ಓಕ್ ವುಡ್ ಇಂಡಿಯನ್ ಶಾಲೆಯಲ್ಲಿ ನೂತನವಾಗಿ ಇಂಟರ್ಯಾಕ್ಟ ಕ್ಲಬ್ ಉದ್ಘಾಟನೆ

ರೋಟರಿ ಕ್ಲಬ್ ಕುಂದಾಪುರ ದಕ್ಷಿಣವು ಮಾತೃ ಸಂಸ್ಥೆಯಾಗಿ ಕುಂದಾಪುರದ ಓಕ್ ವುಡ್ ಇಂಡಿಯನ್ ಶಾಲೆಯಲ್ಲಿ ಹೊಸದಾಗಿ ಇಂಟರ್ಯಾಕ್ಟ ಕ್ಲಬ್ ಪ್ರಾರಂಭಿಸಿದರು. ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಮಾಜಿ ರೋಟರಿ ಗವರ್ನರ್ ಅಭಿನಂದನ್ ಶೆಟ್ಟಿ, ಇಂಟರ್ಯಾಕ್ಟ ಸಂಯೋಜಕಿ ಜುಡಿತ್ ಮೆಂಡೋನ್ಸಾ, ರೋ. ಸುರೇಖಾ ಪುರಾಣಿಕ, ಶಾಲಾ ಪ್ರಿನ್ಸಿಪಾಲ್ ನೀತಾ ಶೆಟ್ಟಿ ಹಾಗೂ ಸಹನಾ ಶೆಟ್ಟಿ ಪಾಲ್ಗೊಂಡಿದ್ದರು.
ರೋ. ಅಭಿನಂದನ್ ಶೆಟ್ಟಿ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಇಂಟರ್ಯಾಕ್ಟ ಕ್ಲಬ್ ನ ಧ್ಯೇಯ ಉದ್ದೇಶಗಳ ಬಗ್ಗೆ ತಿಳಿಸಿದರು.

ಹುಟ್ಟು ಹಬ್ಬ ವಿಶೇಷ ಮಕ್ಕಳ ವಸತಿ ಶಾಲೆ ಮಾನಸ ಜ್ಯೋತಿಯಲ್ಲಿ

ರೋಟರಿ ಕುಂದಾಪುರ ದಕ್ಷಿಣದ ಸದಸ್ಯರಾದ ರೋ. ಮನೋಹರ ಪಿ ತಮ್ಮ ಹುಟ್ಟು ಹಬ್ಬವನ್ನು ವಿಶೇಷ ಮಕ್ಕಳ ವಸತಿ ಶಾಲೆ ಮಾನಸ ಜ್ಯೋತಿಯಲ್ಲಿ ಹಣ್ಣು ಹಂಪಲು ಹಂಚಿ, ದೇಣಿಗೆಯನ್ನು ನೀಡಿ, ಮಕ್ಕಳೊಂದಿಗೆ ಆಚರಿಸಿಕೊಂಡರು.
ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಮಾಜಿ ಅಧ್ಯಕ್ಷರಾದ ವಾಸುದೇವ ಕಾರಂತ, ಕೆ.ಪಿ.ಭಟ್ , ಕಾರ್ಯದರ್ಶಿ ಸಚಿನ್ ನಕ್ಕತ್ತಾಯ,ರೋ. ಸುರೇಖಾ ಪುರಾಣಿಕ ,ಶ್ರೀಮತಿ ವಿಜಯಲಕ್ಷ್ಮಿ ಮನೋಹರ ಹಾಗೂ ಮಾನಸ ಜ್ಯೋತಿಯ ಶೋಭಾ ಮಧ್ಯಸ್ಥ ಪಾಲ್ಗೊಂಡಿದ್ದರು.

