹಿದ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಅವಕಾಶವನ್ನೇ ಬಳಸಿಕೊಳ್ಳಬೇಕು ಎಂಬ ಉದ್ದೇಶದಿಂದ ಮಾಧ್ಯಮ ಸಲಹೆಗಾರ ಜವಾಬ್ದಾರಿಯನ್ನೇ ಆಯ್ಕೆ ಮಾಡಿಕೊಂಡಿದ್ದಾಗಿ ಪ್ರಭಾಕರ್ ವಿವರಿಸಿದರು.

ತಾವು ಪತ್ರಿಕೋದ್ಯಮದಲ್ಲಿ ಈ ಹಂತವನ್ನು ಕ್ರಮಿಸಲು ಕಾರಣರಾದ ಕೋಲಾರದ ಹಿರಿಯ ಪತ್ರಕರ್ತರಾದ ದಿವಂಗತ ಬಿ.ವಿ.ನರಸಿಂಹಮೂರ್ತಿ, ಎಂ.ಮಲ್ಲೇಶ್ ಹಾಗೂ ಬಿ.ಎನ್.ಗುರುಪ್ರಸಾದ್, ಹಿರಿಯ ಪತ್ರಕರ್ತರಾದ ಕೆ.ಪ್ರಹ್ಲಾದರಾವ್, ಬಿ.ವಿ.ಗೋಪಿನಾಥ್, ಎಂ.ವಾಸುದೇವಹೊಳ್ಳ ಅವರುಗಳನ್ನು ಪ್ರಭಾಕರ್ ಇದೇ ವೇಳೆ ಸ್ಮರಿಸಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಮೊದಲಿನಿಂದಲೂ ಪ್ರಭಾಕರ್ ತಮಗೆ ಸಿಕ್ಕಿದ ಅವಕಾಶಗಳನ್ನು ಬಳಸಿಕೊಂಡು ಪತ್ರಕರ್ತರು ಮತ್ತು ಪತ್ರಿಕೋದ್ಯಮದ ನೆರವಿಗೆ ಬಳಸಿದ್ದಾರೆ. ಈಗಲೂ ಸಹ ಅವರ ಕಡೆಯಿಂದ ನಾಡಿನ ಪತ್ರಿಕೋದ್ಯಮಕ್ಕೆ ಪ್ರಯೋಜನ ಸಿಗಲಿದೆ ಎಂದು ನುಡಿದರು.

ಪ್ರಭಾಕರ್ ಅವರ ಹುಟ್ಟೂರಿನ ಪರವಾಗಿ ಅಭಿನಂದಿಸಿದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ಪ್ರಭಾಕರ್ ಈ ಹಂತಕ್ಕೆ ಬೆಳೆಯಲು ಸ್ವಯಂಕೃಷಿ ಮತ್ತು ಪರಿಶ್ರಮವೇ ಕಾರಣ. ಅವರು ಅತ್ಯಂತ ಸುಗಮವಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಜವಾಬ್ದಾರಿಯನ್ನು ನಿರ್ವಹಿಸಲಿ ಎಂದು ಹಾರೈಸಿದರು.

ಕೆಯುಡಬ್ಲ್ಯೂಜೆ ಖಜಾಂಚಿ ಎಂ.ವಾಸುದೇವಹೊಳ್ಳ ಮಾತನಾಡಿ, ಮೊದಲಿನಿಂದಲೂ ಪ್ರಭಾಕರ್ ಮುನ್ನುಗ್ಗುವ ಸ್ವಭಾವ ಹೊಂದಿದ್ದು, ಅದು ಅವರ ಯಶಸ್ಸಿನ ಸೋಪಾನವಾಗಿದೆ ಎಂದು ನುಡಿದರು.

ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ಕಂ.ಕ ಮೂರ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಪ್ರಭಾಕರ್ ಅವರನ್ನು ಅಭಿನಂದಿಸಿ ಮಾತನಾಡಿದರು.

ಈ ವೇಳೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಕೆ.ವಿ.ಪ್ರಭಾಕರ್ ಅವರನ್ನು ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು, ಕೋಲಾರವಾಣಿ ಸಂಪಾದಕ ಬಿ.ಎನ್.ಮುರಳಿಪ್ರಸಾದ್, ಕೃಷ್ಣಾಪುರ ದೇವರಾಜ್, ಬಂಗಾರಪೇಟೆ ನಾಗಮಣಿ, ಶ್ರೀನಿವಾಸ್ ಶಾಲು ಹೊದಿಸಿ ಅಭಿನಂದಿಸಿದರು.

