ಗ್ರಾಮದ ಜನತೆ ಬಹಳ ಶ್ರಮಜೀವಿಗಳು. ನಿಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವುದೇ ನನ್ನ ಆಶಯ:ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ : ಈ ಗ್ರಾಮದ ಜನತೆ ಬಹಳ ಶ್ರಮಜೀವಿಗಳು. ನಿಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವುದೇ ನನ್ನ ಆಶಯ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. 

ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಮಂಗಳವಾರ ೭.೨೫ ಲಕ್ಷದಲ್ಲಿ ನಿರ್ಮಿಸಲಾದ ಶಾಲೆಯ ನೂತನ ಕೊಠಡಿಯನ್ನು ಉದ್ಗಾಟಿಸಿ ಮಾತನಾಡಿದರು. 

ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಕುಡಿಯುವ ನೀರು, ಕಾಂಪೌAಡ್ ನಿರ್ಮಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು . ನೀವು ಬೆಂಗಳೂರಿನಲ್ಲಿನ ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಈ ಒಂದು ದೃಷ್ಟಿಯಿಂದ ಈ ಭಾಗದ ವಿದ್ಯಾರ್ಥಿಗಳಿಗಾಗಿ ೨೫ ಕೋಟಿ ವೆಚ್ಚದಲ್ಲಿ ವಸತಿ ಶಾಲೆಯನ್ನ ನಿರ್ಮಿಸಿ ಉತ್ತಮ ಗುಣಮಟ್ಟವನ್ನು ಹೊಂದಿರುವ ಶಿಕ್ಷರನ್ನ ನೇಮಿಸಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಲಾಗುವುದು  ಭರವಸೆ ನೀಡಿದರು.

ಈ ಭಾಗದಲ್ಲಿ ವಸತಿ ಶಾಲೆಯನ್ನು ನಿರ್ಮಿಸಿದರೆ ಕೋನೇಟಿ ತಿಮ್ಮನಪಲ್ಲಿ, ಶಿವಪುರ, ಗೌಡಹಳ್ಳಿ, ಜೆವಿ ಕಾಲೋನಿ ಗ್ರಾಮಗಳಲ್ಲಿನ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. 

ಒಂದು ಗ್ರಾಮವು ಅಭಿವೃದ್ಧಿಯಾಗಬೇಕಾದರೆ ಗ್ರಾಮದಲ್ಲಿನ ಎಲ್ಲರೂ ಪಕ್ಷಾತೀತವಾಗಿ ಸೇರಿ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸುವಂತೆ ಕರೆನೀಡಿದರು. ಈ ಹಿಂದೆ ಗ್ರಾಮದಲ್ಲಿ ಘರ್ಷಣೆಗಳು ಇತ್ತು , ಘರ್ಷಣೆಗಳನ್ನು ಮರೆತು ಸಹಬಾಳ್ವೆಯೊಂದಿಗೆ ನೆಲಸುವಂತೆ ಮನವಿ ಮಾಡಿದರು. ನನಗೆ ಈ ಭಾಗದ ಮುಖಂಡರಾದ ತಿಮ್ಮಿರೆಡ್ಡಿ, ರಾಮಚಂದ್ರಪ್ಪ, ಸಿದ್ದಪ್ಪ, ಮುನಿಯಪ್ಪ ಸಹಕರಿಸಿದ್ದರು ಎಂದು ಮಾಹಿತಿ ನೀಡಿದರು.   

