ಒಗ್ಗಟ್ಟಿನ ಕೊರತೆಯಿಂದ ರಾಜಕಾರಣ ದಲಿತರ ಕೈ ಜಾರುತ್ತಿದೆ – ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್

ಕೋಲಾರ : ರಾಜ್ಯದ 150 ವಿಧಾನ ಸಭಾ ಕ್ಷೇತ್ರಗಳಲ್ಲಿ ದಲಿತರೇ ನಿರ್ಣಾಯಕರಾಗಿದ್ದರೂ , ಒಗ್ಗಟ್ಟಿನ ಕೊರತೆಯಿಂದಾಗಿ ರಾಜಕಾರಣ ದಲಿತ ಕೈ ಜಾರುತ್ತಿದೆಯೆಂದು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿಷಾದಿಸಿದರು .
ನಗರದ ಗಲ್‌ಪೇಟೆಯಲ್ಲಿ ದಲಿತ ಸಮುದಾಯದ ಖಾಸಗಿ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು , ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ದಲಿತರು ಒಗ್ಗಟ್ಟಾಗಿ ಮತ ಚಲಾಯಿಸಿದರೆ ರಾಜಕೀಯಕೀಲಿ ಕೈ ಹಿಡಿಯಲು
ಸಾಧ್ಯವಾಗುತ್ತದೆ , ದಲಿತರು ಒಂದಾಗಬೇಕಿದೆ ಎಂದರು.
ಹಳ್ಳಿ ಮತ್ತು ಕೇರಿಗಳು ಒಂದಾಗುವವರೆವಿಗೂ ಸಮಾನತೆಯ ಹೋರಾಟ ಮುಂದುವರೆಸಬೇಕೆಂದು ಪ್ರತಿಪಾದಿಸಿದ ಅವರು , ಹಲವು ಹೋರಾಟಗಳಿಗೆ ನಾಂದಿ ಹಾಡಿರುವ ಕೋಲಾರ ಜಿಲ್ಲೆಯಿಂದಲೇ ಈ ಹೋರಾಟವನ್ನು ತಾವೇ ಮು೦ದೆನಿ೦ತು ಮುನ್ನಡೆಸುವುದಾಗಿ ಘೋಷಿಸಿದರು.
ಕೋಲಾರದಲ್ಲಿ ತಮ್ಮ ತಂದೆ ಆರಂಭಿ ಸಿದ ಸಿದ್ದಾರ್ಥ ಪ್ರೌಢಶಾಲೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ತಾವು ಕೋಲಾರಕ್ಕೆ ಆಗಮಿಸಿದ್ದು , ಸಿದ್ದಾರ್ಥಪ್ರೌಢಶಾಲೆಯನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದರು .
ಮಾಜಿ ಸ್ಪೀಕರ್ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಮಾತನಾಡಿ , ಸ್ವಾತ೦ತ್ರ್ಯ ಅಮೃತ ಮಹೋತ್ಸವ ಭಾಷಣದಲ್ಲಿ ತಮಗೆ ಮಹಿಳೆಯರ ಮೇಲೆ ಗೌರವ ವಿದೆಯೆಂದು ಹೇಳಿದ ಮೋದಿಯವರು , ತಮ್ಮದೇ ಗುಜರಾತ್ ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವ ನೆಪದಲ್ಲಿ ಬಿಡುಗಡೆ ಮಾಡಿ ಅವರನ್ನು ಅಭೂತ ಪೂರ್ವವಾಗಿ ಸ್ವಾಗತಿಸಿದ್ದಾರೆ. ಇಂತವರಿಗೆ ಮಹಿಳೆ ಮತ್ತು ಸಮಾನತೆಯ ಹಕ್ಕುಗಳನ್ನು ನೀಡಿರುವ ಸಂವಿಧಾನದ ಮೇಲೆ ಹೇಗೆ ಗೌರವ ಇರಲು ಸಾಧ್ಯ ಎಂದು ಪ್ರಶ್ನಿಸಿದರು.
ಪ್ರಾಸ್ತಾವಿಕವಾಗಿ ಹಿರಿಯ ದಲಿತ ಮುಖಂಡ ಸಿ.ಎಂ. ಮುನಿಯಪ್ಪ ಮಾತನಾಡಿ , ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರು ಹಂಗಿನ ರಾಜಕಾರಣ ಮಾಡಬೇಕಾಗಿದೆ , ಸ್ವತಂತ್ರವಾಗಿ
ಪ೦ಗಡಗಳ ಮಾತನಾಡುವ ಹಕ್ಕು ಇಲ್ಲವಾಗಿದೆ. ಒಳಕಿತ್ತಾಡ ಬಿಟ್ಟು ಒಂದಾಗದಿದ್ದರೆ ಸ್ವಾಭಿಮಾನದ ರಾಜಕಾರಣ ಸಾಧ್ಯವಾಗುವುದಿಲ್ಲ , ಅಪಾಯದಲ್ಲಿರುವ ಸಂವಿಧಾನ ವನ್ನು ಸಂರಕ್ಷಿಸಲು ಸಾಧ್ಯವಿಲ್ಲವೆಂದು ಟೀಕಿಸಿದರು .
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ದಲಿತ ಮುಖಂಡರು ಸಂಘಟನೆಗಳ ಪರವಾಗಿ ಜಿ. ಪರಮೇಶ್ವರ್‌ರನ್ನು ಸನ್ಮಾನಿಸಲಾಯಿತು .
ವೇದಿಕೆಯಲ್ಲಿ ಶಾಸಕರಾದ ಕೆ.ವೈ. ನಂಜೇಗೌಡ , ಎಸ್.ಎನ್ . ನಾರಾಯಣಸ್ವಾಮಿ , ನಜೀರ್‌ ಅಹಮದ್‌ , ಮುಖಂಡರಾದ ಚಂದನಗೌಡ , ಮುನಿಆಂಜಿನಪ್ಪ , ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಶ್ರೀನಿವಾಸ್ , ಶ್ರೀಕೃಷ್ಣ , ಎನ್.ಮುನಿಸ್ವಾಮಿ , ಗೊಲ್ಲ ಹಳ್ಳಿ ಶಿವಪ್ರಸಾದ್‌ , ಟಿ.ವಿಜಯಕುಮಾರ್ , ತಿಮೃಯ್ಯ , ಬೆಳಗಾನಹಳ್ಳಿ ಮುನಿವೆಂಕಟಪ್ಪ ಹಾಗು ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಜರಿದ್ದರು.