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ಸೇವನೆ ನಿಯಂತ್ರಣಾ ಮಾಹಿತಿ ಕಾರ್ಯಕ್ರಮ

“ಹದಿಹರೆಯವೆನ್ನುವುದು ತಂಬಾಕು ಸೇವಿಸಬೇಕೆನ್ನುವ ಆಮಿಷಗಳಿಗೆ ಒಳಗಾಗುವ ಆರಂಭಿಕ ಹಂತ.  ವೈಯುಕ್ತಿಕ ಆರೋಗ್ಯದ ಮೇಲೆ ತಂಬಾಕು ಸೇವನೆ ಬೀರುವ ಅಪಾಯಕಾರಿ ಪರಿಣಾಮಗಳ ಬಗ್ಗೆ ಯುವಜನರು ಗಂಭೀರವಾಗಿ ಯೋಚಿಸಿ, ಆರೋಗ್ಯ ಇಲಾಖೆ ಹೊರಡಿಸುವ ಮುನ್ನೆಚ್ಚರಿಕಾ ಮಾಹಿತಿಗಳು ಸಂದೇಶಗಳನ್ನು ಚೆನ್ನಾಗಿ ಮನಗಂಡು ತಂಬಾಕು- ಮುಕ್ತ ಸಮಾಜ ಸೃಷ್ಟಿಯಾಗಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಸೆಲ್ ನ ಆರೋಗ್ಯಾಧಿಕಾರಿಯಾದ ಶ್ರೀಮತಿ ಮಂಜುಳಾ ಶೆಟ್ಟಿ ಯವರು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರಿ ನವೀನ್ ಕುಮಾರ ಶೆಟ್ಟಿಯವರು  ವಿದ್ಯಾರ್ಥಿಗಳು ಉತ್ತಮ ನಾಗರೀಕರಾಗುವುದೆಂದರೆ ಮುಖ್ಯವಾಗಿ ಆರೋಗ್ಯವಂತ ಸಮಾಜ ಕಟ್ಟುವ ಜವಾಬ್ದಾರಿಯನ್ನು ಅರ್ಥ ಮಾಡಿಕೊಳ್ಳುವುದು ಎಂದು ತಿಳಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಸುಮತಿ ಶೆಣೈ ಧನ್ಯವಾದ ಸಲ್ಲಿಸಿದರು. 

ಕುಂದಾಪುರ:ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ವೃತ್ತ ಮಟ್ಟದ ಕ್ರೀಡಾಕೂಟ


ಕುಂದಾಪುರ: ಕ್ರೀಡೆ ಶಿಸ್ತಿನ ಜೊತೆಗೆ ಧೈರ್ಯ, ಸಾಹಸವನ್ನು ಕಲಿಸುತ್ತದೆ.ಕ್ರೀಡೆಯಲ್ಲಿ ವೇಗ,ಎತ್ತರ, ಶಕ್ತಿಯನ್ನು ಒಲಿಷ್ಠಗೊಳಿಸುವ ಹಾಗೇ ಅಭ್ಯಾಸ ಮಾಡಿ ಪದಕ ಪಡೆಯುವುದು ಎಲ್ಲರ ಗುರಿಯಾಗಬೇಕು ಎಂದು ಕುಂದಾಪುರ ಸೈಂಟ್ ಮೇರಿಸ್ ಸಮೂಹ ಸಂಸ್ಥೆಯ ಸಂಚಾಲಕ,ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅತೀ ವಂ.ಫಾ.ಸ್ಟ್ಯಾನಿ ತಾವ್ರೊ ಹೇಳಿದರು.
ಅವರು ಬುಧವಾರ ನಗರದ ಗಾಂಧಿ ಮೈದಾನದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರದ ಸಹಯೋಗದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಧ್ವಜಾರೋಹಣಗೈದು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜ್‌ ಅವರು ಕ್ರೀಡಾಜ್ಯೋತಿ ಬೆಳಗಿಸಿ ದೈಹಿಕ ಸುಧ್ರಡತೆಗಾಗಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ, ದೈಹಿಕ ಸುಧ್ರಡತೆಗಾಗಿ ಕ್ರೀಡೆಗಳು ಜೀವನದಲ್ಲಿ ಅಗತ್ಯವಾಗಿದೆ” ಎಂದು ಹೇಳಿದರು.
ಕುಂದಾಪುರ ಪುರಸಭೆಯ ಸದಸ್ಯ ಪ್ರಭಾಕರ ಕುಂದಾಪುರ, ಉದ್ಯಮಿ ಸತೀಶ್ ಕಾವೇರಿ,ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ, ಕುಂದಾಪುರ ವಲಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ ಬಲೂನ್ ಮತ್ತು ಪಾರಿವಾಳವನ್ನು ಹಾರಿ ಬಿಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಬಿಆರ್ ಸಿ ಸಂತೋಷ ಶೆಟ್ಟಿ,ಸಿಆರ್ ಪಿ ಶಂಕರ್ ಶೆಟ್ಟಿ, ಸೈಂಟ್ ಮೇರಿಸ್ ಪ್ರೌಢಶಾಲೆಯ ಹಿರಿಯ ಶಿಕ್ಷಕ ಭಾಸ್ಕರ್ ಗಾಣಿಗ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಷ್ಮಾ ಫೆರ್ನಾಂಡೀಸ್,ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ನೀತಾ ಡಿ ಸೋಜಾ, ಹೋಲಿ ರೋಜರಿ ಕಿಂಡರ್ ಗಾರ್ಟನ್ ಸ್ಕೂಲ್ ಮುಖ್ಯ ಶಿಕ್ಷಕಿ ಶೈಲಾ ಲೂಯಿಸ್ ಮೊದಲಾದವರು ಉಪಸ್ಥಿತರಿದ್ದರು.
ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್ ಸ್ವಾಗತಿಸಿದರು.ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ,ಶಾಂತಿ ಬರೆಟ್ಟೋ ವಂದಿಸಿದರು.