ಇದೇ ಸಮಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವಾರು ಕುಟುಂಬಗಳು ಮುಖಂಡರು ಸೇರ್ಪಡೆಗೊಂಡರು. ಕೆಎಂಎಫ್ ನಿರ್ದೇಶಕ ಎನ್.ಹನುಮೇಶ್, ಮಾಸ್ತೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ರವಿಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಗರ‍್ರಪ್ಪ, ಮುಖಂಡರಾದ ಪ್ರಥಮ ದರ್ಜೆ ಗುತ್ತಿಗೆದಾರರಾದ ಗೌಡಹಳ್ಳಿ ವೆಂಕಟರೆಡ್ಡಿ, ಶಿವಪುರ ಎಸ್.ಜಿ.ವಿ ವೆಂಕಟೇಶ್, ಆಲೇರಿ ಬಾಬು, .ವೆಂಕಟೇಶ್, ಗಾಂಡ್ಲಹಳ್ಳಿ ಶಶಿಕುಮಾರ್, ಮುನಿಯಪ್ಪ, ಗಂಗಾಧರ್, ಅಶ್ವತಗೌಡ ,ಅಮರೀಶ್.ಇದರು. 

ಮೂಡ್ಲಕಟ್ಟೆ ಎಂ ಐ ಟಿ: ವಿಶ್ವ ಜಲ ದಿನಾಚರಣೆ

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್  ಕಾಲೇಜಿನ ಸಿವಿಲ್‌ ಇಂಜಿನಿಯರಿಂಗ್ ವಿಭಾಗ ಹಾಗೂ ಇಕೋ ಕ್ಲಬ್ ಇದರ ಸಹಭಾಗಿತ್ವದಲ್ಲಿ ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು.  ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ರಾಜೇಂದ್ರ ಕಲ್ಬಾವಿ ಇವರು ಆಗಮಿಸಿ ನೀರಿನ ಮಹತ್ವ ಮತ್ತು ಸಂರಕ್ಷಣೆ ವಿಷಯದ ಕುರಿತು ವಿಚಾರ ವಿನಿಮಯ ಮಾಡಿದರು. ನೀರನ್ನು ಜೀವ ಜಲ ಎಂದು ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ನೀರಿನ ಅಭಾವದ ಕುರಿತು ಎಚ್ಚರಿಸುತ್ತ ಬಾವಿಯ ನೀರಿನ ಮಟ್ಟ ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹೊಸ ಹೊಸ ಆವಿಷ್ಕಾರದ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಐಎಮ್ ಜೆ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫ಼ೆಸರ್ ದೋಮ ಚಂದ್ರಶೇಖರ ಮಾತನಾಡಿ ಮುಂದಿನ ಪೀಳಿಗೆಗೆ ನೀರನ್ನು ಕಾಯ್ದಿರಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ಆ ಕುರಿತು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ಕರೀಮ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ ಅದನ್ನು ಎಲ್ಲರೂ ಪಾಲಿಸಬೇಕು ಎಂದು ವಿಧ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ಐಎಮ್ ಜೆಐ ಎಸ್ ಸಿ ಕಾಲೇಜಿನ ಪ್ರಾಂಶುಪಾಲೆ ಡಾ ಪ್ರತಿಭ ಪಟೇಲ್, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ|ರಾಮಕೃಷ್ಣ ಹೆಗ್ಡೆ, ಸಿವಿಲ್‌ ವಿಭಾಗದ ಮುಖ್ಯಸ್ಥ ಪ್ರೊಫ಼ೆಸರ್ ಪ್ರಶಾಂತ ಹೆಗ್ಡೆ, ಸಿಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಪ್ರಥಮ್ ಮೈಕೆಲ್ ಕಾರ್ಯಕ್ರಮ ನಿರೂಪಿಸಿ, ಆಮೆ ನಾಂಗ್ಬೋ ವಂದಿಸಿದರು.