ಜನರು ಕಲ್ಯಾಣ ಮಂಟಪ,ಸಮುದಾಯ ಭವನಗಳ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು:ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ : ಜನರು ಕಲ್ಯಾಣ ಮಂಟಪ ಹಾಗೂ ಸಮುದಾಯ ಭವನಗಳ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ತಾಲ್ಲೂಕಿನ ಕೋಟಬಲ್ಲಪ್ಪಲ್ಲಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರೂ .೭೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೀತಾರಾಮ ಕಲ್ಯಾಣ ಮಂಟಪ , ರೂ .೧೮ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ , ರೂ .೮ ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು . ಸಮುದಾಯ ಭವನಗಳು ಜ್ಞಾನಾರ್ಜನೆಗೆ ಪೂರಕ ಕೇಂದ್ರಗಳಾಗಬೇಕು . ಗ್ರಾಮದ ಜನರು ಸೇರಿ ವ್ಯವಸಾಯ ಮತ್ತಿತರ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಬೇಕು . ಸಮುದಾಯ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಬೇಕು ಎಂದು ಹೇಳಿದರು . ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ , ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ , ಕೊಂಡಸಂದ್ರ ಶಿವಾರೆಡ್ಡಿ , ಸುರೇಶ್ ಗೌಡ , ಸತ್ಯನಾರಾಯಣಶೆಟ್ಟಿ , ಸತ್ಯಣ್ಣ , ರಾಮಕೃಷ್ಣಗೌಡ , ವೆಂಕಟರವಣ , ಜಯಪದ , ಶಾಂತಮ್ಮ , ಹಿಮಕರ್‌ , ವಿ.ವಾಸುದೇವ ಇದ್ದರು

ದೇಶದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರ ಸಂಸದ ಎಸ್.ಮುನಿಸ್ವಾಮಿ

ಕೋಲಾರ : ನಮ್ಮ ದೇಶದಲ್ಲಿ ಶಿಕ್ಷಣದ ವ್ಯವಸ್ಥೆಯು ಇತರ ದೇಶಗಳಿಗಿಂತ ಅತ್ಯುತ್ತಮವಾಗಿದೆ , ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳು ಸಾಧನೆ ಮಾಡಿ ದೇಶದ ಉನ್ನತ ಸ್ಥಾನಗಳನ್ನು ಅಲಂಕರಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಈ ಕಾರಣದಿಂದ ದೇಶದ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಭಾರತರತ್ನ ಡಾ || ಎಸ್ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಹಾಗೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬೋಧಿಸಬೇಕು . ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸಿ ಸನ್ಮಾರ್ಗದಲ್ಲಿ ನಡೆಸುವಂತಹ ಗುಣ ಶಿಕ್ಷಕರಲ್ಲಿ ಇರುತ್ತದೆ . ಶಿಕ್ಷಕರಾದವರು ಬಹಳ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಅದಕ್ಕಾಗಿ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ . ಇದರಿಂದ ಶಾಲಾ ಮಕ್ಕಳಲ್ಲಿರುವ ಕೌಶಲ್ಯ ಪ್ರತಿಭೆ , ಹೆಚ್ಚಲಿದೆ . ಅನಾದಿ ಕಾಲದಿಂದಲು ಶಿಕ್ಷಕರಿಗೆ ಗುರುವಿನ ಸ್ಥಾನ ನೀಡಿ ಗೌರವಿಸಿದ ಪರಂಪರೆ ನಮ್ಮ ದೇಶದ್ದಾಗಿದೆ . ಶಿಕ್ಷಕರೆಲ್ಲರೂ ಮಕ್ಕಳನ್ನು ದೇಶದ ಶಕ್ತಿಯನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಹೊಂದಬೇಕು ಎಂದು ಹೇಳಿದರು . ಶಿಕ್ಷಕರು ಒಳ್ಳೆಯ ಸೇವೆಯನ್ನು ನೀಡಿದರೆ ನಿಮ್ಮನ್ನು ಮುಂದಿನ ದಿನಗಳಲ್ಲಿ ನೆನಪಿಸಿಕೊಳ್ಳುವರು , ದೇಶದ ಸ್ವಾತಂತ್ರ ಪೂರ್ವದಲ್ಲಿ ಶಿಕ್ಷಣದಿಂದ ವಂಚಿತರಾದ ಸಮುದಾಯದಲ್ಲಿ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿಯಾಗಿದ್ದ ಸಾವಿತ್ರಿಬಾಯಿ ಪುಲೆ ಅವರನ್ನು ಈ ದಿನ ಸ್ಮರಿಸುವುದು ಅವರಿಗೆ ನೀಡುವ ಗೌರವವಾಗಿದೆ . ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಗುರುಭವನವನ್ನು ಸಿ.ಎಸ್.ಆರ್ ಅನುದಾನ ಮತ್ತು ಜಿಲ್ಲಾ ಪಂಚಾಯಿತಿ ಮತ್ತು ಟಿ.ಎಸ್.ಪಿ ಅನುದಾನದಲ್ಲಿ ನಿರ್ಮಿಸಲಾಗುತ್ತದೆ ಹಾಗೂ ಸಂಸದರ ಅನುದಾನದಿಂದ 50 ಲಕ್ಷ ರೂ.ಗಳನ್ನು ಗುರು ಭವನ ನಿರ್ಮಾಣಕ್ಕೆ ನೀಡಿದ್ದೇನೆ , ಸರ್ಕಾರ ವಿದ್ಯಾರ್ಥಿಗಳ ಸುಲಭ ಕಲಿಕೆಗೆ ಉಚಿತ ಸಮವಸ್ತ್ರ , ಉಚಿತ ಶಿಕ್ಷಣ , ಬಿಸಿ ಊಟದಂತಹ ಆನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು . ವಿಧಾನ ಪರಿಷತ್‌ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್ ಅವರು ಮಾತನಾಡಿ ಈ ದಿನ ನಾವೆಲ್ಲರೂ ನೆನಪಿಸಿಕೊಳ್ಳ ಬೇಕಿರುವುದು ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಇವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿ ನಂತರ ದೇಶದ ಮೊದಲ ಉಪರಾಷ್ಟ್ರಪತಿ ಮತ್ತು ಎರಡನೇ ರಾಷ್ಟ್ರಪತಿಯಾಗಿ ಉತ್ತಮ ಸೇವೆ ಸಲ್ಲಿಸಿದ ಮಹಾನ್ ತತ್ವಜ್ಞಾನಿ . ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದಂತಹ ಸೇವೆಯನ್ನು ಗುರುತಿಸಿ ಅಂದಿನಿಂದ ಸರ್ಕಾರ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತಾ ಬಂದಿದೆ . ಪ್ರತಿಯೊಂದು ಮಗುವಿಗೂ ತಾಯಿ ಮೊದಲ ಗುರುವಾಗಿದ್ದು , ಶಿಕ್ಷಕ ಆ ಮಗುವಿನ ವ್ಯಕ್ತಿತ್ವ ನಿರ್ಮಿಸಿ ಜೀವನದ ಉದ್ದಕ್ಕೂ ವ್ಯಕ್ತಿಯ ಜೊತೆಗಿರುತ್ತಾನೆ . ಸಮಾಜದಲ್ಲಿ ಇಂದಿನ ಶಿಕ್ಷಣ ವ್ಯವಸ್ಥೆ ಏನಾಗಿದೆ ಎಂದರೆ ಸರ್ಕಾರಿ ಶಾಲೆಗಳಿಗೆ ಯಾರು ಸಹ ಅವರ ಮಕ್ಕಳನ್ನು ಸೇರಿಸುತ್ತಿಲ್ಲ ಎಲ್ಲರೂ ಇಂಗ್ಲೀಷ್ ವ್ಯಾಮೋಹಕ್ಕೆ ಒಳಪಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ . ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಕರು ಯಾವುದೇ ಬೇಧ ಭಾವ ತೋರದೆ ಎಲ್ಲರನ್ನು ಸಮಾನವಾಗಿ ಕಾಣಬೇಕು ಎಂದು ತಿಳಿಸಿದರು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಮಾತನಾಡಿ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮುಖ್ಯ ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಸದೃಢ ದೇಶ ಕಟ್ಟಲು ಸಾಧ್ಯ ಗೌರವಯುತ ಹಾಗೂ ಶ್ರೇಷ್ಠ ಸ್ಥಾನಮಾನ ಹೋದಿರುವ ಶಿಕ್ಷಕರು ತಮ್ಮ ಆರ್ಪಣಾ ಮನೋಭಾವದ ಸೇವೆಯ ಮೂಲಕ ವೃತ್ತಿಯ ಘನತೆಯನ್ನು ಹೆಚ್ಚಿಸಬೇಕು . ಹಾಗೂ ವಿದ್ಯಾರ್ಥಿಗಳನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಆದ್ಯ ಕರ್ತವ್ಯ ಎಂದು ತಿಳಿಸಿದರು . ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ದೇವರಾಜ್ ಅವರು ಮಾತನಾಡಿ ಒಬ್ಬ ಶಿಕ್ಷಕ ತನ್ನ ವಿದ್ಯಾರ್ಥಿಗೆ ಶಿಸ್ತು , ಒಳ್ಳೆಯ ವಿಚಾರ , ಹೊಸ ಹೊಸ ವಿಷಯಗಳನ್ನು ಬೋಧಿಸಿದರೆ ಸಮಾಜದಲ್ಲಿ ಒಂದು ಒಳ್ಳೆಯ ವ್ಯಕ್ತಿಯಾಗಲು ಸಾಧ್ಯ , ಗುರುಗಳು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉತ್ತಮ ಮಾರ್ಗದರ್ಶಕರಾಗಬೇಕು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ 18 ಸರ್ಕಾರಿ ಶಾಲಾ ಶಿಕ್ಷಕರನ್ನು ಹಾಗೂ 29 ಖಾಸಗಿ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು .
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಘೋರ್ಪಡೆ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ , ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ , ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು
.