OBITUARY- Richard Martin D’Almeida (63), Gangolli

Richard Martin D’Almeida (63), Gangolli

 

son of the late Martin D’Almeida and the late Cosses,

husband of Prafulla D’Almeida,

father of Minal and Kevin,

brother of Joyal, Noel, Sebastin and Jeeta,

son-in-law of the late Ignatius Lewis and Sophia Lewis,

 brother-in-law of Anita, Ajith and Arun Lewis,

 passed away on Wednesday September 21, 2022.

Funeral cortege leaves residence  “Cosses”,  Moovathmoodi, for Immaculate Conception of BVM Church, Gangolli, on Thursday September 22, at 3.30 pm. Mass at 4.30 pm.

Contact:  +91 97412 49785 (Kevin),  +91 97429 15421 (Arun)

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಮಣ್ಣು ರಕ್ಷಿಸಿ” ಜಾಗೃತಿ ಕಾರ್ಯಕ್ರಮ

ಕುಂದಾಪುರ: ಸೆಪ್ಟೆಂಬರ್ 20ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಮಣ್ಣು ರಕ್ಷಿಸಿ” ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಲ್ಕತ್ತಾ ದ ಸಾಹಿಲ್ ಝಾ ಮಾತನಾಡಿ, ಮಣ್ಣು
ನಮ್ಮ ಪರಿಸರದ ಮತ್ತು ಬದುಕಿಗೆ ಅವಿಭಾಜ್ಯ ಅಂಗವಾಗಿದೆ. ಸುಸ್ಥಿರ ಕೃಷಿ ಮತ್ತು ಪರಿಸರಕ್ಕಾಗಿ ಮಣ್ಣನ್ನು ಉಳಿಸಬೇಕಾಗಿದೆ. ಮಣ್ಣಿನ ರಕ್ಷಣೆ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಸುಮಾರು ಸಾವಿರಾರು ಕಿಲೋಮೀಟರ್ ದೂರ ಸೈಕಲ್ ನಲ್ಲಿ ದೇಶಾದ್ಯಂತ ಸಂಚರಿಸುತ್ತಿದ್ದೇನೆ. “ಮಣ್ಣು ಕುರಿತು ಮಾತಾಡಿ, ಮಣ್ಣು ಕುರಿತು ಹಾಡಿ ಮಣ್ಣನ್ನೇ ಉಸಿರಾಗಿಸಿ, ಮಣ್ಣಿನಿಂದಲೇ ಬಾಳಿ” ನಾವೆಲ್ಲ ಜೊತೆಯಾಗಿ ಸೇರಿ ಮಣ್ಣಿನ ಪ್ರಾಮುಖ್ಯತೆಯನ್ನು ತಿಳಿಸಿ ಮಣ್ಣನ್ನು ರಕ್ಷಿಸೋಣ. ನೀವು ಸಹ ವಿವಿಧ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮೂಲಕ ಮಣ್ಣಿನ ರಕ್ಷಣೆಯಲ್ಲಿ ಭಾಗಿಯಾಗಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕುಂದಾಪುರ ಘಟಕದ ಜಯಕರ ಶೆಟ್ಟಿ ಕಾಲೇಜಿನ ಮಧ್ಯಾಹ್ನದ ಊಟಕ್ಕೆ 25,000 ರೂಪಾಯಿಗಳನ್ನು ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ವೆಂಕಟೇಶ್ ಬುದ್ಯಾ, ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.
ಉಪನ್ಯಾಸಕಿ
ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ವಿದ್ಯಾಧರ ವಂದಿಸಿದರು.