ಕೆದಿಂಜೆ ಶಾಲೆ : ಹಳೆ ವಿದ್ಯಾರ್ಥಿಗಳ ಸಮಾವೇಶ, ಗುರುವಂದನೆ ಕಾರ್ಯಕ್ರಮ

ಕಾರ್ಕಳ ತಾಲೂಕು ಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಪುರಸ್ಕøತ ಸಂಸ್ಥೆ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿಗಳ ಸಮಾವೇಶ, ಗುರುವಂದನೆ ಕಾರ್ಯಕ್ರಮ, ವಿದ್ಯಾರ್ಥಿ ವೇತನ ವಿತರಣೆ, ಚೈತ್ಯನ್ಯ ಅವಲೋಕನ ಬಿಡುಗಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಯು. ಶೇಷಗಿರಿ ಕಾಮತ್ ವಹಿಸಿದ್ದರು. ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜಯಂತ್ ರಾವ್ ಪಿ. ಚೈತ್ಯನ್ಯ ಅವಲೋಕನ ಬಿಡುಗಡೆ ಮಾಡಿದರು. ಭಾರತೀಯ ಜೇಸಿಐನ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ. ಅಭಿನಂದನಾ ಭಾಷಣ ಮಾಡಿದರು. ಬೆಳ್ಮಣ್ಣು ವಾಸ್ತು ತಜ್ಞರು, ಜ್ಯೋತಿಷ್ಯರಾದ ಡಾ. ಆಚಾರ್ಯ ವಾದಿರಾಜ ಅವರು ಗುರುವಂದನಾ ಕಾರ್ಯಕ್ರಮದ ಪ್ರಯೋಜಕತ್ವ ನೀಡಿ ನಿವೃತ್ತ ಹಾಗೂ ಪ್ರಸಕ್ತ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರು ಆರ್ಥಿಕವಾಗಿ ಹಿಂದುಳಿದ ಕಲಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿದರು. ವೇದಿಕೆಯಲ್ಲಿ ಶಾಲಾ ಯಕ್ಷಗಾನ ಗುರುಗಳಾದ ಮಹಾವೀರ ಪಾಂಡಿ ಕಾಂತಾವರ, ಶಾಲಾ ಚಿತ್ರಕಲಾ ಶಿಕ್ಷಕರಾದ ಶಿರ್ವ ಗಣೇಶ್ ಆಚಾರ್ಯ, ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸೂರ್ಯಕಾಂತ್ ಶೆಟ್ಟಿ ಮೊದಲಾದವರಿದ್ದರು.
ಗುರುವಂದನೆ : ಶಾಲಾ ನಿವೃತ್ತ ಶಿಕ್ಷಕರಾದ ಪ್ರಭಾಕರ್ ಶೆಟ್ಟಿ, ತುಕಾರಾಮ ಶೆಟ್ಟಿ, ಸರೋಜಿನಿ ಶೆಟ್ಟಿ, ಅನಿಲ್ ಕುಮಾರ್, ಲಕ್ಷ್ಮೀನಾರಾಯಣ ಭಟ್, ಸುಧಾಕರ್ ರಾವ್ ಹಾಗೂ ಪ್ರಸಕ್ತ ಸಾಲಿನಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್, ರೇಖಾ ಪೈ, ಗೌರವ ಶಿಕ್ಷಕರಾದ ಮಮತಾ, ಜಯಲಕ್ಷ್ಮೀ, ಚೇತನಾ, ಭಾರತಿ ಅವರನ್ನು ಸನ್ಮಾನಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ತಾರ್ಥನೆಗೈದರು, ಶಾಲಾ ಮುಖ್ಯ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್ ಅವರು ಸ್ವಾಗತಿಸಿದರು, ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ತುಕಾರಾಮ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು, ಶಾಲಾ ಸಹಶಿಕ್ಷಕಿ ರೇಖಾ ಪೈ ವಿದ್ಯಾರ್ಥಿ ವೇತನದ ವಿವರ ನೀಡಿದರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸದಸ್ಯರಿಂದ ಸಂಗೀತ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ‘ಪಂಚವಟಿ’ ಯಕ್ಷಗಾನ ಜರಗಿತು.