ಭಾ.ರೆ.ಕ್ರಾಸ್- ಲಯನ್ಸ್ ಅಮ್ರತ್ ಧಾರ ಸಹಯೋಗದೊಂದಿಗೆ ಜನೌಷಧಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಲಯನ್ಸ್ ಅಮ್ರತ್ ಧಾರ ಇವರ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಭಿರ ಆಉಯೋಜಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಸಭಾಪತಿ ಎಸ್‌ ಜಯಕರ ಶೆಟ್ಟಿ ಮಾಡಿದರು. ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸೀತಾರಾಮ ನಕ್ಕತ್ತಾಯ, ಗಣೇಶ್ ಆಚಾರ್ಯ, ಡಾ. ಸೋನಿ, ಸರಸ್ವತಿ ಪುತ್ರನ್, ಆಶಾ ಎಸ್ ಶೆಟ್ಟಿ ಮತ್ತು ಕಲ್ಪನ ಭಾಸ್ಕರ ಉಪಸ್ಥಿತರಿದ್ದು, ಈ ಶಿಬಿರದಲ್ಲಿ 170 ಜನಾರು ಇದರ ಪ್ರಯೋಜನ ಪಡೆದರು.

ಭಂಡಾರ್ ಕಾರ್ಸ್ ಕಲಾ ವಿಜ್ಞಾನ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪುರ: ಮೇಧಾವಿಗಳು ತಿಳಿದವರು ಶಿಕ್ಷಣದ ಕುರಿತು ಸಾಕಷ್ಟು ವ್ಯಾಖ್ಯಾನ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು. ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಣವು ಬೇರೆ ಬೇರೆ ಆಯಾಮವನ್ನು ಪಡೆದುಕೊಂಡಿದೆ. ಹೊಸ ಶಿಕ್ಷಣ ನೀತಿಯೂ ಮಕ್ಕಳನ್ನು ತರಗತಿ ಮಾತ್ರವಲ್ಲದೇ ಅದರಾಚೆಗೆ ತೆರಡಿದಲು ಸಾಧ್ಯವಾಗಿದೆ. ವಿದ್ಯಾರ್ಥಿಗಳೆಲ್ಲರೂ ಶೈಕ್ಷಣಿಕ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಇಂದು ಮಾತ್ರ ನೆನೆಯುವುದು ಅಲ್ಲ, ಅವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ವಿವೇಕ ಪ್ರೌಢಶಾಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು.

ಅವರು ಸೆಪ್ಟೆಂಬರ್ 5ರಂದು ಇಲ್ಲಿನ ಭಂಡಾರ್ ಕಾರ್ಸ್ ಕಲಾ ವಿಜ್ಞಾನ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿ, ಮಾತನಾಡಿದರು. ಸಾಮಾನ್ಯವಾಗಿ ಎಲ್ಲರ ಆತಂಕ, ಭಯ ಹಾಗೂ ಧಾವಂತಗಳಲ್ಲಿಯೇ ಬದುಕುತ್ತಿದ್ದೇವೆ. ಇದನ್ನ ಮನೋ ಮಾಲಿನ್ಯ ಎನ್ನಬಹುದು. ಮನ ಹಾಗೂ ಮನಸ್ಸು ಕತ್ತಲೆ ಮಾಡಿಕೊಂಡು ಬೇರೆ ಕಡೆಯಲ್ಲಿ ಬೆಳಕು ಹುಡುಕುವ ಪ್ರಯತ್ನ ಮಾಡುತ್ತೇವೆ. ಆದರೆ ಯಾವತ್ತೂ ಮನಸ್ಸಿನಲ್ಲಿರುವ ಕೊಳಕನ್ನು ದೂರ ಮಾಡಬೇಕು. ಹಾಗೇ ಮಾಡಿದರೆ ಮಾತ್ರ ನಮ್ಮ ಬೆಳವಣಿಗೆ ಸಾಧ್ಯ. ತಡೆ ಬಂದಾಗ ವೇಗ ಅಗತ್ಯವಾಗಿ ಬೇಕು. ಹೀಗಾಗಿ ಬದುಕಿನಲ್ಲಿ ಏನೇ ಎದುರಾದರೂ ಕೂಡ ಮುನ್ನಗ್ಗ ಬೇಕು. ಅವಕಾಶಗಳು ನಮಗಾಗಿ ಕಾಯುವುದಿಲ್ಲ. ಅವಕಾಶ ಸಿಕ್ಕಾಗ ಬಳಸಿ, ಬದುಕಿನ ಉದ್ದೇಶ ಹಾಗೂ ಗುರಿಯನ್ನು ಪ್ರೀತಿಸಿದರೆ ಬೆಳವಣಿಗೆ ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ.ಲಲಿತಾದೇವಿ ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಸರೋಜ ಎಂ ವಂದಿಸಿದರು. ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕ ದುರ್ಗಾಪ್ರಸಾದ್ ಮತ್ತು ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು.