ಗರ್ಭಿಣಿ ಮತ್ತು ಬಾಣಾಂತಿಯರಿಗೆ ಅಪೌಷ್ಠಿಕತೆ ನಿವಾರಿಸಲು ಅಂಗನವಾಡಿ ಕಾರ್ಯಕರ್ತರು ಶ್ರಮಿಸುತ್ತಿರುವುದು ಶ್ಲಾಘನೀಯ:ವಿಜಯಮ್ಮ

ಶ್ರೀನಿವಾಸಪುರ ; ಗರ್ಭಿಣಿ ಮತ್ತು ಬಾಣಾಂತಿಯರಿಗೆ ಅಪೌಷ್ಠಿಕತೆ ನಿವಾರಿಸಲು ಅಂಗನವಾಡಿ ಕಾರ್ಯಕರ್ತರು ಶ್ರಮಿಸುತ್ತಿರುವುದು ಶ್ಲಾಘನೀಯ ಅದೇ ರೀತಿ ಮಕ್ಕಳ ಬೆಳೆವಣಿಗೆಗೂ ತಮ್ಮ ಸೇವೆ ಪ್ರಾಮಾಣಿಕವಾಗಿ ಮಾಡಿದರೆ ಸಾರ್ಥಕತೆ ಹೆಚ್ಚುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ವಿಜಯಮ್ಮ ಹೇಳಿದರು.
ಶ್ರೀನಿವಾಸಪುರ ವೃತ್ತ ಅಂಗನವಾಡಿ ಕಾರ್ಯಕರ್ತರು ಪಟ್ಟಣದ ರಂಗಾರಸ್ತೆ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆ ಶ್ರೀನಿವಾಸಪುರ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪೋಷಣ್ ಅಭಿಯಾನ ಅನ್ನುವುದು ಕೇವಲ ಒಂದು ತಿಂಗಳಿಗೆ ಸೀಮಿತವಾಗಬಾರದು ನಿರಂತರವಾಗಿ ಗರ್ಭಿಣಿ ಮತ್ತು ಬಾಣಾಂತಿಯರ ಆರೋಗ್ಯ ರಕ್ಷಣೆಗೆ ಅಂಗನವಾಡಿಗಳನ್ನು ಸ್ಥಾಪಿಸಿರುವ ಹಿನ್ನಲೆಯಲ್ಲಿ ಅವರ ರಕ್ಷಣೆಯೇ ಕಾರ್ಯಕರ್ತರ ಮುಖ್ಯ ಧ್ಯೇಯವಾಗಬೇಕು. ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಿಸಲು ತಾವು ಮಾಡುತ್ತಿರುವ ಕೆಲಸವನ್ನು ಇನ್ನಷ್ಟು ಗಟ್ಟಿಗೊಳಿಸಿದಾಗ ಮಕ್ಕಳ ಸಾವಿನ ಸಂಖ್ಯೆ ಕಡಿಮೆಯಾಗುತ್ತದೆ ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವೂ ಅಂಗನವಾಡಿ ಕಾರ್ಯಕರ್ತರು ಮಾಡಬೇಕಾಗಿದೆ ಅದೇ ರೀತಿ ತಮ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ತಾಯಿ ಕಾರ್ಡ್‍ನ್ನು ಗಮನಿಸಿ ಕಾಲ-ಕಾಲಕ್ಕೆ ಲಸಿಕೆಗಳನ್ನು