ಮಾ. 30 ರಂದು ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ


ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಮಾ. 30 ರಂದು ಶ್ರೀ ರಾಮನವಮಿಯಂದು ಜರುಗಲಿದೆ.
ರಥೋತ್ಸವ ಸಂಬಂಧ ಮಾ. 26 ರಿಂದ ಕಾರ್ಯಕ್ರಮಗಳು ನಡೆಯುತ್ತಿದ್ದು 30 ರಂದು ಗುರುವಾರ ಬೆಳಿಗ್ಗೆಯಿಂದ ಪಂಚಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ, ಮಹಾಪೂಜೆ, ಮಹಾಬಲಿ ಪ್ರಧಾನ ನಡೆದು ಸಂಜೆ ಬ್ರಹ್ಮರಥಾರೋಹಣ ನಡೆಯಲಿದೆ ನಂತರ ರಾತ್ರಿ ಬ್ರಹ್ಮರಥೋತ್ಸವ ಜರುಗಲಿರುವುದು.
ಮಾರ್ಚ್ 31 ರಂದು ಓಕುಳಿ ಸಂಭ್ರಮದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳು, ಓಕುಳಿ ಉತ್ಸವ, ಚೂರ್ಣೋತ್ಸವ, ಅವಭೃತ ಸ್ನಾನ, ಧ್ವಜಾರೋಹಣ ಹಾಗೂ ರಾತ್ರಿ ಮೃಗಬೇಟೆ ಉತ್ಸವ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದು, ರಥೋತ್ಸವಕ್ಕೆ ಸರ್ವರನ್ನು ಆಹ್ವಾನಿಸಿದ್ದಾರೆ.


ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ: ಮೇ 10ರಂದು ಮತದಾನ ಒಂದೇ ಹಂತದ ಮತದಾನ: 13ರಂದು ಮತ ಎಣಿಕೆ – ನೀತಿ ಸಂಹಿತೆ ಜಾರಿ -ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆ
ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದ್ದು ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಬಳಿಕ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ
.

ಏನಿದು ನೀತಿ ಸಂಹಿತೆ? ಅದರ ಮಾಹಿತಿ ಇಲ್ಲಿದೆ

ಚುನಾವಣಾ ದಿನಾಂಕಗಳ ಘೋಷಣೆಯೊಂದಿಗೆ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಂದರೆ ನಾಯಕರು, ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ಸಂಹಿತೆಗೆ ಬದ್ಧರಾಗಿರುತ್ತಾರೆ. ಅಂದರೆ ದೇಶದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ಮಾದರಿ ನೀತಿ ಸಂಹಿತೆ ಎಂದರೆ ಏನು? ನೀತಿ ಸಂಹಿತೆ ಜಾರಿಯಾದಾಗ ಏನು ಮಾಡಬಹುದು ಹಾಗೂ ಏನು ಮಾಡುವ ಹಾಗಿಲ್ಲ ಎಂದು ಕೆಳಗೆ ತಿಳಿಸಲಾಗಿದೆ.

1. ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ಅಭ್ಯರ್ಥಿ ಮತದಾರರನ್ನು ಯಾವುದೇ ರೀತಿಯಲ್ಲಿ ಪ್ರೇರೇಪಿಸಲು ಪ್ರಯತ್ನ ಪಡುವಂತಿಲ್ಲ. ಯಾವುದೇ ಅಭ್ಯರ್ಥಿಯು ತನ್ನ ಮತದಾರರಿಗೆ ಮದ್ಯ ಅಥವಾ ಯಾವುದೇ ರೀತಿಯ ಲಂಚ ನೀಡುವ ಬಗ್ಗೆ ಅಮೀಷ ಒಡ್ಡುವಂತ್ತಿಲ್ಲ. ಯಾವುದೇ ಮತದಾರರನ್ನು ಬೆದರಿಸಬಾರದು. ಈ ರೀತಿ ಮಾಡಿ ಸಿಕ್ಕಿಬಿದ್ದರೆ ಚುನಾವಣಾ ಆಯೋಗ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬಹುದು.