ಕಲ್ಯಾಣಪುರ ಮೌಂಟ್ ರೋಜರಿ ಚರ್ಚ್: ಕಥೊಲಿಕ್ ಸಭಾ ಹಾಗೂ ಶಿಕ್ಷಣ ಆಯೋಗದ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ


PHOTOS: RICHARD DSOUZA

ಮೌಂಟ್ ರೋಜರಿ ಕಥೊಲಿಕ್ ಸಭಾ ಕಲ್ಯಾಣಪುರ ಹಾಗೂ ಶಿಕ್ಷಣ ಆಯೋಗದ ಸಹಯೋಗದಲ್ಲಿ ಭಾನುವಾರ ಮೌಂಟ್ ರೋಜರಿ ಚರ್ಚಿನಲ್ಲಿ ಶಿಕ್ಷಕರ ಜೊತೆ ಬಲಿ ಪೂಜೆಯ ಬಳಿಕ ಚರ್ಚಿನ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು 40ಕ್ಕೂ ಅಧಿಕ ಚರ್ಚಿನ ಶಿಕ್ಷಕ ಶಿಕ್ಷಕಿಯರು ಇದರಲ್ಲಿ ಪಾಲ್ಗೊಂಡಿದ್ದು ಎಲ್ಲರನ್ನೂ ಧರ್ಮಗುರುಗಳು ಗುಲಾಬಿಯನ್ನು ನೀಡಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಹಾರೈಸಿದರು. ಧರ್ಮಗುರು ಫಾ. ಡಾ. ರೋಕ್ ಡಿಸೋಜ ಉಪಸ್ಥಿತರಿದ್ದು ಸಂದೇಶ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಧರ್ಮಗುರುಗಳಾದ ಫಾ| ರೋಲ್ವಿನ್ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಧರ್ಮಗುರುಗಳಾದ ರೋಲ್ವಿನ್ ಫೆರ್ನಾಂಡಿಸ್ ಅವರೆಲ್ಲರಿಗೂ ಗೌರವಾರ್ಥವಾಗಿ ಗುಲಾಬಿ ಹೂವುಗಳನ್ನು ನೀಡಿ ಅಭಿನಂದಿಸಿ ತಮ್ಮ ಸಂದೇಶದಲ್ಲಿ ಒಟ್ಟಾರೆ ಶಿಕ್ಷಕರ ಸೇವೆಯನ್ನು ಶ್ಲಾಘಿಸಿದರು. ನಿವ್ರತ್ತಿ ಶಿಕ್ಷಕಿ ಶ್ರೀಮತಿ ಜೆಸಿಂತ ರೋಡ್ರಿಗಸ್ ಇವರನ್ನು ಸನ್ಮಾನಿಸಲಾಯಿತು ಶ್ರೀಮತಿ ಜ್ಯೋತಿ ಲೂವಿಸ್ ಕಾರ್ಯ ನಿರ್ವಹಣೆ ಮಾಡಿ ಶ್ರೀಮತಿ ಹಿಲ್ಡಾ ಕರ್ನೆಲಿಯೋ ಎಲ್ಲರನ್ನು ಸ್ವಾಗತಿಸಿ ಶ್ರೀಮತಿ ರೋಜಿ ಕ್ವಾಡ್ರಾಸ್ ಧನ್ಯವಾದ ಸಮರ್ಪಣೆ ಮಾಡಿದರು.

IMA ಕುಂದಾಪುರ ದ ಆಶ್ರಯದಲ್ಲಿ KMC ಸಹಯೋಗದಲ್ಲಿ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಭಾರತೀಯ ವೈದ್ಯಕೀಯ ಸಂಘ ( IMA) ಕುಂದಾಪುರ ದ ಆಶ್ರಯದಲ್ಲಿ KMC ಮಣಿಪಾಲ್ ಅವರ ಸಹಯೋಗದಲ್ಲಿ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವು ದಿನಾಂಕ 3.9.22 ರಂದು ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ರೋಟರಿ ಭವನದಲ್ಲಿ ನೆರವೇರಿತು.

 ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ KMC ಯ neurosurgery ವಿಭಾಗ ದ ಮುಖ್ಯಸ್ಥ Dr ಗಿರೀಶ್ ಮೆನನ್ ರು ” ಪಕ್ಷವಾತ ದಲ್ಲಿ ಶಸ್ತ್ರ ಚಿಕಿತ್ಸೆಯ ಪಾತ್ರ ” ದ ಬಗ್ಗೆ ಹಾಗೂ ಎಲುಬು ಕೀಲು ವಿಭಾಗ ದ Dr ಕೃಷ್ಣಪ್ರಸಾದ ರು ” ಹಿಮ್ಮಡಿ ನೋವಿನ ಉಪಶಮನ” ದ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು . ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ದ ಅಧ್ಯಕ್ಷ ಎಲುಬು ಕೀಲು ಶಸ್ತ್ರ ಚಿಕಿತ್ಸಾ ತಜ್ನ Dr ಸಂದೀಪ ನಾವಡ ಪಡುಕೋಣೆ ಅಧ್ಯಕ್ಷತೆ ವಹಿಸಿದ್ದರು .ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು ಕಾರ್ಯದರ್ಶಿ ಮಾನಸಿಕ ತಜ್ಞ Dr ರವೀಂದ್ರ ಮುನೊಳಿ ವಂದಿಸಿದರು

ಶ್ರೀನಿವಾಸಪುರ: ಹೈನುಗಾರಿಕೆ ಅಭಿವೃದ್ಧಿಯಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು:ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಹೈನುಗಾರಿಕೆ ಅಭಿವೃದ್ಧಿಯಲ್ಲಿ ಗ್ರಾಮೀಣ ಮಹಿಳೆಯರ ಪಾತ್ರ ಹಿರಿದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಹೆಬ್ಬಟ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತ ಸಮುದಾಯಕ್ಕೆ ಕ್ಷೀರೋತ್ಪಾದನೆ ಜೀವನಾಡಿಯಾಗಿದೆ. ಗ್ರಾಮೀಣ ಪ್ರದೇಶದ ಎಲ್ಲ ಸಮುದಾಯದ ಜನರ ಆರ್ಥಿಕಾಭಿವೃದ್ಧಿ ಹಾಲಿನ ಉತ್ಪಾದನೆ ಮೇಲೆ ನಿಂತಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಈಗ ನೀಡಲಾಗುತ್ತಿರುವ ರೂ.50 ಸಾವಿರ ಬಡ್ಡಿರಹಿತ ಸಾಲದ ಜತೆಗೆ, ಹೆಚ್ಚುವರಿಯಾಗಿ ಬಡ್ಡಿಸಹಿತ ಸಾಲವಾಗಿ ರೂ.50 ಸಾವಿರ ನೀಡಲಾಗುತ್ತಿದೆ. ಕಾಂಗ್ರೆಸ್ ಅಧಿಕಾರಿಕ್ಕೆ ಬಂದರೆ ರೂ.1 ಲಕ್ಷ ಬಡ್ಡಿರಹಿತ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಸಿದ್ದರಾಮಯ್ಯ ಮುಖ್ಯ ಮಂತ್ರಿಯಾಗಿದ್ದಾಗ ಬಡವರಿಗೆ ಅಕ್ಕಿ ನೀಡಿದರು. ಅದನ್ನು ಜನರು ಮರೆಯುವಂತಿಲ್ಲ ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ 168 ಹಾಲು ಉತ್ಪಾದಕರ ಸಂಘಗಳಿವೆ. ಆ ಪೈಕಿ 11 ಮಹಿಳಾ ಸಹಕಾರ ಸಂಘಗಳಿವೆ. ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ಅಭಿಪ್ರಾಯಪಟ್ಟರು.
ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಉಪ ಕಚೇರಿ ಉಪ ವ್ಯವಸ್ಥಾಪಕ ಮುನಿರಾಜು, ಸ್ಥಳೀಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ರತ್ನಮ್ಮ, ಗ್ರಾಮ ಪಂಚಾಯಿತಿ ಸದಸ್ಯ ಅನಂತಕುಮಾರ್, ಮುಖಂಡರಾದ ಸಂಜಯ್‍ರೆಡ್ಡಿ, ಗೋಪಾಲರೆಡ್ಡಿ, ಕೆ.ಕೆ.ಮಂಜುನಾಥರೆಡ್ಡಿ, ಎಚ್.ಕೆ.ಸುಬ್ರಮಣಿರಾವ್, ಎಚ್.ಜಿ.ವಿಜಯಕುಮಾರ್, ವೆಂಕಟರೆಡ್ಡಿ, ನಾರಾಯಣರೆಡ್ಡಿ, ವಿನಾಯಕ ಕುಮಾರ್ ಇದ್ದರು.