ಹಾಕಿಸಿಕೊಳ್ಳಲು ಸಲಹೆ ನೀಡಬೇಕು ಆರೋಗ್ಯ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜೊತೆಗೂಡಿ ಕೆಲಸ ಮಾಡಿದಾಗ ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡಬಹುದು, ಈಗಾಗಲೆ ಹಲವಾರು ಭಯಾನಕ ರೋಗಗಳನ್ನು ತಡೆಗಟ್ಟುವಲ್ಲಿ ಇಲಾಖೆಗಳು ಯಶಸ್ವಿಯಾಗಿದೆ ಎಂದು ತಿಳಿಸಿದರು.
ರಂಗಾರಸ್ತೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಆದಿಲಕ್ಷ್ಮಮ್ಮ ಮಾತನಾಡಿ ಗರ್ಭಿಣಿಯರು ಉತ್ತಮ ಪೋಷಕಾಂಶವುಳ್ಳ ಆಹಾರ ಸೇವನೆ ಮಾಡುವುದರಿಂದ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಹುದು ಆದ್ದರಿಂದ ಪ್ರತಿ ತರಕಾರಿಯಲ್ಲೂ ಪೋಷಕಾಂಶಗಳು ಇರುವುದರಿಂದ ಎಲ್ಲ ಹಸಿರು ತರಕಾರಿಗಳನ್ನು ಸೇವಿಸುವುದು ಉತ್ತಮ ಎಂದು ತಿಳಿಸಿದರು.
ಗರ್ಭಿಣಿ ಮಹಿಳೆಯರಿಗೆ ಪೋಷಣ್ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಸೀಮಂತ ಕಾರ್ಯಕ್ರಮ ನಡೆಸಲಾಯಿತು ಮತ್ತು ಮಕ್ಕಳಿಗೆ ಅನ್ನಪ್ರಾಸನವನ್ನು ಆರೋಗ್ಯಾಧಿಕಾರಿ ನಡೆಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನವೀನ್ ಕುಮಾರ್, ಹಿರಿಯ ಮೇಲ್ವಿಚಾರಕಿ ಶರಣಮ್ಮ, ಆರೋಗ್ಯ ನಿರಿಕ್ಷಣಾಧಿಕಾರಿ ನಾಗಮಣಿ, ಬಾಲವಿಕಾಸ ಸಲಹಾ ಸಮಿತಿ ಸದಸ್ಯರಾದ ಅನ್ನಪೂರ್ಣಮ್ಮ, ರಾಜೇಶ್ವರಮ್ಮ, ಶ್ರೀನಿವಾಸಪುರ ವೃತ್ತ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

ಪ್ರಧಾನಿ ಮೋದಿ ಅವರ ಅಶಯದಂತೆ ಸ್ವಚ್ಛ ಪರಿಸರ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು:ಡಾ. ಕೆ.ಎನ್.ವೇಣುಗೋಪಾಲ್