2. ಯಾವುದೇ ಅಭ್ಯರ್ಥಿಯು ಧಾರ್ಮಿಕ ಅಥವಾ ಜಾತಿ ಭಾವನೆಗಳಿಗೆ ನೋವುಂಟು ಮಾಡುವ ಅಥವಾ ಪ್ರಚೋದಿಸುವ ಪ್ರಯತ್ನವೆಂದು ಪರಿಗಣಿಸಬಹುದಾದಂತಹ ಕೆಲಸವನ್ನು ಮಾಡಬಾರದು. ಈ ಸಂದರ್ಭದಲ್ಲಿ ಯಾರ ವಿರುದ್ಧವೂ ಅಶ್ಲೀಲ ಭಾಷೆ ಬಳಸುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ತಮ್ಮ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಮತಕ್ಕಾಗಿ ಮತದಾರರಲ್ಲಿ ಮನವಿ ಮಾಡುವಂತಿಲ್ಲ.

3. ಚುನಾವಣೆಯ ಸಂದರ್ಭದಲ್ಲಿ ಸರ್ಕಾರಿ ವಾಹನ ಅಥವಾ ಸರ್ಕಾರಿ ವಿಮಾನವನ್ನು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರೀತಿಯ ಸರ್ಕಾರಿ ಘೋಷಣೆಗಳು, ಉದ್ಘಾಟನೆ,
ಶಂಕುಸ್ಥಾಪನೆ ಅಥವಾ ಭೂಮಿಪೂಜೆ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

4. ಪಕ್ಷಗಳು ಯಾವುದೇ ಸಭೆ ಅಥವಾ ಕೂಟವನ್ನು ನಡೆಸಬೇಕಾದರೆ, ಅದಕ್ಕಾಗಿ ಆ ಪ್ರದೇಶದ ಸ್ಥಳೀಯ ಪೊಲೀಸರಿಗೆ ಅದರ ಬಗ್ಗೆ ತಿಳಿಸಬೇಕಾಗುತ್ತದೆ ಮತ್ತು ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯ ಅನುಮತಿ ಕೂಡ ಅಗತ್ಯ.

5. ಚುನಾವಣಾ ಆಯೋಗದಿಂದ ಮಾನ್ಯವಾದ ಪಾಸ್ ಹೊಂದಿರುವ ಮತದಾರರು ಮಾತ್ರ ಮತಗಟ್ಟೆಯನ್ನು ಪ್ರವೇಶಿಸಬಹುದು.

6. ಚುನಾವಣಾ ಆಯೋಗವು ಪ್ರತಿ ಮತಗಟ್ಟೆಯ ಹೊರಗೆ ನಿರೀಕ್ಷಕರನ್ನು ನಿಯೋಜಿಸುತ್ತದೆ ಇದರಿಂದ ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ ಅವರಿಗೆ ದೂರು ನೀಡಬಹುದು.

7. ರಾಜಕೀಯ ಪಕ್ಷಗಳು ಮತ್ತು ಅವರ ಅಭ್ಯರ್ಥಿಗಳು ತಮ್ಮ ಪ್ರತಿಸ್ಪರ್ಧಿಗಳ ಟೀಕೆಗಳನ್ನು ರಾಜಕೀಯ, ಕಾರ್ಯಕ್ರಮಗಳು, ಹಿಂದಿನ ದಾಖಲೆ ಮತ್ತು ಕೆಲಸಗಳಿಗೆ ಸೀಮಿತಗೊಳಿಸಬೇಕು. ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷವು ವೈಯಕ್ತಿಕ ಟೀಕೆಗಳನ್ನು ಅಥವಾ ನಾಯಕರು ಅಥವಾ ಕಾರ್ಯಕರ್ತರ ಸಾರ್ವಜನಿಕ ಚಟುವಟಿಕೆಗಳಿಗೆ ಸಂಬಂಧಿಸದ ಯಾವುದೇ ಹೇಳಿಕೆಗಳನ್ನು ನೀಡುವಂತಿಲ್ಲ.

8. ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವುದು, 48 ಗಂಟೆಗಳ ಅವಧಿಯಲ್ಲಿ ಹಾಗೂ ಮತದಾನದ ಮುಕ್ತಾಯಕ್ಕೆ ನಿಗದಿತ ಗಂಟೆ ಇತ್ಯಾದಿ ಸಮಯಾವಧಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಮುಂತಾದ ಪದ್ಧತಿಗಳನ್ನು ತಪ್ಪಿಸಬೇಕು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

9. ವ್ಯಕ್ತಿಗಳ ಅಭಿಪ್ರಾಯಗಳು ಅಥವಾ ಚಟುವಟಿಕೆಗಳ ವಿರುದ್ಧ ಪ್ರತಿಭಟಿಸುವ ಮೂಲಕ ಅವರ ಮನೆಗಳ ಮುಂದೆ ಪ್ರದರ್ಶನಗಳು ಅಥವಾ ಪಿಕೆಟಿಂಗ್ ಅನ್ನು ಚುನಾವಣಾ ಸಮಿತಿಯು ನಿಷೇಧಿಸುತ್ತದೆ. ಇದಲ್ಲದೆ, ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೆ ಧ್ವಜಗಳು, ಬ್ಯಾನರ್‌ಗಳು, ಸೂಚನೆಗಳು ಮತ್ತು ಘೋಷಣೆಗಳನ್ನು ಬರೆಯಲು ಅವರ ಅನುಯಾಯಿಗಳಿಗೆ ಬಳಸಲು ಅನುಮತಿ ಇರುವುದಿಲ್ಲ.

10. ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯು ಯಾವುದೇ ಸಭೆ ನಡೆಸುವುದಾಗಿದ್ದರೆ ಸಾಕಷ್ಟು ಮುಂಚೆಯೇ ಅದರ ಬಗ್ಗೆ ಮಾಹಿತಿ ನೀಡಿ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ. ಉದ್ದೇಶಿತ ಸಭೆಯ ಸ್ಥಳ ಮತ್ತು ಸಮಯವನ್ನು ಸಾಕಷ್ಟು ಮುಂಚಿತವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು. ಧ್ವನಿವರ್ಧಕ ಬಳಸಲು ಸ್ಥಳೀಯ ಪ್ರಾಧಿಕಾರವು ಸೂಚಿಸಿದಂತೆ ಸರಿಯಾದ

ಕುಂದಾಪುರ:ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಬಾರಂದಾಡಿ ಕನ್ನಡ ಮಾಧ್ಯಮ ಶಾಲೆಯ ಅಭಿವ್ರದ್ದಿಗಾಗಿ 80 ಸಾವಿರ ರೂಪಾಯಿ ದೇಣಿಗೆ

ಕುಂದಾಪುರ. ಮಾ.28 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಈ ದಿನ ತಮ್ಮ ಆಡಳಿತ ಕಛೇರಿಯಲ್ಲಿ ಬಾರಂದಾಡಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಅಭಿವ್ರದ್ದಿಗಾಗಿ ರೂಪಾಯಿ ಎಂಬತ್ತು ಸಾವಿರ ದೇಣಿಗೆ ನೀಡಿದರು.

ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಶಾಲೆಯ HM ಶ್ರೀಮತಿ ಅಮಿತಾ ಆರ್ ಶೆಟ್ಟಿ ಇವರಿಗೆ 80,000/- ದ ಚೆಕ್ ಹಸ್ತಾಂತರಿಸಿದರು. ಈ ದೇಣಿಗೆಯನ್ನು ರೆಡ್ ಕ್ರಾಸ್ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ಯವರು ಕೊಡಮಾಡಿದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ ಮತ್ತು ಡಾ. ಸೋನಿ ಉಪಸ್ಥಿತರಿದ್ದರು .