ಕೆಜಿಎಫ್ ರಸ್ತೆ ಅಭಿವೃದ್ದಿಗೆ ಅಡ್ಡಿಯಾದ ಮರ,ವಿದ್ಯುತ್ ಕಂಬಗಳ ತೆರವಿಗೆ ಸೂಚನೆ:ಬೆಸ್ಕಾಂ,ಅರಣ್ಯ,ರಾಜ್ಯ ಹೆದ್ದಾರಿ ಯೋಜನೆ ಅಧಿಕಾರಿಗಳೊಂದಿಗೆ ಶಾಸಕಿ ರೂಪಕಲಾ ಚರ್ಚೆ

ಕೋಲಾರ:- ಕೆಜಿಎಫ್ ನಗರದ ಸಮಗ್ರ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತಿರುವ ಶಾಸಕಿ ರೂಪಕಲಾ ರಸ್ತೆ ಕಾಮಗಾರಿಗೆ ಅಡ್ಡಿಯಾಗಿರುವ ವಿದ್ಯುತ್ ಕಂಬಗಳ ಸ್ಥಳಾಂತರ, ಮರಗಳ ತೆರವು ಕಾರ್ಯಾಚರಣೆ ಕುರಿತು ಶನಿವಾರ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಅರಣ್ಯ,ಬೆಸ್ಕಾಂ, ರಾಜ್ಯ ಹೆದ್ದಾರಿ ಯೋಜನೆಗಳ ಅಧಿಕಾರಿಗಳ ಸಭೆ ನಡೆಸಿ ಶೀಘ್ರ ಕ್ರಮಕ್ಕೆ ತಾಕೀತು ಮಾಡಿದರು.
ಮಿನಿ ವಿಧಾನಸೌಧ ಸಿದ್ದಗೊಂಡಿದ್ದು, ಸೆಪ್ಟೆಂಬರ್ 2ನೇ ವಾರ ಉದ್ಘಾಟನೆಗೆ ರಾಜ್ಯದ ಕಂದಾಯ ಸಚಿವರು ದಿನಾಂಕ ನೀಡುವುದಾಗಿ ತಿಳಿಸಿದ್ದು ಆ ವೇಳೆಗೆ ಕೆಜಿಎಫ್ ನಗರದಲ್ಲಿ ಇದೀಗ ಕಾಮಗಾರಿ ನಡೆಯುತ್ತಿರುವ ಎಲ್ಲಾ ರಸ್ತೆಗಳು ಪೂರ್ಣ ಪ್ರಮಾಣದಲ್ಲಿ ಸಿದ್ದವಾಗುವಂತೆ ಕ್ರಮವಹಿಸಲು ಸೂಚಿಸಿದರು.
ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಸ್ಥಳಾಂತರ ಮಾಡುವ ಸಂದರ್ಭದಲ್ಲಿ ಬೆಸ್ಕಾಂ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಗತ್ಯವಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸ ಮಾಡಬೇಕೇ ಹೊರತು ಅನಗತ್ಯವಾಗಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವುದು ಬೇಡ ಎಂದು ಬೆಸ್ಕಾಂ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರದಿಂದಲೇ ರಸ್ತೆ ಕಾಮಗಾರಿ ಪ್ರಾರಂಭಿಸಬೇಕು. ಮಿನಿವಿಧಾನಸೌಧ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಚಿವರು ಆಗಮಿಸುವುದರಿಂದ ರಸ್ತೆ ಕಾಮಗಾರಿ ಪೂರ್ಣಗೊಂಡಿರಬೇಕು. ಇಲ್ಲದಿದ್ದರೆ ಸಮಸ್ಯೆಯಾಗುತ್ತದೆ ಸಚಿವರು ಎಲ್‍ಐಸಿ ಕಚೇರಿ ಮಾರ್ಗದ ಮೂಲಕ ಮಿನಿವಿಧಾನಸೌಧಕ್ಕೆ ಹೋಗುವುದರಿಂದ ಅಷ್ಟರಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಂಡಿರಬೇಕು. ಅಷ್ಟರಲ್ಲಿ ಬೆಸ್ಕಾಂ ಅಧಿಕಾರಿಗಳು ರಸ್ತೆ ಕಾಮಗಾರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯವಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡುವ ಕೆಲಸ ಮಾಡಬೇಕು, ಕಾಮಗಾರಿ ಅರ್ಧಂಬರ್ಧ ಮಾಡುವುದು ಬೇಡ, ನಿಗದಿತ ವೇಳೆಗೆ ಕಾಮಗಾರಿ ಪೂರ್ಣಗೊಂಡಿರಬೇಕು ಎಂದು ಶಾಸಕಿ ರೂಪಾಶಶಿಧರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೆಜಿಎಫ್ ಕೆಲವೊಂದು ಜಾಗಗಳಲ್ಲಿ ದೇವಮೂಲೆಯಲ್ಲಿ ವಿದ್ಯುತ್ ಕಂಬ ಹಾಗೂ ಟ್ರಾನ್ಸ್‍ಫಾರ್ಮರ್‍ಗಳನ್ನು ಬೆಸ್ಕಾಂ ಅಧಿಕಾರಿಗಳು ಅಳವಡಿಸಿದ್ದೀರಿ ಮೊದಲು ಅದನ್ನು ಬದಲಾಯಿಸಬೇಕೆಂದು ಬೆಸ್ಕಾಂ ಅಧಿಕಾರಿಗಳು ಶಾಸಕರು ಸೂಚಿಸಿ, ಮರಗಳನ್ನು ತೆರವು ಹಾಗೂ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯಕ್ಕೆ ಅಗತ್ಯವಾದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಈ ಕಾರ್ಯ ಭಾನುವಾರ ಮಾಡಿ ಎಂದು ಸೂಚಿಸಿದರು.