ಶ್ರೀನಿವಾಸಪುರ: ಪ್ರಧಾನಿ ಮೋದಿ ಅವರ ಅಶಯದಂತೆ ಸ್ವಚ್ಛ ಪರಿಸರ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು.
ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ವಚ್ಛ ಭಾರತ ನಿರ್ಮಾಣಕ್ಕೆ ಹೆಚ್ಚಿನ ಮಹತ್ವ ನೀಡಿದೆ ಎಂದು ಹೇಳಿದರು.
ಅಮೃತ್ ಸರೋವರ್ ಯೋಜನೆ ಅಡಿಯಲ್ಲಿ ಕೆರೆಗಳ ಅಭಿವೃದ್ಧಿ ಮಾಡಲಾಗುವುದು. ಕೆರೆ ತುಂಬಿದರೆ ಅಂತರ್ಜಲ ವೃದ್ಧಿಸಲು ಸಾಧ್ಯವಾಗುತ್ತದೆ. ಗ್ರಾಮೀಣ ಪರಿಸರ ಚೇತರಿಸಿಕೊಳ್ಳುತ್ತದೆ. ಮಳೆ ನೀರು ಸಂಗ್ರಹ ಹಾಗೂ ನೀರು ಶೇಖರಣಾ ಕಾರ್ಯಾಗಾರಗಳ ಮೂಲಕ ಜಲ ಸಂಪತ್ತಿನ ರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಸೆ.25 ರಂದು ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಬಿಜೆಪಿ ರಾಜಕೀಯ ಚುನಾವಣೆಗೆ ಸೀಮಿತ, ಚುನಾವಣೆ ಮುಗಿದ ಮೇಲೆ ದೇಶದ ಅಭಿವೃದ್ಧಿ ಕಡೆ ಗಮನ ನೀಡಲಾಗುವುದು ಎಂದು ಹೇಳಿದರು.
ಮುಖಂಡರಾದ ರೋಣೂರು ಚಂದ್ರಶೇಖರ್, ಡಾ. ನಾಗರಾಜ್, ರೆಡ್ಡಪ್ಪ, ವಿ.ನಿಶಾಂತ್ ಕುಮಾರ್, ಷಫಿ, ನಾರಾಯಣಸ್ವಾಮಿ, ರಾಜು, ನಾರಾಯಣಪ್ಪ, ರಾಮಾಂಜಿ, ರಮೇಶ್, ಎನ್.ಆರ್.ಚಂದ್ರಶೇಖರ್ ಇದ್ದರು.

ಜಾನುವಾರುಗಳಿಗೆ ಬಾಧಿಸುತ್ತಿರುವ ಚರ್ಮ ಗಂಟು ರೋಗ ನಿಯಂತ್ರಣ ಹಾಗೂ ಬಿತ್ತನೆ ಆಲೂಗಡ್ಡೆ ಬೆಲೆ ನಿಗಧಿ ಮಾಡಲು ರೈತಸಂಘ ಆಗ್ರಹ