ಜೆಸಿಐ ಕುಂದಾಪುರ ಸಿಟಿ ವತಿಯಿಂದ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಗೆ ಫ್ಯಾನುಗಳ ಕೊಡುಗೆ

ಕುಂದಾಪುರ : ಇಲ್ಲಿನ ಸಂಚಾರಿ ಪೊಲೀಸ್ ಠಾಣೆಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಫ್ಯಾನುಗಳನ್ನು ಕೊಡುಗೆ ರೂಪದಲ್ಲಿ ನೀಡಲಾಯಿತು
ಈ ಸಂದರ್ಭದಲ್ಲಿ ಠಾಣೆಯ ಠಾಣಾಧಿಕಾರಿ ನಾಸಿರ್ ಹುಸೇನ್, ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷೆ ಡಾ ಸೋನಿ ಡಿಕೋಸ್ತಾ, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ರಾದ ರಾಘವೇಂದ್ರ ಚರಣ್ ನಾವಡ, ಗಿರೀಶ್ ಹೆಬ್ಬಾರ್, ವಿಜಯ್ ತೆಕ್ಕಟ್ಟೆ, ರಾಘವೇಂದ್ರ ಕುಲಾಲ್
ಸದ್ಯಸ್ಯರಾದ ಗುರುರಾಜ್ ಕೊತ್ವಾಲ್ ನಾಗರಾಜ್ ಪಾಟ್ವಲ್ ಇನ್ನಿತರರು ಉಪಸ್ಥಿತರಿದ್ದರು

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ /Scouts and Guides Summer Camp at Holy Redeemer English Medium School, Belthangadi

ಬೆಳ್ತಂಗಡಿ:ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಮಾರ್ಚ್ 23 ಮತ್ತು 24 ರಂದು ಸ್ಕೌಟ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಎರಡು ದಿನಗಳ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಸ್ಕೌಟ್ ತರಬೇತುದಾರ ಶ್ರೀ ವಲೇರಿಯನ್ ಸಿಕ್ವೇರಾ ಮುಖ್ಯ ಅತಿಥಿಯಾಗಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್‌ನ ಮೋಟೋ, ಪ್ರಾಮುಖ್ಯತೆ ಮತ್ತು ಮೂಲಭೂತ ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿ ನೀಡಲಾಯಿತು. ವಿವಿಧ ವೈಯಕ್ತಿಕ ಮತ್ತು ತಂಡದ ಚಟುವಟಿಕೆಗಳನ್ನು ನಡೆಸಲಾಯಿತು. ಮುಖ್ಯೋಪಾಧ್ಯಾಯ ಫಾದರ್ ಕ್ಲಿಫರ್ಡ್ ಪಿಂಟೋ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ಪ್ರಭಾರಿ ಶಿಕ್ಷಕರಾದ ಬ್ಲೆಂಡಿನ್ ರೋಡ್ರಿಗಸ್, ಶಾಂತಿ ಪಿರೇರಾ, ಅಖಿದಾ ಬಾನು, ಅನಿತಾ ಮತ್ತು ಎಲ್ವಿತಾ ಪೈಸ್ ಶಿಬಿರವನ್ನು ಆಯೋಜಿಸಿದ್ದರು.

Scouts and Guides Summer Camp at Holy Redeemer English Medium School, Belthangadi

Holy Redeemer English Medium School, Belthangady organized a Two day Summer camp for Scout and Guides, Cubs and Bul Bul students on March 23rd & 24th. Mr Valerian Sequiera, Physical Education Teacher and Scout Trainer of St Teresa High School, Belthangady was the chief guest. Students were given good information on the moto, importance and basic duties of the Scouts and Guides. Various individual and team activities were conducted. Headmaster Fr Clifford Pinto and encouraged the students. Incharge teachers Blendin Rodrigues, Shanthi Pereira, Akhida Banu, Anitha and Elvita Pais organised the camp.