ನನ್ನ ಅವಧಿಯಲ್ಲಿ ಕೆಜಿಎಫ್‍ನ ಮಿನಿವಿಧಾನ ಸೌಧದ ಸುತ್ತಲೂ ಸಿಸಿ ಕ್ಯಾಮರಾ ಹಾಗೂ ಸೋಲಾರ್ ದೀಪಗಳನ್ನು ಅಳವಡಿಸುವುದರೊಂದಿಗೆ ಮಿನಿವಿಧಾನಸೌಧ ಹಿಂಬದಿಯ ಜಾಗದಲ್ಲಿ ಪಾರ್ಕ್ ನಿರ್ಮಾಣ, ಸಾರ್ವಜನಿಕರ ವಾಹನ ನಿಲುಗಡೆಗೆ ಪ್ರತ್ಯೇಕ ವಾಹನ ನಿಲ್ದಾಣ, ಹಾಗೂ ಸುತ್ತಲೂ ಸಾರ್ವಜನಿಕರಿಗೆ ಅನುಕೂಲವಾಗುವ ಗಿಡಗಳನ್ನು ನೆಡುವ ಮೂಲಕ ಸುಂದರ ಪರಿಸರ ನಿರ್ಮಾಣಕ್ಕೆ ಕ್ರಮವಹಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ಟೇಷನ್ ರಸ್ತೆಯಲ್ಲಿ 18 ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಬೇಕು ಹಾಗೂ ಎಲ್‍ಐಸಿ ರಸ್ತೆಯಲ್ಲಿ ಎಷ್ಟು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕೆಂದು ಇನ್ನೂ ಪರಿಶೀಲನೆ ಮಾಡಿಲ್ಲ, ಇವತ್ತೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ನೀಡುತ್ತೇನೆಂದು ಬೆಸ್ಕಾಂ ಅಧಿಕಾರಿ ಎಇಇ ಹೇಮಲತಾ ಶಾಸಕರ ಗಮನಕ್ಕೆ ತಂದರು.
ಒಂದು ಬಾರಿ ರಸ್ತೆ ಕಾಮಗಾರಿ ಮಾಡಿದ ಮೇಲೆ 25 ವರ್ಷ ಯಾವುದೇ ಸಮಸ್ಯೆ ಎದುರಾಗಬಾರದು, ಅದಕ್ಕೆ ತಕ್ಕಂತೆ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ ಎಂದರು.
ರಸ್ತೆ ಅಭಿವೃದ್ದಿಗೆ
15 ಕೋಟಿ ರೂ
ತಮ್ಮ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ಮೂಲಕ ರಸ್ತೆಗಳ ಅಭಿವೃದ್ದಿಗೆ 15 ಕೋಟಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ 6 ಕೋಟಿ ರೂ, ಮತ್ತು ಎಸ್‍ಹೆಚ್‍ಡಿಪಿ ಯೋಜನೆಯಡಿ ನಗರಭಾಗದ ರಸ್ತೆಗಳ ಅಭಿವೃದ್ದಿಗೆ 10 ಕೋಟಿ ಬಿಡುಗಡೆಯಾಗಿದ್ದು ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಕೆಜಿಎಫ್ ನಗರದ ರಾಬರ್ಟ್‍ಸನ್ ಪೇಟೆಯಿಂದ ರಾಮಕುಪ್ಪಂ ವರೆಗಿನ ರಸ್ತೆ ಅಭಿವೃದ್ದಿಗೆ 4 ಕೋಟಿ ರೂ ಮೀಸಲಿಡಲಾಗಿದೆ, ಬೇತಮಂಗಲ ದಿಂದ ವೆಂಕಟಗಿರಿಕೋಟೆ ರಾಷ್ಟ್ರೀಯ ಹೆದ್ದಾರಿ 95ಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿಗೆ 1 ಕೋಟಿ ರೂ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಇದಲ್ಲದೇ ಕೆಜಿಎಫ್‍ನಲ್ಲಿ ದ್ವಿಪಥ ರಸ್ತೆಗೆ 4 ಕೋಟಿರೂ ಬಿಡುಗಡೆ ಮಾಡಿಸಲಾಗಿದೆ ಎಂದ ಅವರು, ಬೇತಮಂಗಲ-ಕ್ಯಾಸಂಬಳ್ಳಿ ರಸ್ತೆಗೆ 2.30 ಕೋಟಿ ರೂ ಹಾಗೂ ಒಡೆನಿಯಲ್ ರಸ್ತೆ ಸಂಪರ್ಕಕ್ಕೆ 70 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಯಲ್ಲಿ ಲೋಪವಾಗದಂತೆ ಪೂರ್ಣಗೊಳಿಸಿ ಎಂದರು.
ಸಭೆಯಲ್ಲಿ ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಪಿಡಬ್ಲ್ಯೂಡಿ ವಿದ್ಯುತ್ ವಿಭಾಗದ ಎಇಇ ಪರಮೇಶ್ವರ್, ಕೆಜಿಎಫ್ ಬೆಸ್ಕಾಂ ಎಇಇ ಹೇಮಲತಾ, ಗುತ್ತಿಗೆದಾರ ಚನ್ನಾರೆಡ್ಡಿ, ಆರ್‍ಎಫ್‍ಒ ಮಂಜುನಾಥ್ ಇದ್ದರು.