ಭಂಡಾರ್ಕಾರ್ಸ್ ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೇರಳಕಟ್ಟೆಯ ಪುರಾತನ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವಲ್ಲಿ ಶ್ರಮದಾನ

ಕುಂದಾಪುರ:ದಿನಾಂಕ 19-05-2023 ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ರಾಮಕೃಷ್ಣ ಭಟ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಅರುಣ್ ಎ ಎಸ್, ರಾಮಚಂದ್ರ ಆಚಾರ್, ಅಣ್ಣಪ್ಪ ಪೂಜಾರಿ ಹಾಗೂ ಉಪನ್ಯಾಸಕರಾದ ಗಿರಿರಾಜ್ ಭಟ್ ಉಪಸ್ಥಿತರಿದ್ದರು.
90 ವಿದ್ಯಾರ್ಥಿಗಳು ಒಂದು ದಿನದ ಈ ಶಿಬಿರದಲ್ಲಿ ಭಾಗವಹಿಸಿ ದೇವಸ್ಥಾನದ ಪರಿಸರವನ್ನು ಸ್ವಚ್ಛ ಗೊಳಿಸಿ, ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಪಾಲ್ಗೊಂಡರು.

ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯಿಂದ ಪಿತ್ತ ಜನಕಾಂಗ ಬದಲಾವಣೆಗಾಗಿ ರೋಗಿಗೆ ಇಪ್ಪತ್ತು ಸಾವಿರ ರೂಪಾಯಿ ದೇಣಿಗೆ

ಕುಂದಾಪುರ : ಮಣಿಪಾಲ ಆಸ್ಪತ್ರೆಯಲ್ಲಿ ಪಿತ್ತ ಜನಕಾಂಗ ಬದಲಾವಣೆಗೆ ( Liver transplant) ರೂಪಾಯಿ ಇಪ್ಪತ್ತು ಸಾವಿರ ದೇಣಿಗೆಯನ್ನು ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಇವರು ರೋಗಿಯ ಪತ್ನಿಗೆ ಹಸ್ತಾಂತರಿಸಿದರು. ಈ ದೇಣಿಗೆಯನ್ನು ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ಕೊಡಮಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.

Moodlakatte : Mangalore University Inter Zone  Women’s Throw Ball Tournament- Alva’s Moodbidre emerge as Champion

In the Mangalore University Inter zone throw ball tournament for women, organized by IMJISC  Moodlakatte in association with Mangalore University , Alva’s First Grade College Moodbidri emerged as champion defeating Govt. First Grade college Hebri  in the final by 2-0. Paduva College Mangalore and MSRS Shirva bagged the third and fourth place respectively.

Earlier at the same venue, in the Udupi zone throw ball tournament, Alva’s  Moodbidri  emerged champion defeating Hebri Govt. College in the final match, third and fourth place were won by SMC Shirva and MSRS shirva  respectively.

Chief Guest of the Prize Distribution Ceremony, held at IMJISC grounds Moodlakatte, Mr. Harsavardhan, MD of Sristi Infotech  Kundapura, told that the sports should be an integral part of the education system and he appreciated the good participation by the teams . Guest of honour of the function Dr. Herald Santhosh, PD of Mangalore University, told the students to make time for the sports  by cutting the time on the mobile phones, and achieve  better physical fitness and mental health. Principal of IMJISC Moodlakatte and the president of the function, Dr. Prathibha Patel told, losing is not the end and by good determination followed by hard work  will surely give the winning streak.

Asst. P.D Mangalore University, Dr. Haridas Kuloor, Director, Brand Building  IMJ Institutions,  Dr. Ramakrishna Hegde, Vice Principal IMJISC Prof. Jayasheel Kumar, Physical Directors of Various Participating colleges, Referees of the tournament, Participants,  staff and students of the college were present on the occasion. Prof. Pavana  welcomed the gathering, Prof. Khaleel  Ahamed   read the list of winners ,  Prof. Pavana proposed the vote of thanks , Prof. Sumana was Master of Ceremony of the programme.