ಕೋಲಾರ; ಸೆ.20: ಜಿಲ್ಲಾದ್ಯಂತ ಜಾನುವಾರುಗಳಿಗೆ ಬಾಧಿಸುತ್ತಿರುವ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ಹಾಗೂ ಬಿತ್ತನೆ ಆಲೂಗಡ್ಡೆ ಬೆಲೆ ನಿಗಧಿ ಮಾಡಲು ವಿಶೇಷ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ನಿಲ್ಲಬೇಕೆಂದು ಆಗ್ರಹಿಸಿ ರೈತಸಂಘದಿಂದ ಡಿಸಿ ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಸಲ್ಲಿಸಿ ಮಾತನಾಡಿದ ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಹೈನುಗಾರಿಕೆಯೇ ಜೀವಾಳವಾಗಿರುವ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಸ್ವಾಭಿಮಾನ ಬದುಕು ಕಲ್ಪಿಸಿರುವ ಹೈನೋದ್ಯಮಕ್ಕೆ ಮಾರಕವಾಗಿರುವ ರೋಗ ನಿಯಂತ್ರಣ ಮಾಡುವಲ್ಲಿ ಪಶು ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
3 ತಿಂಗಳಿಂದ ಗಡಿ ಭಾಗಗಳಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ನಿಯಂತ್ರಣಕ್ಕೆ ಬಾರದೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿರುವ ಹಸುಗಳು ಸೂಕ್ತ ಚಿಕಿತ್ಸೆ ದೊರೆಯದೆ ಕಣ್ಣ ಮುಂದೆಯೇ ಸಾವನ್ನಪ್ಪುತ್ತಿದ್ದರೂ ಸಿಬ್ಬಂದಿ ನೆಪದಲ್ಲಿ ಗ್ರಾಮೀಣ ಪ್ರದೇಶಗಳತ್ತ ಸುಳಿಯದ ಪಶು ವೈದ್ಯರು ಕಚೇರಿಯಲ್ಲೇ ಕುಳಿತು ಕಾಲಹರಣ ಮಾಡುತ್ತಿದ್ದಾರೆಂದು ಆರೋಪಿಸಿದರು.
ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕರಪತ್ರದ ಮುಖಾಂತರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಿ ರೋಗ ನಿಯಂತ್ರಣಕ್ಕೆ ಅವಶ್ಯಕತೆಯಿರುವ ಔಷಧಿಗಳನ್ನು ವಿತರಣೆ ಮಾಡಬೇಕಾದ ಪಶು ವೈದ್ಯರು ಸಮಯಕ್ಕೆ ಸಿಗದೆ ಚಿಕಿತ್ಸೆಗಾಗಿ ದುಬಾರಿ ವೆಚ್ಚ ನೀಡಿ ಖಾಸಗಿ ವೈದ್ಯರು ಇಲ್ಲವೇ ಚಿಕಿತ್ಸೆಯ ಗಂಧ ಗಾಳಿ ಗೊತ್ತಿಲ್ಲದ ಕೃತಕ ಗರ್ಭಧಾರಣೆ ಮಾಡುವವರೇ ವೈದ್ಯರಾಗಿ ಮಾರ್ಪಟ್ಟು ಹಸುಗಳ ಮಾರಣ ಹೋಮಕ್ಕೆ ಕಾರಣರಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.
ಹೈನೋದ್ಯಮವನ್ನೇ ನಂಬಿರುವ ರೈತ ಬಡ ಕೂಲಿ ಕಾರ್ಮಿಕರು ಇದನ್ನೇ ಹಾಲಿನ ಬಟವಾಡೆಯನ್ನು ನಂಬಿ ಚೀಟಿ, ಸ್ತ್ರೀಶಕ್ತಿ ಸಂಘಗಳ ಸಾಲಗಳನ್ನು ಮಾಡಿ ಈಗ ದಿಕ್ಕು ತೋಚದೆ ಜಿಲ್ಲಾಡಳಿತದ ಸಮಸ್ಯೆ ಬಗೆಹರಿಸುವಂತೆ ಒತ್ತಾಯ ಮಾಡುತ್ತಿದ್ದಾರೆಂದು ಹೇಳಿದರು.
ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಮುಂಗಾರು ಮಳೆ ಆರ್ಭಟ ಹಾಗೂ ನಿಯಂತ್ರಣಕ್ಕೆ ಬರದ ರೋಗಗಳಿಂದ ಟೊಮೇಟೊ, ಕ್ಯಾಪ್ಸಿಕಂ ಬೆಳೆಗಾರರ ಬದುಕು ಮುಂಗಾರು ನೀರಿನಲ್ಲಿ ಕೊಚ್ಚಿ ಹೋಗಿ ಮತ್ತೆ ಖಾಸಗಿ ಸಾಲ ಮಾಡಿ ಆಲೂಗಡ್ಡೆ ಕೃಷಿಯತ್ತ ಮುಖ ಮಾಡುತ್ತಿರುವ ಜಿಲ್ಲೆಯ ರೈತರಿಗೆ ದುಬಾರಿ ಬೆಲೆ ಹಾಗೂ ಗುಣಮಟ್ಟದ ಆಲೂಗಡ್ಡೆ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡುವಲ್ಲಿ ಎಪಿಎಂಸಿ ಹಾಗೂ ತೋಟಗಾರಿಕೆ ಅಧಿಕಾರಿಗಳು ವಿಫಲವಾಗಿ ಖಾಸಗಿ ಮಂಡಿ ಮಾಲೀಕರು ನಿಗಧಿ ಮಾಡುವ ಬೆಲೆಗೆ ತಕ್ಕಂತೆ ಅಧಿಕಾರಿಗಳು ಕುಣಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುಣಮಟ್ಟ, ದುಬಾರಿ ಬೆಲೆ, ಬಿಳಿ ಚೀಟಿ ದಂಧೆಗೆ ಕಡಿವಾಣ ಹಾಕುವಂತೆ ಪ್ರತಿವರ್ಷ ಅಧಿಕಾರಿಗಳಿಗೆ ದೂರು ನೀಡಿದರೆ ಸಮಸ್ಯೆ ಬಗೆಹರಿಸಬೇಕಾದ ಎಪಿಎಂಸಿ, ತೋಟಗಾರಿಕೆ ಅಧಿಕಾರಿಗಳಿಗೆ ಮಾಹಿತಿ ಇಲ್ಲವಂತೆ. ಒತ್ತಡ ಹೇರಿದರೆ ಖಾಸಗಿ ಮಂಡಿ ಮಾಲೀಕರ ಜೊತೆ ಶಾಮೀಲಾಗಿ ದೂರು ನೀಡಿರುವವರ ವಿರುದ್ಧ ಗೂಂಡಾಗಿರಿ ಮಾಡುತ್ತಾರೆಂದು ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ 2200 ರಿಂದ 4000ರೂ ವರೆಗೆ ಬೆಲೆಯಿದ್ದರೆ ಕೋಲಾರದಲ್ಲಿ 3000 ದಿಂದ 5000 ವರೆಗೆ ಮಾರಾಟ ನಡೆಯುತ್ತಿದೆ. ಇದನ್ನು ಪರಿಶೀಲಿಸಿ ಕರಪತ್ರದ ಮೂಲಕ ರೈತರಿಗೆ ಜಾಗೃತಿ ಮೂಡಿಸಬೇಕಾದ ಅಧಿಕಾರಿಗಳು ಮೌನವಾಗಿದ್ದಾರೆ.
ಹಾಗಾಗಿ ಮಾನ್ಯರು ಜಾನುವಾರುಗಳಿಗೆ ಬಾಧಿಸುತ್ತಿರುವ ಚರ್ಮ ಗಂಟು ರೋಗ ನಿಯಂತ್ರಣ ಹಾಗೂ ಬಿತ್ತನೆ ಆಲೂಗಡ್ಡೆಗೆ ಬೆಲೆ ನಿಗಧಿ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿ ಸಂಕಷ್ಟದಲ್ಲಿರುವ ರೈತರು ರಕ್ಷಣೆಗೆ ನಿಲ್ಲಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ವೆಂಕಟರಾಜಾ ರವರು, ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.
ಹೋರಾಟದಲ್ಲಿ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ವಕ್ಕಲೇರಿ ಹನುಮಯ್ಯ, ಕದಿರಿನತ್ತ ಅಪ್ಪೋಜಿರಾವ್, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಕುವ್ವಣ್ಣ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಸಂದೀಪ್‍ರೆಡ್ಡಿ, ಸಂದೀಪ್‍ಗೌಡ, ವೇಣು, ಕಿರಣ್, ಮುಳಬಾಗಿಲು ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಫಾರೂಖ್ ಪಾಷ, ಬಂಗಾರಿ ಮಂಜು, ರಾಜೇಶ್, ಸುನೀಲ್‍ಕುಮಾರ್, ಗುರುಮೂರ್ತಿ, ಭಾಸ್ಕರ್, ವೇಣು, ನವೀನ್ ಶ್ರೀಕಾಂತ್, ವರುಣ್, ತರುಣ್, ಜಗನ್, ವೇಣು, ರಾಧ, ಲಕ್ಷೀ, ಶೈಲ, ಮುಂತಾದವರಿದ್ದರು.