Holy Redeemer English Medium School, Belthangady had its Farewell ceremony / ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ : 10 ನೇ ತರಗತಿ ಮತ್ತು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯು ಮಾರ್ಚ್ 25 ರಂದು ಹೊರಹೋಗುವ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಿತು.

ನಿರ್ಗಮಿತ ಶಿಕ್ಷಕಿಯರಾದ ಶ್ರೀಮತಿ ಕವಿತಾ ಮತ್ತು ಕುಮಾರಿ ದಿವ್ಯಾ ಮತ್ತು ಚರ್ಚ್ ಧರ್ಮಾಧಿಕಾರಿ ಜೋಯಲ್ ಪ್ರೀತಂ ರೇಗೊ ಅವರನ್ನು ಸಂಸ್ಥೆಯ ವತಿಯಿಂದ ಅವರ ಸೇವೆಗಾಗಿ ಸನ್ಮಾನಿಸಲಾಯಿತು. ಪ್ಯಾಸ್ಟೋರಲ್ ಕೌನ್ಸಿಲ್ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಪಿಟಿಎ ಉಪಾಧ್ಯಕ್ಷ ಬೊನವೆಂಚರ್ ಪಿಂಟೋ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಫಾದರ್ ಕ್ಲಿಫರ್ಡ್ ಪಿಂಟೋ ಅವರು ಶಿಕ್ಷಕರ ಮುಂದಿನ ವೃತ್ತಿ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು. 9ನೇ ತರಗತಿಯ ವಿದ್ಯಾರ್ಥಿಗಳು ನೃತ್ಯ ಹಾಗೂ ಹಾಡುಗಳ ಮೂಲಕ ಎಲ್ಲರನ್ನೂ ರಂಜಿಸಿದರು. ಶಿಕ್ಷಕಿಯರಾದ ಸರಿತಾ ರೋಡ್ರಿಗಸ್ ಅವರು ನಿರ್ಗಮಿಸಿದ ಶಿಕ್ಷಕರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 10ನೇ ತರಗತಿಯ ವಿದ್ಯಾರ್ಥಿಗಳಾದ ರೋಹನ್ ಮತ್ತು ಇವಾನ್ ಏಂಜೆಲ್ ಡಿಸೋಜಾ ಶಾಲಾ ದಿನಗಳ ಬಗ್ಗೆ ತಮ್ಮ ವಿಚಾರಗಳನ್ನು ಹಂಚಿಕೊಂಡರು. ಹೊರಹೋಗುವ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರವನ್ನು ನೀಡಲಾಯಿತು. ವಿದ್ಯಾರ್ಥಿಗಳಾದ ಸಾನ್ವಿ ಸ್ವಾಗತಿಸಿ, ಸನಾ ವಂದಿಸಿದರು. ಶಿಕ್ಷಕಿ ಪ್ರೀತಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Holy Redeemer English Medium School, Belthangady had its Farewell ceremony

Holy Redeemer English Medium School, Belthangady had its Farewell ceremony for outgoing Class 10 students on March 25th. Departing Teachers Mrs. Kavitha and Ms Divya, and Church Deacon Joel Preetham Rego were felicitated by the institution for their service. Parish Pastoral Council Vice President Walter Monis and PTA Vice President Bonaventure Pinto were present. Headmaster Fr Clifford Pinto wished well for the future career of the teachers and the future of the students. Students of Class 9 entertained everyone with dances and songs. Teachers Sarita Rodrigues expressed her views on the departing teachers. Class 10 students Rohan and Evon Angel D’Souza shared their thoughts on school days. Outgoing students were presented with a memento and certificates. Students Sanvi welcomed and Sana thanked. Teacher Preetha D’Souza compered the program.